ವಿಷಯದ ವಿವರಗಳಿಗೆ ದಾಟಿರಿ

Archive for

10
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 24:
ವಿದುರಾಶ್ವತ್ಥದ ಬಲಿದಾನಿಗಳು
– ರಾಮಚಂದ್ರ ಹೆಗಡೆ

image012ಸ್ವಾತಂತ್ರ್ಯ ಸಮರದಲ್ಲಿ ಕರ್ನಾಟಕದಲ್ಲಿ ನಡೆದ ಅತೀ ಭೀಕರ ಹತ್ಯಾಕಾಂಡಗಳಲ್ಲಿ ಒಂದಾದ ‘ವಿದುರಾಶ್ವತ್ಥದ ಬಲಿದಾನ’ ಕರ್ನಾಟಕದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೂ ಹೆಸರಾಗಿದೆ. ಒಬ್ಬ ಗರ್ಭಿಣಿಯೂ ಸೇರಿದಂತೆ 32 ಜನ ದೇಶಭಕ್ತರು ಬ್ರಿಟಿಷರ ಗುಂಡಿಗೆ ಬಲಿಯಾಗಿ ಪ್ರಾಣಾರ್ಪಣೆ ಮಾಡಿದ್ದು, ಈ ನೆಲದ ಜನರ ಅಪ್ರತಿಮ ದೇಶಭಕ್ತಿಗೆ ಹಾಗೂ ಬ್ರಿಟಿಷ್ ಆಡಳಿತದ ಬರ್ಬರತೆಗೆ ಸಾಕ್ಷಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕ್ಷೇತ್ರ ‘ವಿದುರಾಶ್ವತ್ಥ’ ದೇಶದ ಸ್ವಾತಂತ್ರ್ಯ ಹೋರಾಟಗಾರರ ಚಳುವಳಿಯ ಕೇಂದ್ರವಾಗಿತ್ತೆಂಬುದು ಗಮನಾರ್ಹ ಸಂಗತಿ. ಮಹಾಭಾರತ ಕಾಲದಲ್ಲಿ ವಿದುರ ನೆಟ್ಟಿದ್ದನೆಂದು ನಂಬಲಾಗುವ ಅಶ್ವತ್ಥ ವೃಕ್ಷ ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಬ್ರಿಟಿಷರ ಪೈಶಾಚಿಕ ದೌರ್ಜನ್ಯಕ್ಕೂ ಸಾಕ್ಷಿಯಾಗಿದ್ದು ದುರಂತದ ಸಂಗತಿ. ಮತ್ತಷ್ಟು ಓದು »

10
ಸೆಪ್ಟೆಂ

ಜಮ್ಮು-ಕಾಶ್ಮೀರ (ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು)

ನಿಲುಮೆ ತಂಡ ನಡೆಸಿದ ಕಾಶ್ಮೀರದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಪ್ರೊ.ಪ್ರೇಮಶೇಖರವರ ಮಾತುಗಳನ್ನು ಶೋಭ ರಾವ್ ರವರು ಅಕ್ಷರ ರೂಪಕ್ಕಿಳಿಸಿದ್ದಾರೆ. ಅಂದಿನ ಕಾರ್ಯಕ್ರಮದ ವಿಚಾರಗಳು ಈಗ ನಿಲುಮೆಯ ಓದುಗರ ಮುಂದೆ..

14088692_10154596775090649_5386569408904041755_nಕಾಶ್ಮೀರದ ಬಗ್ಗೆ ಇಂದು ಹಲವಾರು ಜನ ತಮ್ಮ ಅಲ್ಪಜ್ಞಾನದಿಂದ ಹಲವಾರು ತರಹ ಮಾತಾಡುತ್ತಾರೆ. ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ದುರಂತವೆಂದರೆ ಅದನ್ನು ಕೇಳಲು ಕೂಡ ಬಹಳಷ್ಟು ಜನರಿದ್ದಾರೆ. ನಾವು ಅವರ ಬಳಿ ಹೋಗಿ ಬೀದಿ ಜಗಳ ಮಾಡಬೇಕಿಲ್ಲ. ವಸ್ತುನಿಷ್ಠ ಚರ್ಚೆಯನ್ನು ಏರ್ಪಡಿಸಿ ನಿಜಸಂಗತಿಗಳನ್ನ ತಿಳಿಸಿದರೆ ಸಾಕು. ಕಾಶ್ಮೀರ ನಮ್ಮದೂ ಎಂದು ಭಾರತವೂ ಹೇಳುತ್ತೆ, ಪಾಕಿಸ್ತಾನವೂ ಹೇಳುತ್ತೆ. ನಾವು ಇವೆರೆಡಕ್ಕೂ ಸೇರಿಲ್ಲ ಎಂದು ಮತ್ತೊಂದು ಗುಂಪು ಕೂಡ ಹೇಳುತ್ತೆ. ಇದೇ ಕಾಶ್ಮೀರದ ನಿಜವಾದ ಸಮಸ್ಯೆ. ಮತ್ತಷ್ಟು ಓದು »

10
ಸೆಪ್ಟೆಂ

ಅಂತ್ಯದ ಬೆನ್ನೇರಿ…!

-ವಿನಾಯಕ ಪೈ ಬಿ
mudra-e1446143388978ಒಂದು ಸುಸಂಸ್ಕೃತ ಸಮಾಜ ಎಂದರೆ ವ್ಯಕ್ತಿಗತ ಚಿಂತನೆಗಳ, ಸಾಮಾಜಿಕ ಸ್ಥಿತ್ಯಂತರಗಳ, ಧಾರ್ಮಿಕ ಆಚರಣೆ, ಆಧ್ಯಾತ್ಮಿಕ ನಂಬಿಕೆಗಳ ಮತ್ತು ಅದರ ಕಾಲಾಂತರ್ಗತ ಪರಿಷ್ಕರಣೆಗಳ ಸಮ್ಮಿಲನವೇ ಆಗಿದೆ. ಈ ಸಮ್ಮಿಲನದಲ್ಲಿ ಯಾವುದಾದರು ಒಂದನ್ನು ನಿರ್ಲಕ್ಷಿಸಿದರು, ಸುಜ್ಞಾನದ ಕೊರತೆ ಸಮಾಜದ ಬೆಳವಣಿಗೆಯ ಮೇಲೆ ತೀವ್ರವಾಗಿ ಪ್ರತಿಫಲಿಸುತ್ತದೆ. ಮಾನವೀಯ ಮೌಲ್ಯಗಳು, ಸದ್ವಿಚಾರಗಳ ಸಾಂಗತ್ಯವೇ ನಮ್ಮ ಸಮೂಹದ ಅಂತಃಸತ್ವ. ಧಾರ್ಮಿಕ ಮತ್ತು ಆಧ್ಯಾತ್ಮಿಕ  ಚಿಂತನೆಗಳೇ ಸಮಾಜಕ್ಕೆ ಭದ್ರಬುನಾಧಿಯನ್ನು ಒದಗಿಸಿ, ಸಾಮಾಜಿಕ ಚಿಂತನೆಗಳು ಸದ್ಭಾವನೆಯ ಮೆಟ್ಟಿಲುಗಳಾಗಿ, ಮನುಕುಲವನ್ನು ಏಳಿಗೆಯತ್ತ ಕೊಂಡೊಯ್ಯುತ್ತದೆ . ಮತ್ತಷ್ಟು ಓದು »