ವಿಷಯದ ವಿವರಗಳಿಗೆ ದಾಟಿರಿ

Archive for

30
ಆಕ್ಟೋ

ದೀಪಾವಳಿಯ ಬೆಳಕಿಗೆ ಶಾಶ್ವತ ಕತ್ತಲೆ ತುಂಬಿದ ಸೈತಾನ

– ಸಂತೋಷ್ ತಮ್ಮಯ್ಯ

dsc8476_tipu_sultan_mಮಂಡ್ಯದಲ್ಲಿ ಅಕಸ್ಮಾತ್ತಾಗಿ ಪರಿಚಯವಾದ ಒಬ್ಬರು ತನ್ನನ್ನು ಸೂರಜ್ ರಂಗಯ್ಯನ್ ಎಂದು ಹೇಳಿಕೊಂಡರು. ಕನ್ನಡದ್ದಲ್ಲದ ಕನ್ನಡದ ಹೆಸರು. ಕನ್ನಡದಂತೆಯೇ ಕೇಳಿಸುವ ಆ ಹೆಸರಿನ ಮೂಲವನ್ನು ಹೇಳುತ್ತಾ ಹೋದಂತೆ ಅದೊಂದು ಕಥೆಯೇ ಆದೀತು. ಆ ಕಥೆ ಮತ್ತೆಲ್ಲಿಗೋ ತಿರುವನ್ನು ಪಡೆದುಕೊಳ್ಳತೊಡಗಿತು. ಆ ಕಥೆ ಇತಿಹಾಸವಾಯಿತು. ಇತಿಹಾಸ ಭೀಕರತೆಯನ್ನು ಹೇಳಿತು. ಭೀಕರತೆ ಸೂತಕವನ್ನು ಹೇಳಿತು. ಆ ಇತಿಹಾಸ ವಿಚಿತ್ರವಾಗಿತ್ತು. ಅಪರೂಪವಾಗಿತ್ತು. ನೋವಿನಿಂದ ಕೂಡಿತ್ತು. ಆ ಇತಿಹಾಸ, ಭೀಕರತೆ, ನೋವಿನ ಉಳಿಕೆಯಂತೆ ಸೂರಜ್ ರಂಗಯ್ಯನ್ ಕಂಡರು. ಸೂಕ್ಷ್ಮವಾಗಿ ನೋಡಿದರೆ ಇನ್ನೂರು ವರ್ಷಗಳ ಹಿಂದಿನ ನೋವು ಇಂದೂ ಅವರ ಮುಖದಲ್ಲಿ ಇಣುಕುತ್ತಿತ್ತು. ಇತಿಹಾಸವನ್ನು ಹೇಳುತ್ತಾ ಹೇಳುತ್ತಾ ಸೂರಜ್ “ಹಾಗಾಗಿ ನಾವು ಇಂದಿಗೂ ದೀಪಾವಳಿ ಆಚರಿಸುತ್ತಿಲ್ಲ” ಎಂದು ಮುಗಿಸಿದರು. ಸೌಜನ್ಯಕ್ಕೂ ಹಬ್ಬಕ್ಕೆ ಕರೆಯಲಾರದ ಸ್ಥಿತಿ ಅವರದ್ದು. ಅವರು ಮಂಡ್ಯದ ಸದ್ಗಹಸ್ಥರು. ಅತಿ ವಿರಳ ಸಂಖ್ಯೆಯಲ್ಲಿರುವ ಮಂಡಯಂ ಅಯ್ಯಂಗಾರರರು ಎಂಬ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಮತ್ತಷ್ಟು ಓದು »