ವಿಷಯದ ವಿವರಗಳಿಗೆ ದಾಟಿರಿ

Archive for

6
ಆಗಸ್ಟ್

ಎಲ್ಲಿಯ ಹವಾಲ್ದಾರ್ ಜಪ್ಪು? ಎಲ್ಲಿಯ ಸದ್ದಾಂ ಹುಸೇನ್?

– ಸಂತೋಷ್ ತಮ್ಮಯ್ಯ

jappuಮೂರು ವರ್ಷದ ಹಿಂದೆ ಇಂಥದ್ದೇ ಒಂದು ಮಳೆಗಾಲದಲ್ಲಿ ಹವಾಲ್ದಾರ್ ಜಪ್ಪು ಬೆಂಗಳೂರಿನಲ್ಲಿ ಸಿಕ್ಕಿದ್ದರು. ಅಂದು ಜಪ್ಪು ಕಾರ್ಗಿಲ್ ವಿಜಯ್ ದಿವಸ್ ಆಚರಿಸಲು ತಮ್ಮ ಮೆಡಲುಗಳ ಸಮೇತ ಬೆಂಗಳೂರಿಗೆ ಬಂದುಬಿಟ್ಟಿದ್ದರು. ಅದಾದ ನಂತರ ಮತ್ತೆ ಮೊನ್ನೆ ಸಿಕ್ಕಿದ್ದರು. ಸಿಕ್ಕವರು ಈಗ ತಾನು ಊರಲ್ಲಿಲ್ಲವೆಂದೂ ದಕ್ಷಿಣ ಕೊಡಗಿನ ತಾವಳಗೇರಿ ಶೆಟ್ಟಿಗೇರಿ ಎಂಬ ಊರಲ್ಲಿರುವುದಾಗಿಯೂ ಬಾಡಿಗೆ ಮನೆಯೊಂದನ್ನು ಹಿಡಿದು ಮಗಳನ್ನು ಪ್ರೈಮರಿ ಓದಿಸುತ್ತಿದ್ದೇನೆಂದು ಹೇಳಿದ್ದರು. ಪುರುಸೋತ್ತಾದಾಗ ಒಮ್ಮೆ ಮನೆಗೆ ಬರಬೇಕೆಂದೂ ಹೇಳಿದ್ದರು. ಮೂರು ವರ್ಷಗಳ ಹಿಂದೆ ಇದ್ದ ಆ ದೊಡ್ಡ ಸ್ವರದ ರಭಸ ಕಿಂಚಿತ್ತೂ ಮಾಸಿರಲಿಲ್ಲ. ಗಡಸುತನ ಮಾಯವಾಗಿರಲಿಲ್ಲ. ಆದರೆ ಮಾತುಮಾತಿಗೆ ಆಕ್ರೋಶಗೊಳ್ಳುವ ಅವರ ಜಾಯಮಾನ ಮೂರು ವರ್ಷಗಳಲ್ಲಿ ಮೂರುಪಟ್ಟು ಹೆಚ್ಚಿದಂತೆ ಕಂಡುಬಂತು. ಮತ್ತಷ್ಟು ಓದು »