ವಿಷಯದ ವಿವರಗಳಿಗೆ ದಾಟಿರಿ

Archive for

12
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 3
ಸದ್ಗುರು ರಾಮಸಿಂಗ್ ಕೂಕಾ
– ರಾಮಚಂದ್ರ ಹೆಗಡೆ

download (1)ದೇಶದ ಸ್ವಾತಂತ್ರ್ಯ ಇತಿಹಾಸದಲ್ಲಿ ಪಂಜಾಬಿ ಸಿಖ್ಖರ ಪಾತ್ರ ಬಹಳ ದೊಡ್ಡದು. ಅಪ್ರತಿಮ ದೇಶಭಕ್ತರ ಸಂಪ್ರದಾಯವದು. ಇಂದಿಗೂ ಭಾರತೀಯ ಸೈನ್ಯದಲ್ಲಿ ಸಿಖ್ ರೆಜಿಮೆಂಟ್ ಎಂದರೆ ಪರಮ ಪರಾಕ್ರಮಿಗಳ ದಂಡು. ಅಂತಹ ಪಂಜಾಬಿ ಸಿಖ್ಖರ ‘ನಾಮಧಾರಿ ಸಂಪ್ರದಾಯ’ ಅಥವಾ ‘ಕೂಕಾ ಪಂಥ’ ದ ಸ್ಥಾಪಕ ಸದ್ಗುರು ರಾಮಸಿಂಗ್ ಕೂಕಾ. ಮೂಲತಃ ಬಡಗಿ ವೃತ್ತಿಯ ಕುಟುಂಬದ ರಾಮಸಿಂಗ್ ತಾನೂ ತನ್ನ ತಂದೆಯ ಬಡಗಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ನೆರವಾಗುತ್ತಿದ್ದ. ಆದರೆ ಮಿತಿಮೀರಿದ ಬ್ರಿಟಿಷರ ದೌರ್ಜನ್ಯ ಹಾಗೂ ಅಲ್ಲಿಯ ಜನರ ನಿರಭಿಮಾನ ಅವನನ್ನು ರೊಚ್ಚಿಗೆಬ್ಬಿಸಿತು. ಇದೇ ಸಂದರ್ಭವನ್ನು ಉಪಯೋಗಿಸಿಕೊಂಡ ಮಿಷನರಿಗಳು ಮತಾಂತರದಲ್ಲಿ ನಿರತರಾಗಿದ್ದವು. ಇದನ್ನೆಲ್ಲಾ ಕಂಡ ರಾಮಸಿಂಗ್ ಜನರನ್ನು ಆಧ್ಯಾತ್ಮಿಕವಾಗಿ ಮೇಲ್ಮಟ್ಟಕ್ಕೆ ಒಯ್ಯುವ, ಅವರೊಳಗೆ ದೇಶಾಭಿಮಾನ ಬೆಳೆಸುವ, ಧಾರ್ಮಿಕ, ಸಾಮಾಜಿಕ, ರಾಜಕೀಯ ಜನಜಾಗೃತಿ ನಿರ್ಧಾರದಿಂದ ಕೂಕಾ ಪಂಥವನ್ನು ಆರಂಭಿಸಿದ. ರಾಮಸಿಂಗ್ ಸದ್ಗುರು ರಾಮಸಿಂಗ್ ಆದ. ರಾಮಸಿಂಗ್ ನ ಕೂಕಾ ಪಂಥದ ಪ್ರಸಿದ್ಧಿ ಎಲ್ಲೆಡೆಗೆ ಹರಡಿ ಸಾವಿರಾರು ಜನ ಈ ಪಂಥಕ್ಕೆ ಸೇರ್ಪಡೆಯಾದರು. ಪಂಜಾಬ ಪ್ರಾಂತದ ೨೧ ಜಿಲ್ಲೆಗಳಲ್ಲೂ ಕೂಕಾಗಳ ಚಟುವಟಿಕೆಗಳ ಜಾಲ ಹಬ್ಬಿತು. ಮತ್ತಷ್ಟು ಓದು »