ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 20:
ಬಿನೋಯ್ ಬಾದಲ್ ದಿನೇಶ್:
– ರಾಮಚಂದ್ರ ಹೆಗಡೆ
ಭಾರತ ಸ್ವಾತಂತ್ರ್ಯ ಸಮರದ ಪುಟಗಳನ್ನು ತೆರೆಯುತ್ತಾ ಹೋದಂತೆ ಅಲ್ಲಿ ಒಂದಕ್ಕಿಂತ ಒಂದು ರೋಚಕ ಅಧ್ಯಾಯವನ್ನು ಕಾಣುತ್ತ ಹೋಗಬಹುದು. ದೇಶವನ್ನು ದಾಸ್ಯದ ಕಪಿಮುಷ್ಟಿಯಿಂದ ರಕ್ಷಿಸಲು ಈ ದೇಶದ ಬಿಸಿರಕ್ತದ ಯುವಕರು ಜೀವ ನೀಡಲಿಕ್ಕೂ ಹಿಂದೇಟು ಹಾಕದ ಸ್ಪೂರ್ತಿದಾಯಕ ಸಾಹಸಗಾಥೆ ನಮಗಲ್ಲಿ ಸಿಗುತ್ತವೆ. ದೇಶದ ರಕ್ಷಣೆಯ ವಿಚಾರ ಬಂದಾಗ ರಕ್ತವೇನು, ಜೀವವನ್ನೂ ಕೊಟ್ಟೇವು ಎಂದಿದ್ದಷ್ಟೇ ಅಲ್ಲ, ಸ್ವಯಂ ತಮ್ಮನ್ನು ಅರ್ಪಿಸಿಕೊಂಡು ನಗುನಗುತ್ತಾ ನೇಣುಗಂಬವೇರಿದ ರೋಮಾಂಚಕಾರಿ ಸಾಹಸಗಳು ಸ್ವಾತಂತ್ರ್ಯ ಸಮರದ ಇತಿಹಾಸವನ್ನು ರಕ್ತರಂಜಿತವಾಗಿ, ವರ್ಣರಂಜಿತವಾಗಿ ಮಾಡಿವೆ. ಬಂಗಾಳದ ಈ ಮೂವರು ಬಿಸಿರಕ್ತದ ದೇಶಪ್ರೇಮಿ ತರುಣರು ಬಿನೋಯ್ ಬಸು, ಬಾದಲ್ ಗುಪ್ತಾ, ದಿನೇಶ್ ಗುಪ್ತಾ ಹಾಗೆ ಸ್ವಾತಂತ್ರ್ಯದ ಕನಸಿನಲ್ಲಿ ಕ್ರಾಂತಿಯ ಕಹಳೆ ಊದಿ ಸಾವಿನ ಕದ ತಟ್ಟಿದಾಗ ಅವರಿಗಿನ್ನೂ 22, 19, 18 ವರ್ಷಗಳಷ್ಟೇ. ಮತ್ತಷ್ಟು ಓದು
ಇದು ಹೆಣ್ಣಿನ ಕಥೆ
– ಗೀತಾ ಹೆಗ್ಡೆ
ಅವಳಿಗೆ ಕೇವಲ ಹದಿಮೂರು ವರ್ಷ. ಹುಟ್ಟೂರು ಪುತ್ತೂರು, ಉಡುಪಿ ತಾಲ್ಲೂಕು. ಅವಳಿಗೆ ಮದುವೆ ಗಂಡು ಗೊತ್ತಾಯಿತು. ಅವನಿಗೆ ವಯಸ್ಸು ಮೂವತ್ತೆರಡು. ಅವನ ಊರು ಉತ್ತರ ಕನ್ನಡದ ಒಂದು ಚಿಕ್ಕ ಹಳ್ಳಿ. ಆಗ ಮದುವೆಗೆ ಹೆಣ್ಣಿನ ಬರ. ತಿರಾ ಕೊಟ್ಟು(ವಧು ದಕ್ಷಿಣೆ ) ಹೆಣ್ಣನ್ನು ಮದುವೆ ಆಗುತ್ತಿದ್ದರಂತೆ. ಇನ್ನೂ ದೊಡ್ಡವಳಾಗಿಲ್ಲ; ಆಗಲೇ ಮದುವೆ ಮಾಡಿದರು. ಮೈ ತುಂಬಾ ಒಡವೆ ಗೆಜ್ಜೆಟಿಕ್ಕಿ, ತೋಳಬಂಧಿ, ಸೊಂಟಕ್ಕೆ ಬೆಳ್ಳಿ ಡಾಬು, ಕಿವಿ ಓಲೆ ಬುಗುಡಿ, ಕೈ ತುಂಬಾ ಬಳೆಗಳು ಇನ್ನೂ ಮುಂತಾದ ಆಭರಣ ಸುಂದರಿ. ದಕ್ಷಿಣದಿಂದ ಉತ್ತರಕ್ಕೆ ಅವಳ ಪಯಣ. ಗೊತ್ತಿಲ್ಲದ ಊರು. ಶಾಸ್ತ್ರ ಸಂಪ್ರದಾಯದ ಮನೆ. ಒಟ್ಟು ಕುಟುಂಬ. ಗಂಡನ ಮನೆ ಸೇರಿದಳು ವರ್ಷ ಹದಿನಾಲ್ಕಕ್ಕೆ ದೊಡ್ಡವಳಾಗಿ. ಅವಳ ಭಾಷೆ ತುಳು. ಶಿವಳ್ಳಿ ಬ್ರಾಹ್ಮಣ ಕುಟುಂಬದವಳು. ನಿಧಾನವಾಗಿ ಕನ್ನಡ ಭಾಷೆ ಕಲಿತಳು. ಹದಿನಾರರ ವಯಸ್ಸಿನಲ್ಲಿ ಗಂಡು ಮಗುವಿನ ಜನನ. ಮಗಳು ಬಾಳಂತನ ಮುಗಿಸಿಕೊಂಡು ಗಂಡನ ಮನೆ ಸೇರಿದಳು. ಮತ್ತಷ್ಟು ಓದು