ವಿಷಯದ ವಿವರಗಳಿಗೆ ದಾಟಿರಿ

Archive for

9
ನವೆಂ

ಯಾರಿಗೂ ಬೇಡವಾದ ಪಾತಕಿ.. ದಾವೂದ್..!

– ಸಂತೋಷಕುಮಾರ ಮೆಹೆಂದಳೆ.

314922-dawood700( ಮೈಗಿಷ್ಟು ಪುಕ್ಕಟ್ಟೆ ಅನ್ನ, ತಂತಮ್ಮ ಮೋಜು ಮಸ್ತಿಯ ಚಟಕ್ಕಿಷ್ಟು ಯಾರದ್ದೋ ತಲೆ ಒಡೆದ ದುಡ್ಡು.. ಅದಕ್ಕೆ ಸರಿಯಾಗಿ ಮೆರೆಯೋದಕ್ಕೆ ಪಾಪಿಲೋಕದ ಕಡುಗತ್ತಲೆಯ ಸಾಮ್ರಾಜ್ಯ. ಕೊನೆಗೆ ಇದೆಲ್ಲದರಿಂದ ತಲೆ ತಪ್ಪಿಸಿಕೊಂಡು ಬದುಕಿಕೊಳ್ಳಲು ತೀರ ಪರಮ ನಿರ್ಲಜ್ಯ ಪಾಕಿಸ್ತಾನ. ಇಷ್ಟನ್ನಿಟ್ಟುಕೊಂಡು ಕತ್ತಲ ಲೋಕವನ್ನು ಆಳುತ್ತೇನೆಂದು ಹೊರಟು ಬಿಡುವವರು ತಮ್ಮ ಕೊನೆಯ ಕಾಲಾವಧಿಯುದ್ದಕ್ಕೂ ಇದೆಲ್ಲಾ ಶಾಶ್ವತ ಎಂದೇ ತಿಳಿದಿರುತ್ತಾರೆ. ದುರಾದೃಷ್ಟ ಮತ್ತು ನೂರಾರು ಹೆಣ್ಣುಮಕ್ಕಳ ಶಾಪ ಅವರನ್ನು ಜೀವಂತ ನರಕಕ್ಕೆ ನೂಕುತ್ತದೆ ಎನ್ನುವುದಕ್ಕೆ ಅಷ್ಟೆ ಉದಾಃ ಗಳು ನಮ್ಮ ಮುಂದಿವೆ. ಆದರೂ ಪಾತಕ ಲೋಕದ ಪಾತಕಿಗಳು ಬುದ್ಧಿ ಕಲಿತದ್ದೇ ಇಲ್ಲ. ಅದರಲ್ಲೂ ಪಾಕಿಸ್ತಾನದ ಕೊಚ್ಚೆಯಲ್ಲಿ ಹೊರಳುವ ಕ್ರಿಮಿಗಳಿಗೆ ಬುದ್ಧಿ ಮತ್ತು ವಿವೇಚನಾ ಶಕ್ತಿ ಬಿಟ್ಟು ಬೇರೆಲ್ಲ ಬೆಳೆಯುತ್ತದೆ. ಅದೇ ವಿನಾಶಕ್ಕೂ ಕಾರಣವಾಗುತ್ತದೆ. ಇಂಥ ಕೊಚ್ಚೆಯಂತಿರುವ ಕಥಾನಕದ ಕೊನೆಯ ತುಂಡು, ಅರೆಜೀವವಾಗಿರುವ ಪಾತಕಿ ತನಗೇ ತಾನೇ ಡಾನ್ ಎಂದು ಕರೆದುಕೊಂಡ ದಾವೂದ್ ಇಬ್ರಾಹಿಂ ಯಾವ ನೆಲಕ್ಕೆ ದ್ರೋಹ ಬಗೆದಿದ್ದನೋ ಅಲ್ಲಿವತ್ತು ಕಾಲೂರುವ ಬಗ್ಗೆ ಚಡಪಡಿಸುತ್ತಿದ್ದಾನೆ. ಆದರೆ ಊರಲು ಒಂದು ಕಾಲೇ ಉಳಿದಿಲ್ಲ. ಬದುಕಿನ ವಿಪರ್ಯಾಸ ಅಂದರೆ ಇದೇ ಅಲ್ಲವೇ..?) ಮತ್ತಷ್ಟು ಓದು »