ಸಿದ್ಧಾಂತಗಳ ಚರಿತ್ರೆ – 3 ಕಮ್ಯುನಿಸಂ: ( ಅಪ್ರಸ್ತುತ ಸಿದ್ಧಾಂತ, ಅವಾಸ್ತವಿಕ ಪರಿಹಾರ )
– ರೋಹಿತ್ ಚಕ್ರತೀರ್ಥ
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
ಸಿದ್ಧಾಂತಗಳ ಚರಿತ್ರೆ – 2 ( ಆತನ ಚಿಂತನೆ ಅರ್ಧ ಭೂಗೋಲವನ್ನು ನಿಯಂತ್ರಿಸಿತು! )
ಕಮ್ಯುನಿಸ್ಟ್ ಚಿಂತನೆಯನ್ನು ಕಾರ್ಲ್ ಮಾರ್ಕ್ಸ್ ಪ್ರಾರಂಭಿಸಿದವನಲ್ಲ; ಆದರೆ ಅದಕ್ಕೊಂದು ಸ್ಪಷ್ಟ ರೂಪ ಕೊಟ್ಟವನು ಆತ. ಮಾರ್ಕ್ಸ್ ತೀರಿಕೊಂಡ ಮೂವತ್ತು ವರ್ಷಗಳ ನಂತರ ರಷ್ಯದಲ್ಲಿ ಕ್ರಾಂತಿಯಾಗಿ ಲೆನಿನ್ ಅಧಿಪತ್ಯ ಬಂತು. ಮಾರ್ಕ್ಸ್ ನ ಅದುವರೆಗಿನ ಅಪ್ರಕಟಿತ ಕೃತಿಗಳೆಲ್ಲ ಒಂದರ ಮೇಲೊಂದರಂತೆ ಸಾಲಾಗಿ ಪ್ರಕಟವಾಗಿ ಜಗತ್ತಿನ ಹಲವು ದೇಶಗಳಲ್ಲಿ, ಹಲವು ಯುವಕರ ಕೈಗೆ ಬಂದು, ಅವರೆಲ್ಲ ತಮ್ಮ ಸುತ್ತಲಿನ ಹಳೆಯ ವ್ಯವಸ್ಥೆಯನ್ನು ಕಿತ್ತೊಗೆಯುವ ಸಂಕಲ್ಪ ತೊಡುವಂತಾಯಿತು. 1920ರಿಂದ 1960ರವರೆಗಿನ ಅವಧಿ ಕಮ್ಯುನಿಸಂ ಮತ್ತು ಮಾಕ್ರ್ಸಿಸಂಗಳ ಉಚ್ಛ್ರಾಯಕಾಲ. ರಷ್ಯ, ಚೀನಾ, ಕೊರಿಯ, ಕಾಂಬೋಡಿಯಾ, ಜರ್ಮನಿ, ಗ್ರೇಟ್ ಬ್ರಿಟನ್, ಫ್ರಾನ್ಸ್, ಕ್ಯೂಬಾದಂಥ ಹಲವು ದೇಶಗಳು ಮಾಕ್ರ್ಸ್ ಚಿಂತನೆಯ ಪ್ರಯೋಗ ಶಾಲೆಗಳಾದವು. ಸ್ವಾತಂತ್ರ್ಯಾ ನಂತರದ ಮೊದಲ ಮೂರು ದಶಕಗಳಲ್ಲಿ ಭಾರತ ಕೈಗೊಂಡ ಹತ್ತುಹಲವು ಯೋಜನೆಗಳಲ್ಲಿ ಸೋವಿಯೆಟ್ ರಷ್ಯಾ ಪ್ರಣೀತ ಕಮ್ಯುನಿಸಂನ ದಟ್ಟ ಛಾಯೆಯಿದ್ದದ್ದು ಸುಸ್ಪಷ್ಟ. ಆದರೆ 1970ರ ನಂತರ ರಷ್ಯಾ ಹಲವು ಹೋಳುಗಳಾಗಿ ಒಡೆದುಹೋಗಿ ಶೀತಲಸಮರ ಅಘೋಷಿತ ಅಂತ್ಯ ಕಂಡಿದ್ದರಿಂದ ಕಮ್ಯುನಿಸಂ ಹಿನ್ನಡೆಯನುಭವಿಸಿತು. ಅಲ್ಲದೆ ಕಮ್ಯುನಿಸಂನ್ನು ಅಪ್ಪಿಕೊಂಡ ದೇಶಗಳೆಲ್ಲ ಸರ್ವಾಧಿಕಾರಿಗಳ ನಿಯಂತ್ರಣಕ್ಕೊಳಪಟ್ಟು ಬೃಹತ್ ಪ್ರಮಾಣದ ಹತ್ಯಾಕಾಂಡಗಳಿಗೆ ಸಾಕ್ಷಿಯಾದ್ದರಿಂದ, ಮಾರ್ಕ್ಸ್ ನ ಚಿಂತನೆಗಳ ಮೇಲಿದ್ದ ಭರವಸೆಗಳೆಲ್ಲ ಕಮರಿಹೋದವು. ಕಮ್ಯುನಿಸಂನ ಮೆಕ್ಕಾ ಎಂದೇ ಕರೆಸಿಕೊಳ್ಳುತ್ತಿದ್ದ ರಷ್ಯಾದೊಳಗಿನ ಬಡತನ, ಶೋಷಣೆ, ಸ್ವಾತಂತ್ರ್ಯಹರಣ, ಹಿಂಸಾಚಾರಗಳ ಕಟು ಕತೆಗಳು ಹೊರಜಗತ್ತಿಗೆ ತಿಳಿಯತೊಡಗಿದ್ದು 70ರ ದಶಕದ ನಂತರ; ಅದೂ ತುಣುಕು ತುಣುಕಾಗಿ. ಮತ್ತಷ್ಟು ಓದು 
ಪ್ರೇತದ ಆತ್ಮ ಚರಿತೆ! (ಭಾಗ 3)
– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
ಪ್ರೇತದ ಆತ್ಮ ಚರಿತೆ! (ಭಾಗ ೨)
ಶನಿವಾರವಾಡೆಗೆ ಶನಿ ಎಡಗಾಲಿಟ್ಟು ವಕ್ಕರಿಸಿದ್ದ. ರಘುನಾಥನನ್ನು ಗೃಹಬಂಧನದಲ್ಲಿ ಇಢಲಾಗಿದ್ದರೂ, ಆತನ ದುಷ್ಟಕೂಟ ಮಾತ್ರ ಸುಮ್ಮನೆ ಕೂತಿರಲಿಲ್ಲ. ಅದು ಒಂದಲ್ಲಾ ಒಂದು ಸಂಚನ್ನು ಹೆಣೆಯುತ್ತಲೇ ಇತ್ತು. ರಘುನಾಥನ ಬಂಧನವಾದ ಕೆಲವೇ ದಿನದಲ್ಲಿ ಪೇಶ್ವಾ ಮಾಧವ ರಾವ್ ಮೇಲೆ ಮಾರಣಾಂತಿಕ ದಾಳಿ ನಡೆಯಿತು. ಮಾಧವ ರಾವ್ ಬೆಂಗಾವಲಿಗನಾಗಿದ್ದ ರಾಮಸಿಂಗ್ ಎಂಬಾತ ಮಾಧವ್ ರಾವ್ ಮೇಲೆ ಅನಿರೀಕ್ಷಿತವಾಗಿ ತಲವಾರು ಝಳಪಿಸಿದ. ಕುತ್ತಿಗೆಗೆ ಬೀಳಬೇಕಿದ್ದ ಪೆಟ್ಟು ತೋಳಿಗೆ ಬಿತ್ತು ಬದುಕಿಕೊಂಡ, ಇದರ ಹಿಂದೆ ರಘುನಾಥ ರಾವ್ ಕೈವಾಡ ಇತ್ತು ಎಂದು ಬಳಿಕ ತಿಳಿದು ಬಂತು. ಹೈದರ್ ಆಲಿಯ ವಿರುದ್ಧ ಮೂರನೇ ಯುದ್ಧಕ್ಕೆ ಮಾಧವ್ ರಾವ್ ಪೇಶ್ವಾ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಪೇಶ್ವಾ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಭಯಾನಕ ಟಿಬಿ ಖಾಯಿಲೆ ಪೇಶ್ವಾನಿಗೆ ತಟ್ಟಿತ್ತು. ಅಂದಿನ ಕಾಲಕ್ಕೆ ಅದು ಬ್ರಿಟಿಷರು ತಂದು ಬಿಟ್ಟಿದ್ದ ಹೊಸ ಖಾಯಿಲೆಯಾದ ಕಾರಣ ಇಲ್ಲಿ ಟಿಬಿಗೆ ಸರಿಯಾದ ಚಿಕಿತ್ಸೆ ಇರಲಿಲ್ಲ. ಥೇವೂರು ಚಂತಾಮಣಿ ದೇವಾಲಯದಲ್ಲಿ ಪೇಶ್ವಾ ಮಾಧವ ರಾವ ಕೊನೆಯುಸಿರೆಳೆದ. ಅಲ್ಲೇ ಆತನ ಅಂತ್ಯಸಂಸ್ಕಾರ ನಡೆಸಲಾಯಿತು. ಆತನ ಪ್ರಿಯ ಪತ್ನಿ ರಾಮಾಬಾಯಿ ಗಂಡನ ಚಿತೆಗೆ ಹಾರಿ ಪ್ರಾಣ ಬಿಟ್ಟಳು. ಮಾಧವ ರಾವ್, ಶನಿವಾರವಾಡೆಯ ಪೇಶ್ವಾ ಗದ್ದುಗೆ ಅಲಂಕರಿಸಿದ ಕೊನೆಯ ಸಮರ್ಥ ಪೇಶ್ವಾ. ಈತ ಹಲವಾರು ಸಮರ್ಥ ಸೇನಾನಿಗಳನ್ನು ಗುರುತಿಸಿ ಅವರಿಗೆ ಬೇರೆ ಬೇರೆ ವಲಯಗಳ ಅಧಿಕಾರ ನೀಡಿದ. ಇಂದು ನಾವು ರಾಜಸ್ಥಾನದಲ್ಲಿ ಕಾಣುತ್ತಿರುವ ಸಿಂಧ್ಯಾ ಮನೆತನದ ಮೂಲ ಪುರುಷ ಮಹಾದ್ ಜಿ ಸಿಂಧ್ಯಾನನ್ನು ಬೆಳೆಸಿದ್ದು ಮಾಧವರಾವ್ ಪೇಶ್ವಾ. ಕೊಲ್ಹಾಪುರದ ಭೋಸ್ಲೆಗಳು, ಬರೋಡಾದ ಗಾಯಕ್ವಾಡರು, ಉತ್ತರಭಾರತದಲ್ಲಿ ಹೋಳ್ಕರ್ಗಳು ಇವರೆಲ್ಲಾ ಮಾಧವರಾವ್ ಪೇಶ್ವಾನ ಗರಡಿಯಲ್ಲೇ ಪಳಗಿ ಪುಣೆಗೆ ನಿಷ್ಟರಾಗಿ ಆಡಳಿತ ನಡೆಸಿದರು. ಮಾಧವರಾವ್ ಪೇಶ್ವೆ ತೀರಿಕೊಳ್ಳುತ್ತಿದ್ದಂತೆ ಈ ರಾಜ್ಯಗಳ ಹಿಡಿತ ಪುಣೆಯಿಂದ ಕೈ ತಪ್ಪಿತು. ಎಲ್ಲರೂ ಸ್ವತಂತ್ರರಾಗಿ ಆಳ್ವಿಕೆ ಮಾಡಲು ಆರಂಭಿಸಿದರು. ಮಾಧವ ರಾವ್ ಬಳಿಕ ಪುಣೆಯಲ್ಲಿ ನಾಲಾಯಕ್ಕುಗಳ ಸರದಿ ಆರಂಭ ವಾಯಿತು. ಪೇಶ್ವಾಯಿಯ ರಕ್ತ ಎಲ್ಲಿ ಕಳಪೆಯಾಯಿತೋ ಗೊತ್ತಿಲ್ಲ, ಒಬ್ಬರಿಗಿಂತ ಒಬ್ಬರು ಅಯೋಗ್ಯರೇ ಬರಲಾರಂಭಿಸಿದರು. ಶನಿವಾರ ವಾಡೆಯನ್ನು ಇಂದಿಗೂ ಕಾಡುತ್ತಿರುವ ಪ್ರೇತದ ಕತೆ ಇಲ್ಲಿ ಆರಂಭವಾಗುತ್ತದೆ. ಮತ್ತಷ್ಟು ಓದು 
ಸಿದ್ಧಾಂತಗಳ ಚರಿತ್ರೆ – 2 ( ಆತನ ಚಿಂತನೆ ಅರ್ಧ ಭೂಗೋಲವನ್ನು ನಿಯಂತ್ರಿಸಿತು! )
– ರೋಹಿತ್ ಚಕ್ರತೀರ್ಥ
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
ಕಾರ್ಲ್ ಮಾರ್ಕ್ಸ್ ನ ಒಟ್ಟು ಚಿಂತನೆಯನ್ನು ಹೀಗೆ ಸಂಗ್ರಹಿಸಬಹುದು: ಕೈಗಾರಿಕೆಗಳು ಬೆಳೆದು, ಯಂತ್ರ ಸಂಸ್ಕೃತಿಯ ಮೂಲಕ ಆಧುನಿಕತೆಯು ಸಮಾಜವನ್ನು ಪ್ರವೇಶಿಸಿರುವುದರಿಂದ ಮನುಷ್ಯ ಜಾಗೃತನಾಗಬೇಕು. ಯಂತ್ರಗಳು ಮನುಷ್ಯನ ಉದ್ಯೋಗವನ್ನು ಕಸಿಯುವುದು ಮಾತ್ರವಲ್ಲ; ಸಮಾಜದಲ್ಲಿ ಬಹು ದೊಡ್ಡ ಆರ್ಥಿಕ ಅಸಮತೋಲನವನ್ನು ಸೃಷ್ಟಿಸುತ್ತವೆ. ಯಂತ್ರಗಳಿಂದ ಮನುಷ್ಯ ತನ್ನ ಅಸ್ಮಿತೆಯನ್ನು ಕಳೆದುಕೊಳ್ಳುತ್ತಾನೆ. ಯಾವ ಕೆಲಸವನ್ನು ಯಾರೂ ಮಾಡಬಹುದೆಂಬ ಸನ್ನಿವೇಶ ಸೃಷ್ಟಿಯಾಗುತ್ತದೆ. ಇದರಿಂದಾಗಿ ಪ್ರತಿಯೊಬ್ಬರಿಗೂ ಕೆಲಸದಲ್ಲಿದ್ದ ಶ್ರದ್ಧೆ, ಪ್ರೀತಿ, ಆತ್ಮೀಯತೆಗಳು ಕಾಣೆಯಾಗುತ್ತವೆ. ತಾವು ಬಯಸಿದಂತೆ ಕೆಲಸಗಾರರನ್ನು ಬಳಸಿಕೊಳ್ಳುವ ಸ್ವಾತಂತ್ರ್ಯವನ್ನು ಬಂಡವಾಳಶಾಹಿಗಳು ಪಡೆಯುತ್ತಾರೆ. ಇದರಿಂದಾಗಿ ಕಾರ್ಮಿಕರನ್ನು ಅತಿ ಕಡಿಮೆ ಸಂಬಳಕ್ಕೆ ದುಡಿಸಿಕೊಂಡು ಹೊಸ ಬಗೆಯ ಗುಲಾಮಗಿರಿ ನಡೆಸಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಬಂಡವಾಳಶಾಹಿಗಳು ಲಾಭ ಎಂದು ಏನನ್ನು ಕರೆಯುತ್ತಾರೋ ಅದು ಶೋಷಣೆಯ ಮೂರ್ತ ಮೊತ್ತ. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 30:
ಕನಕಲತಾ ಬರುವಾ ಮತ್ತು ಭೋಗೇಶ್ವರಿ ಫು೦ಖನಾನಿ:
– ರಾಮಚಂದ್ರ ಹೆಗಡೆ
ರಾಷ್ಟ್ರಧ್ವಜದ ಗೌರವ ರಕ್ಷಣೆಗಾಗಿ ಬ್ರಿಟಿಷರ ಗುಂಡಿಗೆ ಎದೆಯೊಡ್ಡಿ ಬಲಿದಾನಗೈದ ಅಸ್ಸಾಮಿನ ವೀರವನಿತೆಯರು ಕನಕಲತಾ ಬರುವಾ ಮತ್ತು ಭೋಗೇಶ್ವರಿ ಫು೦ಖನಾನಿ. ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರದ ಭೂಪಟ, ವಂದೇಮಾತರಂ ಎಲ್ಲವೂ ದೇಶಾಭಿಮಾನದ ಅಭಿವ್ಯಕ್ತಿಯ ಸಂಕೇತಗಳಾದರೂ ಅವು ನಮ್ಮಲ್ಲಿ ಸೃಷ್ಟಿಸುವ ಭಾವ ವರ್ಣನಾತೀತ. ಸೈನಿಕನೊಬ್ಬ ಯುದ್ಧ ಗೆದ್ದಾಗ, ಕ್ರೀಡಾಳುವೊಬ್ಬ ಆಟದಲ್ಲಿ ಗೆದ್ದಾಗ ತ್ರಿವರ್ಣ ಧ್ವಜ ಹಿಡಿದು ಕುಣಿದು ಕುಪ್ಪಳಿಸುವುದು ಕಾಣುತ್ತೇವೆ. ಯುದ್ಧಕ್ಕೆ ಹೋರಾಟ ಯೋಧನೊಬ್ಬ ಗೆದ್ದರೆ ಧ್ವಜ ಹಿಡಿದು ಬರುವೆ, ಸತ್ತರೆ ತ್ರಿವರ್ಣಧ್ವಜವನ್ನು ಸುತ್ತಿಕೊಂಡು ಬರುವೆ ಎಂದು ಹೇಳಿದ್ದು ಈ ಎಲ್ಲ ಸಂಕೇತಗಳ ಕುರಿತು ನಮಗಿರುವ ಹೆಮ್ಮೆ ಅಭಿಮಾನದ ಪ್ರತೀಕ. ರಾಷ್ಟ್ರಧ್ವಜವೆಂದರೆ ಕೇವಲ ಅದು ಬಟ್ಟೆಯಲ್ಲ. ಅದು ನಮ್ಮ ಹೆಮ್ಮೆ, ದೇಶದ ಕುರಿತ ಪ್ರೀತಿಯ ಸಂಕೇತ, ಅದು ನಮ್ಮ ಆತ್ಮಾಭಿಮಾನದ ಸಂಕೇತ. ರಾಷ್ಟ್ರಧ್ವಜದ ಪೂಜ್ಯತೆ ಹಾಗೂ ಗೌರವದ ರಕ್ಷಣೆಗಾಗಿ ೧೭ ರ ತರುಣಿ ಕನಕಲತಾರಿಂದ ಹಿಡಿದು ೭೩ ರ ವೃದ್ಧೆ ಮಾತಂಗಿನಿ ಹಜ್ರಾರವರೆಗೆ ಸ್ವಾತಂತ್ರ್ಯ ಸಮರದ ಉದ್ದಕ್ಕೂ ಸಾವಿರಾರು ಮಂದಿ ಬಲಿದಾನ ಮಾಡಿದ್ದಾರೆ. ಮತ್ತಷ್ಟು ಓದು 
ಪ್ರೇತದ ಆತ್ಮ ಚರಿತೆ! (ಭಾಗ ೨)
– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
ಅದು ಮನುಕುಲ ಕಂಡ ಪರಮ ಪಾಪಿಗಳಲ್ಲೊಬ್ಬ ಔರಂಗಜೇಬ ದಿಲ್ಲಿಯ ಗದ್ದುಗೆಯಲ್ಲಿದ್ದ ಸಮಯ. ಪ್ರಜೆಗಳನ್ನು ಪರಿಪಾಲನೆ ಮಾಡಬೇಕಾದ ದೊರೆಯೇ ಜಿಸಿಯಾ ತಲೆಗಂದಾಯ ಹೇರಿ ಒಂದು ನಿರ್ದಿಷ್ಟ ಸಮಾಜದ ಸರ್ವನಾಶಕ್ಕೆ ಪಣತೊಟ್ಟು ಸಾವಿರಾರು ದೇವಾಲಯಗಳನ್ನು ದ್ವಂಸ ಮಾಡುತ್ತಿದ್ದ ಕಂಟಕಕಾಲ.. ಆ ಹೊತ್ತಿನಲ್ಲಿ ಸ್ವಾಭಿಮಾನಿ ಹಿಂದೂಗಳ ಪಾಲಿಗೆ ಆಪತ್ಭಾಂದವರಾಗಿ ಶಿವಾಜಿ ಮಹಾರಾಜರು ಉದಿಸಿದರು. ಸಹ್ಯಾದ್ರಿಯ ಸಿಂಹದ ಗುಡುಗಿಗೆ ದಿಲ್ಲಿಯ ಮೊಘಲರ ಮಯೂರ ಸಿಂಹಾಸನ ತಣ್ಣಗೆ ಕಂಪಿಸಿದ್ದಂತೂ ಸತ್ಯ. ಪ್ರವಾಹಕ್ಕೆ ವಿರುದ್ಧವಾಗಿ ಈಜಿ ತನ್ನ ಸದ್ಗುಣಗಳಿಂದ ಪ್ರಜೆಗಳ ಹೃದಯವನ್ನೂ… ಖಡ್ಗಪರಾಕ್ರಮದಿಂದ ಯವನರ ಸೈನ್ಯವನ್ನೂ ಗೆದ್ದ ಶಿವಾಜಿ, ಹಿಂದವೀ ಸ್ವಾರಾಜ್ಯವನ್ನು ಕಟ್ಟಿದರು. ಅಖಂಡ ಹಿಂದೂ ಸಾಮ್ರಾಜ್ಯಕ್ಕೆ ಬೀಜಾರೋಹಣ ಮಾಡಿದವರು ಶಿವಾಜಿ ಮಹಾರಾಜರಾದರೂ, ಅವರ ಕನಸನ್ನು ನನಸು ಮಾಡಿದವರು ಮಾತ್ರ ಪುಣೆಯ ಪೇಶ್ವಾಗಳು. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 29:
ವಾಂಚಿನಾಥನ್ ಅಯ್ಯರ್
– ರಾಮಚಂದ್ರ ಹೆಗಡೆ
ತಮಿಳುನಾಡಿನ ರಾಷ್ಟ್ರಭಕ್ತ ಕ್ರಾಂತಿಕಾರಿ, ಬ್ರಿಟಿಷ್ ಸಾಮ್ರಾಜ್ಯಕ್ಕೆ ಸೆಡ್ಡು ಹೊಡೆದು ಪ್ರಾಣಾರ್ಪಣೆ ಮಾಡಿದ ಹುತಾತ್ಮ ವಾಂಚಿನಾಥನ್ ಅಯ್ಯರ್. ಜನರಿಂದ ‘ವಂಚಿ’ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಈ ೨೫ ರ ದೇಶಭಕ್ತ ತರುಣ ತಿರುನಲ್ವೇಲಿಯ ಕಲೆಕ್ಟರ್ ರಾಬರ್ಟ್ ಆಶ್ ನನ್ನು ಹಾಡಹಗಲೇ ಗುಂಡಿಕ್ಕಿ ತಾನೂ ಆತ್ಮಾರ್ಪಣೆ ಮಾಡಿದ. ತಿರುನಲ್ವೇಲಿ ಜಿಲ್ಲೆಯ ಸೆಂಗೊತ್ತೈ ಎಂಬ ಊರಿನಲ್ಲಿ ಜನಿಸಿದ ವಾಂಚಿನಾಥನ್ ಪ್ರಾಥಮಿಕ ಶಿಕ್ಷಣವನ್ನು ತನ್ನೂರಿನಲ್ಲೇ ಮುಗಿಸಿ, ಎಂ.ಎ ಪದವಿಯನ್ನು ತಿರುವನಂತಪುರದ ಕಾಲೇಜಿನಲ್ಲಿ ಪಡೆದಿದ್ದ. ಕಾಲೇಜಿನಲ್ಲಿ ಓದುವಾಗಲೇ ಮದುವೆಯೂ ಆಗಿತ್ತು. ಸರ್ಕಾರಿ ಹುದ್ದೆಯಲ್ಲಿ ನೌಕರಿ ಮಾಡುತ್ತಿದ್ದ. ಅದೇ ಹೊತ್ತಿಗೆ ತಮಿಳುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟದ ಕಾವು ಜೋರಾಗಿತ್ತು. ಸ್ವದೇಶೀ ನೇವಿಗೇಷನ್ ಕಂಪನಿ ಹುಟ್ಟುಹಾಕಿ ಬ್ರಿಟಿಷರಿಗೆ ಸೆಡ್ಡು ಹೊಡೆದ ರಾಷ್ಟ್ರಭಕ್ತ ಚಿದಂಬರಂ ಪಿಳ್ಳೈ ಹಾಗೂ ‘ಭಾರತಮಾತಾ ಅಸೋಸಿಯೇಷನ್’ ಕಟ್ಟಿ ಕ್ರಾಂತಿಕಾರಿಗಳನ್ನು ತಯಾರು ಮಾಡುತ್ತಿದ್ದ ನೀಲಕಂಠ ಬ್ರಹ್ಮಚಾರಿ ಅವರ ಹೋರಾಟಗಳಿಂದ ವಾಂಚಿ ಸ್ವಾತಂತ್ರ್ಯ ಸಮರದೆಡೆಗೆ ಆಕರ್ಷಿತನಾದ. ದಕ್ಷಿಣ ಭಾರತದ ಕೆಲವೇ ಕೆಲವು ಕ್ರಾಂತಿಕಾರಿ ಸಂಘಟನೆಗಳಲ್ಲಿ ಒಂದಾದ, ನೀಲಕಂಠನಿಂದ ಬ್ರಹ್ಮಚಾರಿಯವರ ‘ಭಾರತಮಾತಾ ಅಸೋಸಿಯೇಷನ್’ ಸಶಸ್ತ್ರ ಕ್ರಾಂತಿಗಾಗಿ ಯುವಕರನ್ನು ತರಬೇತಿಗೊಳಿಸುತ್ತಿತ್ತು. ಮತ್ತಷ್ಟು ಓದು 
ಭಾಮಿನಿ ಷಟ್ಪದಿಯಲ್ಲಿ ಭಗವಾನ್ ಶ್ರೀಧರ ಸ್ವಾಮಿಗಳ ಚರಿತ್ರೆ
– ಗುರುಪ್ರಸಾದ್ ಕೆ ಕೆ.
ಶ್ರೀಧರಭಾಮಿನಿಧಾರೆ ೧-೫
ಶ್ರೀಧರಭಾಮಿನಿಧಾರೆ ೬-೧೦
6)
ವೆಂಕಟಾಚಲ ಗಿರಿಯ ಅಧಿಪತಿ
ವೆಂಕಟೇಶನು ಕುಲದ ದೈವನು
ಸುಂಕಸಂಗ್ರಹ ಮಾಡುವಂತಹ ವಂಶ ಇವರದ್ದೂ||
ಸಂಕ ಇಹಕೂ ಪರಕು ಬೆಸೆಯುವ
ಸಂಕಟವ ಬಹುದೂರ ಸರಿಸುವ
ಪಂಕಜಾತ್ಮನು ಕರುಣೆ ತೋರಿಹ ವಂಶ ಇವರದ್ದೂ||
ತಾತ್ಪರ್ಯ : ಸಪ್ತಗಿರಿವಾಸ ಶ್ರೀನಿವಾಸನು ಇವರ ಕುಲದೇವರಾಗಿದ್ದಾನೆ. ಈ ‘ಪತಕಿ’ ಎಂಬ ಶಬ್ಧವು ‘ಫಸಕೀ’ ಎಂಬ ಶಬ್ದದ ಅಪಭ್ರಂಶವಾಗಿದ್ದು, ಸುಂಕವಸೂಲಿ ಮಾಡುವ ಅಧಿಕಾರಿಗೆ ಈ ಹೆಸರು ಹೇಳುವ ವಾಡಿಕೆ ಇತ್ತು. ಈ ವಂಶದಲ್ಲಿ ಹಿಂದೆ ಯಾರೋ ಸುಂಕವಸೂಲಿ ಮಾಡುವ ಅಧಿಕಾರದಲ್ಲಿ ಇದ್ದುದರಿಂದ ಈ ಮನೆತನಕ್ಕೆ ಪತಕಿ ಎಂಬ ಹೆಸರು ಬಂತು. ಬಹಳ ಧರ್ಮಿಷ್ಟರಾದ ಇವರ ವಂಶದ ಮೇಲೆ, ಸಂಕಟನಾಶಕ, ಇಹ-ಪರಗಳ ಸೇತುವೆಯಾದ ವೆಂಕಟೇಶ್ವರನ ಪೂರ್ಣಾನುಗ್ರಹ ಇತ್ತು. ಮತ್ತಷ್ಟು ಓದು 
ಪ್ರತಿಭಟನೆಯನ್ನೂ ಅಪರಾಧವನ್ನೂ ಏಕೆ ಸಮೀಕರಿಸುತ್ತೀರಿ ಮಾಧ್ಯಮಗಳೇ?
– ವಿನಾಯಕ ಹಂಪಿಹೊಳಿ
ರಾಜ್ಯಾದ್ಯಂತ ಪ್ರತಿಭಟನೆಗಳನ್ನು ವರದಿ ಮಾಡುವ ಸಂದರ್ಭದಲ್ಲಿ ನಮ್ಮ ಮಾಧ್ಯಮಗಳು “ವಾಹನಗಳಿಗೆ ಬೆಂಕಿ ಹಚ್ಚುವದರ ಮೂಲಕ ಕಲ್ಲು ತೂರುವ್ರದರ ಮೂಲಕ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು” ಎಂಬ ಮಾತನ್ನು ಬಳಸಿದ್ದೇ ತಪ್ಪು ಎಂಬುದು ನನ್ನ ಅನಿಸಿಕೆ. ಏಕೆಂದರೆ ಇಂತಹ ಅನೈತಿಕ ಕಾರ್ಯಗಳನ್ನು, `ಆಕ್ರೋಶದ ಸಹಜ ಅಭಿವ್ಯಕ್ತಿ’ ಎಂಬಂತೆ ಬಿಂಬಿಸಿರುವದೇ ಆ ಕ್ರಿಯೆಯನ್ನು ಸಮರ್ಥಿಸಿದಂತೆ. ಉದಾಹರಣೆಗೆ “ಚಾರ್ಲಿ ಹೆಬ್ಡೋ ಕಚೇರಿಯ ಮೇಲೆ ಬಾಂಬು ಹಾಕುವದರ ಮೂಲಕ ಭಯೋತ್ಪಾದಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು” ಎಂದು ಸುದ್ದಿ ಬಿತ್ತರಿಸಿದರೆ ಹೇಗಿರುತ್ತದೆ? ಭಯೋತ್ಪಾದಕರಂತೆ ಜೀವ ತೆಗೆದಿಲ್ಲ ಎನ್ನುವದನ್ನು ಒಪ್ಪಬಹುದು. ಆದರೆ ಸಾಲಸೋಲ ಮಾಡಿ ಪಡೆದ ಲಾರಿಗಳೇ, ಜೀವನಾಧಾರವನ್ನಾಗಿ ಮಾಡಿಕೊಂಡಿರುವ ಲಾರಿ ಡ್ರೈವರು ಕ್ಲೀನರುಗಳಿಗೆ, ಅವರ ಸಂಸಾರಕ್ಕೆ ಇದ್ದ ಒಂದೇ ಜೀವನೋಪಾಯವನ್ನೇ, ಕಸಿದುಕೊಳ್ಳುವದು ಸರಿಯೇ? ಜೀವ ತೆಗೆಯುವದಕ್ಕಿಂತ ಜೀವನ ತೆಗೆಯುವದು ಕಡಿಮೆ ಅಪರಾಧವಾಯಿತೇ?ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 28:
ಮೆಣಸಿನಹಾಳ ತಿಮ್ಮನಗೌಡ
– ರಾಮಚಂದ್ರ ಹೆಗಡೆ
ಶ್ರೀಮಂತ ಕುಟುಂಬದಲ್ಲಿ ಜನಿಸಿದರೂ ಬ್ರಿಟಿಷರ ವಿರುದ್ಧ ಕ್ರಾಂತಿ ಕಹಳೆ ಮೊಳಗಿಸಿ ಹುತಾತ್ಮನಾದ ವೀರ ಕನ್ನಡಿಗ ಮೆಣಸಿನಹಾಳ ತಿಮ್ಮನಗೌಡರು. ಇಂದಿನ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮೆಣಸಿನಹಾಳದಲ್ಲಿ ಶ್ರೀಮಂತ ಪಾಟೀಲ ಕುಟುಂಬದಲ್ಲಿ ಜನಿಸಿದ ತಿಮ್ಮನಗೌಡ ಬ್ಯಾಡಗಿಗೆ ಸುಭಾಷಚಂದ್ರ ಬೋಸರು ಬಂದಾಗ ಸ್ವಾತಂತ್ರ್ಯ ಹೋರಾಟದ ಕುರಿತ ಅವರ ಭಾಷಣ ಕೇಳಿ ರೋಮಾಂಚಿತರಾಗಿ ತ್ಯಾಗ ಮತ್ತು ಬಲಿದಾನದ ದೀಕ್ಷೆ ತೊಟ್ಟು ತನ್ನ 21ರ ವಯಸ್ಸಿನಲ್ಲೇ ಕಾನೂನು ಭಂಗ ಚಳುವಳಿಗೆ ಧುಮುಕಿದರು. ಆ ಹೊತ್ತಿಗೆ ಬ್ರಿಟಿಷರ ದರ್ಪ ದೌರ್ಜನ್ಯಗಳು ಮಿತಿಮೀರಿದ್ದವು. ಸಾಮಾನ್ಯ ಬಡ ರೈತರನ್ನು ದುಪ್ಪಟ್ಟು ಕಂದಾಯ ಹಾಕಿ ಶೋಷಿಸಲಾಗುತ್ತಿತ್ತು. ಅದನ್ನು ಪ್ರತಿಭಟಿಸಿ ಶೋಷಣೆಯ ವಿರುದ್ಧ ದನಿಯೆತ್ತಿದ ತಿಮ್ಮನಗೌಡರನ್ನು ಬ್ರಿಟಿಷರು ಇನ್ನೂ ಅನೇಕ ಹೋರಾಟಗಾರರೊಂದಿಗೆ ಬಂಧಿಸಿ ಎರಡು ವರ್ಷಕಾಲ ಯರವಾಡ ಜೈಲಿನಲ್ಲಿ ಸೆರೆಯಲ್ಲಿಟ್ಟರು. ಅಲ್ಲಿ ತಿಮ್ಮನಗೌಡರು ಚರಖಾದಿಂದ ನೂಲು ತೆಗೆಯುವುದನ್ನು ಕಲಿತರು. ಜೈಲಿನಿಂದ ಬಿಡುಗಡೆಗೊಂಡ ತಿಮ್ಮನಗೌಡರಿಗೆ ಅವರ ಊರಿನಲ್ಲಿ ಭವ್ಯ ಸ್ವಾಗತ ದೊರೆಯಿತು. ಜೈಲಿನಿಂದ ಬಂದ ಮೇಲೆ ಮತ್ತೆ ತಿಮ್ಮನಗೌಡರು ತಮ್ಮ ಕ್ರಾಂತಿ ಚಟುವಟಿಕೆಗಳನ್ನು ಮುಂದುವರೆಸಿದರು. ಬ್ರಿಟಿಷ್ ದೌರ್ಜನ್ಯದ ವಿರುದ್ಧ ತರುಣರ ಗುಂಪು ಕಟ್ಟಿಕೊಂಡು ಊರೂರು ತಿರುಗಿ ಭಾಷಣ ಮಾಡುತ್ತಾ ಜನರಲ್ಲಿ ಜಾಗೃತಿ ಮೂಡಿಸುತ್ತಾ ಜನರನ್ನು ಬಡಿದೆಬ್ಬಿಸತೊಡಗಿದರು. ಮತ್ತಷ್ಟು ಓದು 
ಸಾಧಕರ ಹೆಸರಲ್ಲಿ ಅಸ್ಮಿತೆಯ ಹುಡುಕಾಟ
– ಡಾ.ಬಿ.ವಿ.ವಸಂತ ಕುಮಾರ್
ಭಾರತ ದೇಶ ಪ್ರಪಂಚದ ಒಂದು ವಿಶಿಷ್ಟ ದೇಶ. ಭಾರತದ ಬದುಕಿನ ದಾರಿಗಳನ್ನು ಇಲ್ಲಿನ ಮಹಾತ್ಮರು ನಿರ್ಮಿಸಿದ್ದಾರೆ. ಕಾಡಿನಿಂದ ಒಡಮೂಡಿದ ಈ ದಾರಿಗಳೆಡೆಗೆ ನಗರ ಮಹಾನಗರಗಳ ಜನರು ಮುಖಮಾಡಿದ್ದನ್ನೂ, ಮಾಡುತ್ತಾ ಇರುವುದನ್ನೂ, ಮುಂದೆ ಮಾಡುವುದನ್ನೂ ನೋಡಬಹುದು. ಇವರೇ ನಿಜವಾದ ರಾಷ್ಟ್ರ ನಿರ್ಮಾಪಕರು, ಸಂಸ್ಕೃತಿ ಸೃಷ್ಟಿಕರ್ತರು, ಕಲ್ಯಾಣದ ಮಹಾಕನಸುಗಾರರು. ಇಂಥವರನ್ನು ಸಂತರು, ಮಹಂತರು, ಶರಣರು, ಋಷಿಮುನಿಗಳು, ದಾರ್ಶನಿಕರು ಎಂದೆಲ್ಲ ಕರೆಯುತ್ತಾರೆ. ಅವರನ್ನು ಸಮಾಜದ ಜನ ಸದಾ ತಮ್ಮ ಬಾಳಿಗೆ ಆದರ್ಶದ ನಂದಾದೀವಿಗೆಯನ್ನಾಗಿಸಿಕೊಂಡಿದ್ದಾರೆ. ಅವರನ್ನು ಗುರುವೆಂದು ಸ್ವೀಕರಿಸಿ ತಾವು ಭಕ್ತರಾಗಿ ಗುರು-ಶಿಷ್ಯ ಪರಂಪರೆಯ ಆಧ್ಯಾತ್ಮಕ್ಕೂ ಅನುಭವಕ್ಕೂ ಕಾರಣರಾಗಿದ್ದಾರೆ. ಮತ್ತಷ್ಟು ಓದು 




