ನಂಬಿಕೆ, ನಿಷೇಧ, ಆಚರಣೆಗಳಲ್ಲಿ ಆಹಾರ
ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಇತ್ತೀಚಿನ ದಿನಗಳಲ್ಲಿ ಆಹಾರ ಪದ್ಧತಿ ಕುರಿತು ಬಹಳಷ್ಟು ಚರ್ಚೆ ರಾಷ್ಟ್ರಮಟ್ಟದಲ್ಲಿ ಆಗಾಗ ನಡೆಯುತ್ತದೆ. ದನ ಕದಿಯುವ ಹಾಗೂ ಅದನ್ನು ರಕ್ಷಿಸುವ ಗುಂಪುಗಳ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ಪ್ರಧಾನಿ ಮೋದಿ “ಸೋ ಕಾಲ್ಡ್ ಗೋರಕ್ಷಕರ” ವಿರುದ್ಧ ಗುಡುಗುತ್ತಿದ್ದಂತೆಯೇ ಮತ್ತೆ ಇಂಥ ಚರ್ಚೆ ಶುರುವಾಗಿದೆ. ಈ ಚರ್ಚೆಗಳಲ್ಲಿ ಮೇಲ್ನೋಟದಲ್ಲಿ ಬಹುಸಂಖ್ಯಾತರ ಆಹಾರ ಕ್ರಮವನ್ನು ಅಲ್ಪ ಸಂಖ್ಯಾತರ ಮೇಲೆ ಹೇರುವ ಹುನ್ನಾರ; ದಲಿತರು ಹಾಗೂ ಅಲ್ಪಸಂಖ್ಯಾತರ ಆಹಾರ ಪದ್ಧತಿಯನ್ನು ಪುರೋಹಿತಶಾಹಿ ವ್ಯವಸ್ಥೆ ಆಳುತ್ತಿರುವ ಸಂಕೇತ ಎಂದೂ, ಬ್ರಾಹ್ಮಣರನ್ನು ಬಿಟ್ಟರೆ ಬೇರೆ ಸಾವಿರಾರು ಜಾತಿ-ಸಮುದಾಯಗಳಿಗೆ ಆಹಾರ ಸಂಬಂಧಿ ವಿಧಿ-ನಿಷೇಧಗಳೇ ಇಲ್ಲ ಎಂಬಂತೆಯೂ ಬಿಂಬಿಸಲಾಗುತ್ತಿದೆ. ಅಷ್ಟೇ ಅಲ್ಲ, ಆಹಾರ ಸೇವಿಸುವಾಗಲೂ ಬ್ರಾಹ್ಮಣರು ಮಾತ್ರ ಅನ್ಯರನ್ನು ಸಹಪಂಕ್ತಿ ಭೋಜನದಲ್ಲಿ ಕೂರಿಸಿಕೊಳ್ಳುವುದಿಲ್ಲ, ಉಳಿದವರಲ್ಲಿ ಇಂಥ ಸಂಪ್ರದಾಯವಿಲ್ಲ ಎಂಬಂತೆಯೂ ಬಿಂಬಿಸುತ್ತ, ಇವೆಲ್ಲ ಜಾತಿಪದ್ಧತಿಯನ್ನು ಬಲಗೊಳಿಸುವ ಪುರೋಹಿತಶಾಹಿಯ ಹುನ್ನಾರ ಎಂದೂ ಸರಳವಾಗಿ ವಾದಿಸಲಾಗುತ್ತದೆ. ಆದರೆ ಇವೆಲ್ಲ ಹಾಗೆ ವಾದಿಸುವವರ ವಿವಿಧ ಸಮುದಾಯಗಳ ಆಹಾರ ಸಂಬಂಧಿ ಅಜ್ಞಾನವನ್ನು ತೋರಿಸುತ್ತದೆಯಲ್ಲದೇ ಇನ್ನೇನನ್ನೂ ಅಲ್ಲ. ಇಂಥ ತಿಳಿವಳಿಕೆಯನ್ನು ತಲೆಕೆಳಗಾಗಿಸುವ ಕ್ಷೇತ್ರಾಧಾರಿತ ಅಧ್ಯಯನದ ಫಲಿತ ಹಾಗೂ ವಾಸ್ತವ ಇಲ್ಲಿದೆ. ಇದು ತುಮಕೂರು ಜಿಲ್ಲೆಯ ಸಾಂಪ್ರದಾಯಿಕ ಆಹಾರ ಪದ್ಧತಿ ಕುರಿತ ಯೋಜನೆಯೊಂದನ್ನು ಆಧರಿಸಿದೆ. ಮತ್ತಷ್ಟು ಓದು
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
(ಮರೆತು ಮರೆಯಾಗಿರುವ ಸ್ವಾತಂತ್ರ್ಯ ವೀರರನ್ನು ನೆನೆಸಿಕೊಮ್ಡು ಗೌರವ ಸಲ್ಲಿಸುವ ಹಾಗೂ ಅವರ ಕುರಿತ ಮಾಹಿತಿಗಳನ್ನು ಜನರಿಗೆ ತಲುಪಿಸುವ ಸದುದ್ದೇಶದಿಂದ ರಾಮಚಂದ್ರ ಹೆಗಡೆಯವರು “ಸುಮ್ಮನೇ ಬರಲಿಲ್ಲ ಸಾತಂತ್ರ್ಯ” ಎಂಬ ಈ ಬರಹ ಸರಣಿಯನ್ನು ಪ್ರಾರಂಭಿಸಿದ್ದಾರೆ. ಕೆಲವು ಲೇಖನಗಳಿಗೆ ಮಾಹಿತಿಗಳನ್ನು ವಿವಿಧ ವೆಬ್ಸೈಟುಗಳ ಮೂಲಕ ಪಡೆದಿದ್ದರೆ, ಉಳಿದಂತೆ ತಾವು ಓದಿಕೊಂಡಿರುವುದನ್ನು ದಾಖಲಿಸಿದ್ದಾರೆ. ಈ ಸರಣಿ ನಿಲುಮೆಯ ಓದುಗರಿಗಾಗಿ – ಸಂಪಾದಕರು, ನಿಲುಮೆ)
– ರಾಮಚಂದ್ರ ಹೆಗಡೆ
ಆಗಸ್ಟ್ ತಿಂಗಳೆಂದರೆ ಭಾರತೀಯರಿಗೆ ವಿಶೇಷವಾದ ತಿಂಗಳು. ಪರಕೀಯರ ಆಳ್ವಿಕೆಯಿಂದ, ದಾಸ್ಯದ ಸಂಕೋಲೆಯಿಂದ ದೇಶ ಬಿಡುಗಡೆಗೊಂಡ ತಿಂಗಳಿದು. ಆದರೆ ಆ ಸ್ವಾತಂತ್ರ್ಯ ಅಷ್ಟು ಸುಲಭಕ್ಕೆ ದಕ್ಕಿದ್ದಲ್ಲ. ಅದರ ಹಿಂದೆ ಲಕ್ಷಾಂತರ ಜನರ ತ್ಯಾಗ ಬಲಿದಾನಗಳಿವೆ. ಸ್ವಾತಂತ್ರ್ಯ ಬಂದ ಅರವತ್ತೇ ವರ್ಷದಲ್ಲಿ ನಾವು ಅವರೆಲ್ಲರನ್ನೂ ಮರೆತೇಬಿಟ್ಟಿದ್ದೇವೆ. ನಮ್ಮ ಇಂದಿಗಾಗಿ ತಮ್ಮ ನಾಳೆಗಳನ್ನು ಬಲಿಕೊಟ್ಟವರನ್ನು ಕನಿಷ್ಠ ಈ ತಿಂಗಳಾದರೂ ನೆನೆಯಬೇಕಾದ್ದು ನಮ್ಮೆಲ್ಲರ ಕರ್ತವ್ಯ ಅಲ್ವಾ?. ದಿನಕ್ಕೊಬ್ಬ ದೇಶಭಕ್ತನನ್ನು ನೆನಪಿಸಿಕೊಳ್ಳುವ ಪ್ರಯತ್ನವಿದು. ಭಾರತೀಯ ಸ್ವಾತಂತ್ರ್ಯ ಹಬ್ಬದ ಈ ತಿಂಗಳಲ್ಲಿ ದೇಶಕ್ಕಾಗಿ ಅಮರರಾದ ವೀರರನ್ನು ಸ್ಮರಿಸುವ ಸರಣಿ ಇದು. ಇದು ಮರೆತವರನ್ನು ನೆನೆಯುವ ಪ್ರಯತ್ನ. ದೇಶಭಕ್ತರ ಕುರಿತ ಮಾಹಿತಿಗಳನ್ನು ಜೋಡಿಸುವ ಕೆಲಸವಷ್ಟೇ ನಮ್ಮದು. ಇದನ್ನು ಹೆಚ್ಚು ಜನರಿಗೆ ತಲುಪಿಸಿ. ಈ ರಾಷ್ಟ್ರಜಾಗೃತಿಯ ಆಂದೋಲನದಲ್ಲಿ ಕೈಜೋಡಿಸಿ.
ಈ ದಿನದ ಸ್ಮರಣೆ: *ರಾಣಿ ಗಾಯಡಿನ್ ಲೂ*
======================
ರಾಣಿ ಗಾಯಡಿನ್ ಲೂ: ಹೆಸರು ಕೇಳಿದರೆ ಇದು ಯಾರೋ ಬ್ರಿಟಿಷ್ ವ್ಯಕ್ತಿ ಅನ್ನಿಸಬಹುದು. ಆದರೆ ಈ ರಾಣಿ ಗಾಯಡಿನ್ ಲೂ ಈಶಾನ್ಯ ರಾಜ್ಯ ನಾಗಲ್ಯಾಂಡ್ ನ ಆಧ್ಯಾತ್ಮಿಕ ಹಾಗೂ ರಾಜಕೀಯ ಹೋರಾಟದ ನಾಯಕಿಯಾಗಿದ್ದ, ಬ್ರಿಟಿಷ್ ಆಡಳಿತದ ವಿರುದ್ಧ ಈಶಾನ್ಯ ರಾಜ್ಯದಲ್ಲಿ ದಂಗೆ ಎಬ್ಬಿಸಿದ ದಿಟ್ಟ ಮಹಿಳೆ. ತನ್ನ 12ನೇ ವಯಸ್ಸಿಗೇ ಹೋರಾಟಕ್ಕೆ ಧುಮುಕಿ 16ನೇ ವಯಸ್ಸಿಗೆ ಜೀವಾವಧಿ ಶಿಕ್ಷೆಗೆ ಗುರಿಯಾದ ಈಕೆಯ ಕೇವಲ 4 ವರ್ಷಗಳ ಹೋರಾಟದ ತಾಕತ್ತು ಎಂಥದ್ದು ಎಂದು ತಿಳಿದರೆ ಅಚ್ಚರಿ ಎನಿಸುತ್ತದೆ. ಬ್ರಿಟಿಷರ ವಿರುದ್ಧ ಹೋರಾಟ ಅಷ್ಟೇ ಅಲ್ಲದೇ ನಾಗಾ ಜನರಲ್ಲಿ ತಮ್ಮ ಸ್ವಧರ್ಮದ ಬಗ್ಗೆ ಕೀಳರಿಮೆ ಹೊಡೆದೋಡಿಸಿ ಅಭಿಮಾನ ಮೂಡುವಂತೆ ಮಾಡಿದರು. ಪ್ರತಿಯೊಂದು ವನವಾಸಿ ಸಮುದಾಯದ ಬಳಿ ತೆರಳಿ ಬ್ರಿಟಿಷರ ಕುತಂತ್ರದ ಕುರಿತು ಮುಗ್ಧ ಜನರಿಗೆ ತಿಳಿ ಹೇಳಿದರು. ಗಾಯಡಿನ್ ಲೂರಿಂದ ಆಕರ್ಷಿತರಾದ ವನವಾಸಿ ಮಹಿಳೆಯರು ಒಂದು ಸೇನಾ ಪಡೆಯನ್ನೇ ಕಟ್ಟಿದರು. ಇದರಿಂದ ಉತ್ಸಾಹಿತಳಾದ ಗಾಯಡಿನ್ ಲೂ ಅವರಿಗೆ ಸಾಂಪ್ರದಾಯಿಕ ಮದ್ದುಗುಂಡುಗಳ ತಯಾರಿಕೆ, ಬಂದೂಕು ತರಬೇತಿಯನ್ನು ಕೊಟ್ಟಳು. ಮುಂದೆ ಬ್ರಿಟಿಷರ ವಿರುದ್ಧ ಗೆರಿಲ್ಲಾ ಯುದ್ಧವನ್ನು ಮಾಡಿದಳು. ಇವಳ ರಣನೀತಿಯಿಂದ ಬ್ರಿಟಿಷರು ತತ್ತರಿಸಿಹೋಗಿದ್ದರು. ಬ್ರಿಟಿಷರಿಗೆ ಸಿಂಹಸ್ವಪ್ನ ವಾಗಿದ್ದ ಈಕೆ ಬ್ರಿಟಿಷರ ತಂತ್ರಗಳನ್ನೆಲ್ಲಾ ಕ್ಷೀಣಿಸುವಂತೆ ಮಾಡಿದಳು. ಧರ್ಮ ರಕ್ಷಣೆ ಮತ್ತು ಬ್ರಿಟಿಷರನ್ನು ಭಾರತ ಬಿಟ್ಟು ಓಡಿಸಿ ಎನ್ನುವ ವಿಷಯವಿಟ್ಟುಕೊಂಡು ಹೋರಾಟ ಮಾಡಿದಳು. ಇವಳಿಗೆ ಹೇಗಾದರು ಮಾಡಿ ಕಡಿವಾಣ ಹಾಕಬೇಕು ಎಂದು ನಿರ್ಧರಿಸಿದ ಬ್ರಿಟಿಷ ಸರಕಾರ ಆ ರಾಜ್ಯಗಳಿಗೆ ತನ್ನ ಸೈನ್ಯವನ್ನೇ ಕಳುಹಿಸಿಕೊಟ್ಟಿತು. ಅಷ್ಟೇ ಅಲ್ಲದೇ ಆ ಕಾಲದಲ್ಲಿಯೇ ಅವಳ ಸುಳಿವು ನೀಡಿದವರಿಗೆ 400ರೂ. ಬಹುಮಾನದ ಜೊತೆಗೆ ಸರಕಾರದ ಸುಂಕವನ್ನು ಮನ್ನಾ ಮಾಡುವದಾಗಿ ಆಮಿಷ ತೋರಿಸಿತು. ಬ್ರಿಟಿಷರು ಎಂದಿನಂತೆ ತಮ್ಮ ಕುತಂತ್ರ ಬುದ್ಧಿಯ ಮೂಲಕ ಗಾಯಿಡಿನ್ ಲೂ ಆಪ್ತರಿಗೆ ಆಮಿಷವೊಡ್ಡಿ ಅವಳ ಸುಳಿವು ಪತ್ತೆಹಚ್ಚಿತು. ಇಬ್ಬರ ಮಧ್ಯೆ ದೊಡ್ಡ ಯುದ್ಧವೇ ನಡೆದುಹೋಯಿತು. ಕೊನೆಗೆ 1932ರ ಅಕ್ಟೋಬರ್ 12 ರಂದು ಗಾಯಿಡಿನ್ ಲೂ ಮೇಲೆ ವಿವಿಧ ಸುಳ್ಳು ಆರೋಪವನ್ನು ಹೊರಿಸಿ, ಸಂಬಂಧವೇ ಇಲ್ಲದ ಕೊಲೆ ಅರೋಪವನ್ನು ತಲೆಗೆ ಕಟ್ಟಿ ಬಂಧಿಸಲಾಯಿತು. ಮತ್ತಷ್ಟು ಓದು