ವಿಷಯದ ವಿವರಗಳಿಗೆ ದಾಟಿರಿ

Archive for

1
ಆಕ್ಟೋ

ಆಗಬೇಕಿದೆ ಸರಸ್ವತಿ ಮಂದಿರಗಳ ಜೀರ್ಣೋದ್ಧಾರ

– ಮುರಳಿ ಕೃಷ್ಣ ಕಡವ

ಒಂದೂರಿನ ಒಂದಷ್ಟು ಜನ ತಮ್ಮ ಮಕ್ಕಳ ವಿದ್ಯಾಭ್ಯಾಸ ಸರಿಯಾಗಿ ನಡೆಯುತ್ತಿಲ್ಲಾ ಅಂತ ಒಬ್ಬ ಜ್ಯೋತಿಷಿಯ ಬಳಿ ಸಲಹೆಗಾಗಿ ಹೋದರು. ಜ್ಯೋತಿಷಿಯು ತನ್ನೆಲ್ಲಾ ಲೆಕ್ಕಚಾರಗಳನ್ನು ಮಾಡಿ, “ನಿಮ್ಮೂರಿನ ಮಧ್ಯದಲ್ಲಿ ದೇವರ ಸಾನ್ನಿಧ್ಯವಿದೆ, ಅಲ್ಲಿ ಒಂದು ದೇವಸ್ಥಾನದ ನಿರ್ಮಾಣವಾಗಬೇಕು” ಎಂಬ ಪರಿಹಾರವನ್ನು ನೀಡಿದರು. ದೇವರ ಮೇಲಿನ ಭಕ್ತಿಗಿಂತ ಭಯವೇ ಜಾಸ್ತಿ ನೋಡಿ ಜನರಿಗೆ. ಸರಿ ಎಂದು ಒಂದೇ ವರ್ಷದಲ್ಲಿ ಲಕ್ಷಗಟ್ಟಲೇ ದುಡ್ಡು ಸಂಗ್ರಹಿಸಿ, ಒಂದು ಗುಡಿಯನ್ನ ಎದ್ದು ನಿಲ್ಲಿಸಿ, ದೇವರ ಮೂರ್ತಿಯನ್ನ ಪ್ರತಿಷ್ಟಾಪಿಸಿಯೇ ಬಿಟ್ಟರು. ಅದಕ್ಕೊಬ್ಬ ಪೂಜಾರಿಯನ್ನೂ ನೇಮಿಸಿ ಪೂಜೆ, ಹೋಮ ಹವನಗಳನ್ನೂ ನಡೆಸಲಾಯಿತು. ಆದರೆ ಅವರು ಎದುರಿಸುತ್ತಿದ್ದ ಸಮಸ್ಯೆಗೆ ಪರಿಹಾರ ಸಿಗಲೇ ಇಲ್ಲ. ಕೇಳಿದರೆ ಆ ಜನರ ಉತ್ತರ ಏನು ಗೊತ್ತಾ “ನಮ್ಮ ಕೆಲಸ ನಾವು ಮಾಡಿದ್ದೇವೆ ಫಲಾಫಲಗಳೆಲ್ಲಾ ದೇವರಿಗೆ ಬಿಟ್ಟದ್ದು” ಅಂತ. ಮತ್ತಷ್ಟು ಓದು »

1
ಆಕ್ಟೋ

ಭಾಮಿನಿ ಷಟ್ಪದಿಯಲ್ಲಿ ಭಗವಾನ್ ಶ್ರೀಧರ ಸ್ವಾಮಿಗಳ ಚರಿತ್ರೆ

– ಗುರುಪ್ರಸಾದ್ ಕೆ ಕೆ.

ಶ್ರೀಧರಭಾಮಿನಿಧಾರೆ ೧-೫
ಶ್ರೀಧರಭಾಮಿನಿಧಾರೆ ೬-೧೦
ಶ್ರೀಧರಭಾಮಿನಿಧಾರೆ ೧೧-೧೫

ಶ್ರೀಧರಭಾಮಿನಿಧಾರೆ ೧೬-೨೦

shreedhar_swami16)
ಶಾಂತಿ ಸಾಗರನಾದ ಸಿರಿಧರ
ಕಾಂತಿಯದು ವೃದ್ಧಿಸುವ ತೆರದಿ
ಸಂತಸಾಧುಗಳಿಂದ ಕಲಿಯುವ ಹಲವು ವಿಷಯಗಳಾ||
ಶಾಂತಮೂರುತಿ ರಾಮದೇವನ
ಚಿಂತೆ ಇಲ್ಲದ ಮನದಿ ನೆನೆಯುತ
ಸಂತಸದಲೀ ಕಾಲ ಕಳೆಯುತಲಿರುವ ಪುರದಲ್ಲೀ||

ತಾತ್ಪರ್ಯ : ಸದಾ ಶಾಂತಿಭಾವವನ್ನೇ ಹೊಂದಿದ ಶ್ರೀಧರರು, ತಮ್ಮ ತೇಜಸ್ಸು ವೃದ್ಧಿಯಾಗುವಂತೆ, ಸಾಧು ಸಂತರ, ಸಜ್ಜನರ ಜೊತೆಗೆ ಮಾತಾಡುತ್ತಾ ಹಲವಾರು ಆಧ್ಯಾತ್ಮಿಕ ವಿಷಯಗಳನ್ನು ತಿಳಿದುಕೊಳ್ಳುತ್ತಾ ಇದ್ದರು. ಸದಾ ನಿಶ್ಚಿಂತ ಮನೋಭಾವನೆಯಲ್ಲಿ ರಾಮನಾಮವ ಜಪಿಸುತ್ತಾ ಸಂತಸದಲ್ಲಿ ಕಾಲಕಳೆಯುತ್ತಿರುವ ಇವರನ್ನು ನೋಡುವುದೇ ಸುತ್ತಲಿನ ಜನರಿಗೆ ಒಂದು ಸೊಗಸಾಗಿತ್ತು. ಮತ್ತಷ್ಟು ಓದು »