ವಿಷಯದ ವಿವರಗಳಿಗೆ ದಾಟಿರಿ

Archive for

29
ಸೆಪ್ಟೆಂ

ಸರ್ಜಿಕಲ್ ಆಪರೇಶನ್

– ವಿನಾಯಕ ಹಂಪಿಹೊಳಿ

article-2384428-0050b8c600000258-96_634x449ಸರ್ಜರಿ ಎಂದರೆ ಶಸ್ತ್ರಚಿಕಿತ್ಸೆ. ದೇಹದ ಒಂದು ಭಾಗಕ್ಕೆ ಚಿಕಿತ್ಸೆ ಅಗತ್ಯವಾದಲ್ಲಿ ಅಲ್ಲಷ್ಟೇ ದೇಹವನ್ನು ಕೊಯ್ಯುವಂತೆ, ಸೈನಿಕ ಕಾರ್ಯಾಚರಣೆಯಲ್ಲಿಯೂ ಒಂದಾನೊಂದು ಪ್ರದೇಶದಲ್ಲಷ್ಟೇ ನಡೆಸುವ ಸೀಮಿತ ಕಾರ್ಯಾಚರಣೆಯೇ ಸರ್ಜಿಕಲ್ ಆಪರೇಶನ್. ಅಮೇರಿಕದ ಸೈನ್ಯ ಒಸಾಮಾ ಬಿನ್ ಲಾಡೆನ್ ವಾಸವಾಗಿರುವ ಸ್ಥಳದ ಮಾಹಿತಿ ತಿಳಿದಾಗ ಹೀಗೆಯೇ ದಾಳಿ ಮಾಡಿತ್ತು. ಈ ಹಿಂದೆ ಇರಾಕಿನಲ್ಲಿ ನ್ಯೂಕ್ಲಿಯರ್ ಚಟುವಟಿಕೆಗಳು ನಡೆಯುತ್ತಿರುವ ಮಾಹಿತಿ ಸಿಕ್ಕಾಗ ಇಸ್ರೇಲ್ ದೇಶವು ಒಪೆರಾ ಕಾರ್ಯಾಚರಣೆಯನ್ನು ರೂಪಿಸಿ, ತನ್ನ ವಾಯುಸೇನೆಯನ್ನು ಉಪಯೋಗಿಸಿಕೊಂಡು ಆ ನ್ಯೂಕ್ಲಿಯರ್ ರಿಯಾಕ್ಟರನ್ನು ಧ್ವಂಸ ಮಾಡಿ ಬಂದಿತ್ತು. ಇಸ್ರೇಲಿನ ವಿಮಾನವೊಂದನ್ನು ಅಪಹರಿಸಿ ದೂರದ ಎಂಟೆಬ್ಬೆಯಲ್ಲಿ ಇಳಿಸಿದಾಗ ಆಪರೇಶನ್ ಥಂಡರ್ಬೋಲ್ಟ್ ಯೋಜಿಸಿ ಏಕಾಏಕಿ ಅಲ್ಲಿನ ಭಯೋತ್ಪಾದಕರ ಮೇಲೆ ದಾಳಿ ಮಾಡಿ ಬಂಧಿತರನ್ನು ಬಿಡುಗಡೆಗೊಳಿಸಿತು. ಮತ್ತಷ್ಟು ಓದು »

29
ಸೆಪ್ಟೆಂ

ಪ್ರೇತದ ಆತ್ಮ ಚರಿತೆ! (ಭಾಗ ೫)

– ಶ್ರೀಕಾಂತ್ ಶೆಟ್ಟಿ

ಪ್ರೇತದ ಆತ್ಮ ಚರಿತೆ! (ಭಾಗ ೧)
ಪ್ರೇತದ ಆತ್ಮ ಚರಿತೆ! (ಭಾಗ ೨)
ಪ್ರೇತದ ಆತ್ಮ ಚರಿತೆ! (ಭಾಗ 3)
ಪ್ರೇತದ ಆತ್ಮ ಚರಿತೆ! (ಭಾಗ ೪)

14225499_1081747878587487_1441481958757222525_nಛೇ ಏನಾಗಿ ಹೋಯಿತು. ದೇಶದ ಗಡಿಗಳನ್ನು ಕಾಯ ಬೇಕಿದ್ದ ಮರಾಠಾ ಖಡ್ಗಗಳು ತಮ್ಮತಮ್ಮೊಳಗೆ ಕಣಕಣಿಸತೊಡಗಿದವು. ಹೆಣ್ಣೊಬ್ಬಳ ದುಷ್ಟತನಕ್ಕೆ ಸಾಮ್ರಾಜ್ಯದ ಸ್ಥಂಭಗಳೇ ಬುಡ ಕಳಚಿಕೊಂಡವು. ತನ್ನ ನಿಷ್ಟಾವಂತ ಸೇನಾನಿಗಳನ್ನು ಕೂಡಿಕೊಂಡು ರಘುನಾಥ ರಾವ್ ಪೇಶ್ವಾ ಪಟ್ಟವನ್ನು ಅಲಂಕರಿಸಿಯೇ ಬಿಟ್ಟ.!! ನಾರಾಯಣ ರಾವ್ ರಕ್ತದಿಂದ ತೊಯ್ದು ಹೋಗಿದ್ದ ಪೇಶ್ವಾ ಕಿರೀಟ ರಘುನಾಥ ರಾವ್ ಪೇಶ್ವಾ ತಲೆಯಲ್ಲಿ ಘಟಸರ್ಪವೊಂದು ಮಡಿಕೆ ಹಾಕಿ ಕುಳಿತಂತೆ ಕಾಣುತ್ತಿತ್ತು. ಯಾವುದೇ ಕ್ಷಣದಲ್ಲಾದರೂ ಆ ಆತ್ಮ ಪ್ರತಿಕಾರಕ್ಕಿಳಿಯದೆ ಸುಮ್ಮನಿರುವುದಿಲ್ಲ. ಅಷ್ಟು ಭೀಕರವಾಗಿ ಆ ಬಾಲಕನನ್ನು ಕತ್ತರಿಸಿ ಕೊಲ್ಲಲಾಗಿತ್ತು. ನಾರಾಯಣನ ಕಣ್ಣೀರು ರಕ್ತ ಒಂದಾಗಿ ಬೆರೆತು ರಘುನಾಥನ ಪಾದ ತೊಯ್ದರೂ ಆತ ಆ ಮುಗ್ದ ಬಾಲಕನ ಮೇಲೆ ಕರುಣೆ ತೋರಿರಲಿಲ್ಲ. ಮತ್ತಷ್ಟು ಓದು »