ವಿಷಯದ ವಿವರಗಳಿಗೆ ದಾಟಿರಿ

Archive for

26
ಸೆಪ್ಟೆಂ

ರಾಜಕೀಯದಲ್ಲಿ ಚಾಣಾಕ್ಷರೂ ಸಹ ಅಪ್ರಸ್ತುತರಾಗಲು, ಒಂದು ತಲೆಕೆಟ್ಟ ನಿರ್ಧಾರ ಸಾಕು||

– ರಾಘವೇಂದ್ರ ನಾವಡ
ki28lotus_jpg_g_ki_2599608fಏನೇ ಹೇಳಿ… ರಾಜ್ಯ ರಾಜಕೀಯದಲ್ಲಿ ದೇವೇಗೌಡರನ್ನು “ಫೀನಿಕ್ಸ್” ಅಂತ ಯಾಕೆ ಕರೀತಾರೆ? ಅನ್ನೋದಕ್ಕೆ ಮತ್ತೊಮ್ಮೆ ನಿದರ್ಶನ ದೊರಕಿತು! ತನ್ನ ಮುಂಪಡೆ ನಾಯಕರ ಸೋಮಾರಿತನ, ಅಂತಃಕಲಹ, ಅಹಂಕಾರ ಮುಂತಾದವುಗಳಿಂದ ಮಕಾಡೆ ಮಲಗಿದ್ದ ಜಾತ್ಯಾತೀತ ಜನತಾದಳ, ತನ್ನ ಮೇರು ಪ್ರಭೃತಿ ದೇವೇಗೌಡರು ತೆಗೆದುಕೊಂಡ ಒಂದು ಚಾಣಾಕ್ಷತನದ ನಿರ್ಧಾರದಿಂದ ಕುಂಭಕರ್ಣ ನಿದ್ರೆಯಿಂದ ದಢಾಲ್ಲನೆ ಎದ್ದರೆ, ಯಡಿಯೂರಪ್ಪನವರ ನಾಯಕತ್ವದಲ್ಲಿ ಸ್ವಲ್ಪ-ಸ್ವಲ್ಪವೇ ಮೇಲೇಳುತ್ತಿದ್ದ (ಇಲ್ಲಿಯೂ ಅಂತಃ ಕಲಹವಿದೆ. ಆದರೆ ನಾಯಕರು ಸ್ವಲ್ಪ ಚುರುಕಾಗಿದ್ದರು) ರಾಜ್ಯ ಭಾಜಪಾ, ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆದಿದ್ದ ಸರ್ವಪಕ್ಷ ಸಭೆಯನ್ನು ಬಹಿಷ್ಕರಿಸುವುದರ ಮೂಲಕ ಮಕಾಡೆ ಮಲಗಿತು!! ಒಬ್ಬರು ಫೀನಿಕ್ಸ್ ನಂತೆ ಎದ್ದರೆ ಮತ್ತೊಬ್ಬರು ಶವದಂತೆ ಬಿದ್ದರು!! ಮತ್ತಷ್ಟು ಓದು »

26
ಸೆಪ್ಟೆಂ

ನಾನು – ನನ್ನದು

-ಗೀತಾ ಹೆಗ್ಡೆ

ego-as-baggageಪ್ರತಿಯೊಬ್ಬರ ಮನದಲ್ಲೂ ಅಡಗಿಕೊಂಡಿರುವ ಆತ್ಮಾಭಿಮಾನವೊ ಅಥವಾ ನನ್ನದು ಅನ್ನುವ ಅಹಂಕಾರವೊ ಗೊತ್ತಿಲ್ಲ. ಆದರೆ ಯಾವುದು ನನ್ನದು ಎಂಬ ಭ್ರಮೆ ಎಲ್ಲಿಯವರೆಗೆ ನಮ್ಮ ಮನಸ್ಸಿನಲ್ಲಿ ಮನೆ ಮಾಡಿರುತ್ತೋ ಅಲ್ಲಿಯವರೆಗೆ ಅದರ ಹುಳುಕು ನಮಗೆ ಗೊತ್ತಾಗೋದೆ ಇಲ್ಲ. ಒಂದಾ ಶಾಂತವಾಗಿ ಕುಳಿತು ಯಾವ ತಾರತಮ್ಯವಿಲ್ಲದೆ ವಿಮರ್ಷಿಸುವ ಬುದ್ಧಿ ಹೊಂದಿರಬೇಕು. ಇಲ್ಲಾ ಬೇರೆಯವರು ಬೊಟ್ಟು ಮಾಡಿ ತೋರಿಸಿದಾಗ ಇದು ಸರಿಯಿಲ್ಲ ಅಥವಾ ನಿನ್ನಲ್ಲಿ ದೋಷವಿದೆ ಎಂದೆನ್ನುವ ಮಾತು ಕೇಳಿಸಿಕೊಂಡು ಅರ್ಥ ಮಾಡಿಕೊಳ್ಳುವ ಒಳ್ಳೆಯ ಮನಸ್ಸಿರಬೇಕು. ನಮ್ಮನ್ನು ಉತ್ತುಂಗದತ್ತ ಏರಲು ಹಾಕಿ ಕೊಟ್ಟ ಮೆಟ್ಟಿಲು ಎಂದು ಭಾವಿಸಬೇಕು. ಇನ್ನೂ ಹೆಚ್ಚಿನ ಉತ್ಸಾಹದಲ್ಲಿ ಗುರಿ ಮುಟ್ಟುವತ್ತ ನಮ್ಮ ನಡೆ ಬದಲಾಯಿಸಿಕೊಳ್ಳಬೇಕು. ಇವ್ಯಾವುದೂ ಇಲ್ಲದ ಜನರು ” ನಾನು, ಇದು ನನ್ನದು, ಯಾವೋನಾದರೂ ಬೊಟ್ಟು ಮಾಡಿ ತೋರಿಸಲಿ ನೋಡ್ತೀನಿ” ಅನ್ನುವ ಮೂರ್ಖತನದ ಮಾತು ಹೇಳುತ್ತಿರುತ್ತಾರೆ. ಆದರೆ ಈ ನಡೆ ಒಳ್ಳೆಯ ನಡೆಯಲ್ಲ; ಇದು ಖಂಡಿತಾ ನಮ್ಮನ್ನು ಅದಃಪತನಕ್ಕೆ ಕರೆದೊಯ್ಯುತ್ತದೆ. ಕೊನೆಯಲ್ಲಿ ಪಶ್ಚಾತ್ತಾಪವೇ ಕಟ್ಟಿಟ್ಟ ಬುತ್ತಿ. ಮತ್ತಷ್ಟು ಓದು »