ವಿಷಯದ ವಿವರಗಳಿಗೆ ದಾಟಿರಿ

Archive for

7
ಆಗಸ್ಟ್

ಉಪನಿಷತ್ ವಾಙ್ಮಯ 1: ಮೃತ್ಯುಮುಖದಲ್ಲಿ ಜ್ಞಾನದಾಹಿ; ಕೇಳಿದ ಗುರುವನು “ದೇಹಿ! ದೇಹಿ!”

– ಸ್ವಾಮಿ ಶಾಂತಸ್ವರೂಪಾನಂದ

yama_nachiketaಉಪನಿಷತ್ ಎಂಬುದು ವೇದಕಾಲದ ಗದ್ಯಕಾವ್ಯ. ವಿದ್ಯೆ, ಜ್ಞಾನ, ಚಿಂತನೆಗಳು ಮುಪ್ಪುರಿಗೊಂಡ ಮನಸ್ಸುಗಳು ರಚಿಸಿದ ಅನನ್ಯ ಜೀವನಾಮೃತ ಸಾರ. ವೇದಗಳ ಒಟ್ಟರ್ಥವನ್ನು ಇವು ಸಂಗ್ರಹವಾಗಿ ತಿಳಿಸುತ್ತವೆ ಎನ್ನುವ ಕಾರಣಕ್ಕೆ ಇವನ್ನು ವೇದಾಂತ ಎಂದೂ ಕರೆಯುತ್ತಾರೆ. ಉಪನಿಷತ್ತುಗಳ ಸಾಲಿನಲ್ಲಿ ಅತಿವಿಶಿಷ್ಟವಾದದ್ದು ಕಠ. ಕೃಷ್ಣಯಜುರ್ವೇದದ ಕಠ ಪರಂಪರೆಯಲ್ಲಿ ಬರುವ ಈ ಉಪನಿಷತ್ತು ಗುರು-ಶಿಷ್ಯರ ಸಂವಾದದ ಒಂದು ಸಂಕ್ಷಿಪ್ತ ಚಿತ್ರಣ. ಗುರುಸ್ಥಾನದಲ್ಲಿ ಕೂತವನು ಸಾಕ್ಷಾತ್ ಯಮಧರ್ಮರಾಯ! ಮತ್ತು ಅವನೆದುರು ಶಿಷ್ಯನಾಗಿ ತಲೆಬಾಗಿ ವಿನೀತನಾಗಿ ಪವಡಿಸಿದವನು ಏಳೋ ಎಂಟೋ ವಯಸ್ಸಿನ ಮುದ್ದುಬಾಲಕ ನಚಿಕೇತ. ಪ್ರಪಂಚದ ಎರಡು ಧ್ರುವಗಳಂತಿರುವ ಈ ಇಬ್ಬರು ಜೊತೆಯಾದದ್ದು ಹೇಗೆ ಎಂಬುದೇ ಒಂದು ವಿಚಿತ್ರ ಕತೆ. ಕಠೋಪನಿಷತ್ತನ್ನು ಪ್ರವೇಶಿಸುವ ಮೊದಲು ನಮಗೆ ಆ ಹಿನ್ನೆಲೆ ತಿಳಿದಿದ್ದರೆ ಒಳ್ಳೆಯದು. ಮತ್ತಷ್ಟು ಓದು »