ವಿಷಯದ ವಿವರಗಳಿಗೆ ದಾಟಿರಿ

Archive for

23
ಆಕ್ಟೋ

ಜಗಳಕ್ಕೆ ಬುಡ ಯಾವುದು?

– ರೋಹಿತ್ ಚಕ್ರತೀರ್ಥ

rtnregnec“ಜಗಳಕ್ಕೆ ಬುಡ ಯಾವುದೋ ಬೋಳೀಮಗನೆ” ಅಂತ ನಮ್ಮ ಕಡೆ ಒಂದು ಗಾದೆ. ಚಿಕ್ಕವನಿರುವಾಗ ಕೇಳಿದ್ದು (ಪಾವೆಂ ಆಚಾರ್ಯರು ಇದನ್ನು ಒಮ್ಮೆ ಬರೆದೂ ಇದ್ದರು ಎನ್ನುವುದನ್ನು ಕೇಳಿದ್ದೇನೆ). ಒಗೆದ ಕಲ್ಲನ್ನು ಕಚ್ಚಿ ಹಿಡಿವ ಹಸಿಮಣ್ಣಿನ ಹಾಗೆ ಮನಸ್ಸು ಇಂಥ ಮಾತುಗಳನ್ನು ಬೇಗನೆ ಗ್ರಹಿಸಿ ಹಿಡಿದಿಟ್ಟುಕೊಂಡು ಬಿಡುತ್ತದೆ! ಈಗ ಕೂತು ಯೋಚನೆ ಮಾಡಿದರೆ ಇದಕ್ಕೆ ಎರಡು ಅರ್ಥ ಪದರಗಳಿರುವುದು ಹೊಳೆಯುತ್ತಿದೆ. ಒಂದು, ಜಗಳಕ್ಕೆ ಕಾರಣವೇ ಬೇಕಾಗಿಲ್ಲ; ಯಾವ ಕ್ಷುಲ್ಲಕ ವಿಚಾರವನ್ನು ಹಿಡಿದುಕೊಂಡೂ ಜಗಳವಾಡಬಹುದು ಎನ್ನುವುದು. ಇನ್ನೊಂದು, ನಮ್ಮಲ್ಲಿ ‘ಬೋಳೀಮಗ’ ಎಂಬ ಶಬ್ದಪ್ರಯೋಗ ಆದೊಡನೆ ಅದುವರೆಗೆ ನಡೆಯುತ್ತಿದ್ದ ಮಾತಿನ ಚಕಮಕಿಗೆ ಹೊಸ ರೂಪ, ಬಣ್ಣ, ವೇಗ ಸಿಗುತ್ತದೆ. ಉರಿಯಲೋ ಆರಲೋ ಎನ್ನುತ್ತ ಓಲಾಡುವ ಬಡಕಲು ಬೆಂಕಿಗೆ ಸೀಮೆಎಣ್ಣೆ ಸುರಿವಂತಹ ಪರಿಣಾಮವನ್ನು ಈ ಶಬ್ದ ಮಾಡುತ್ತದೆ – ಎನ್ನುವುದು. ಮತ್ತಷ್ಟು ಓದು »