ಅಪರಾಧಕ್ಕೆ ಜಾತಿ ಬಣ್ಣ ಬಳಿಯುವುದೇಕೆ?
– ರಾಕೇಶ್ ಶೆಟ್ಟಿ
ಕಳೆದ ವಾರ ಎರಡು ಪ್ರಕರಣಗಳು ರಾಷ್ಟ್ರಮಟ್ಟದಲ್ಲಿ ಸುದ್ದಿಯಾದವು. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಬಿಎಸ್ಪಿ ನಾಯಕಿ ಮಾಯಾವತಿಯವರ ಬಗ್ಗೆ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದ ದಯಾಶಂಕರ್ ಮಾಡಿದ ಕೆಟ್ಟ ಟೀಕೆಯ ಪ್ರಕರಣ ಮೊದಲನೆಯದು.
ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ದಯಾಶಂಕರ್ ಮೇಲೆ BJP ಪಕ್ಷ ಆರು ವರ್ಷಗಳ ಕಾಲ ಉಚ್ಚಾಟನೆಯಂತಹ ಕಠಿಣ ಕ್ರಮ ಕೈಗೊಂಡಿದೆ. ಅವರ ಮೇಲೆ FIR ಕೂಡ ದಾಖಲಾಗಿದೆ. ಆದರೆ, ದಯಾಶಂಕರ್ ಅವರ ಮಗಳನ್ನು, ಮಡದಿಯನ್ನು ನಮಗೊಪ್ಪಿಸಿ ಎಂದಿರುವ BSP ನಾಯಕ ನಸೀಮುದ್ದೀನ್ ವಿರುದ್ಧ ಮಾಯಾವತಿ ಯಾವ ಕ್ರಮ ಕೈಗೊಂಡಿದ್ದಾರೆ ? ಎಷ್ಟು ಕೇಸುಗಳು ದಾಖಲಾಗಿವೆ ? ದಯಾಶಂಕರ್ ಅಕ್ರಮ ಸಂತಾನ ಎನ್ನುವ ಮೂಲಕ, ದಯಾಶಂಕರ್ ಅವರ ತಾಯಿಗೆ ಅವಮಾನ ಮಾಡಿದ BSP ಶಾಸಕಿ ಉಷಾ ಚೌಧರಿ ವಿರುದ್ಧ ಮಾಯಾವತಿ ಯಾವ ಕ್ರಮ ಕೈಗೊಂಡಿದ್ದಾರೆ ? ಎಷ್ಟು ಕೇಸುಗಳು ದಾಖಲಾಗಿವೆ ? ದಯಾಶಂಕರ್ ನಾಲಗೆ ಕತ್ತರಿಸಿ ತಂದವರಿಗೆ ಐವತ್ತು ಲಕ್ಷ ಕೊಡುತ್ತೇನೆ ಎಂದ BSP ಪಕ್ಷದ ನಾಯಕಿ ಜನ್ನತ್ ಜಹಾನ್ ಮೇಲೆ ಮಾಯಾವತಿ ಯಾವ ಕ್ರಮ ಕೈಗೊಂಡಿದ್ದಾರೆ ? ಕ್ರಮ ಕೈಗೊಳ್ಳುವುದು ಪಕ್ಕಕ್ಕಿರಲಿ. ಮಾಯವತಿಯವರು, ಅವರ ಕಾರ್ಯಕರ್ತರ ಘೋಷಣೆಗಳನ್ನು ಸಮರ್ಥಿಸಿಕೊಂಡಿದ್ದಾರೆ! ಮಾಯಾವತಿಯವರಿಗಾದರೆ ಮಾತ್ರ ನೋವು, ದಯಾಶಂಕರ್ ಅವರ ತಾಯಿ, ಮಗಳು, ಹೆಂಡತಿಗಾಗುವ ನೋವು ನೋವಲ್ಲವೇ? ಮತ್ತಷ್ಟು ಓದು