ಪ್ರಧಾನಿಗಳ ನಡೆಯ ಹಿಂದೆ ಎಷ್ಟೆಲ್ಲ ಚಿಂತನೆ ಇದೆಯೆಂದರೆ…
– ರೋಹಿತ್ ಚಕ್ರತೀರ್ಥ
ಪ್ರಧಾನಿ ನರೇಂದ್ರ ಮೋದಿ ನವೆಂಬರ್ 8ರಂದು ಸಂಜೆ ಮಾಡಿದ ಭಾಷಣದಲ್ಲಿ ಐನೂರು ಮತ್ತು ಸಾವಿರ ರುಪಾಯಿ ಮುಖಬೆಲೆಯ ನೋಟುಗಳನ್ನು ಸರಕಾರ ವಾಪಸು ಪಡೆಯಲಿದೆ ಎಂಬ ಘೋಷಣೆ ಮಾಡಿದರು. ಈ ಕಾರ್ಯಾಚರಣೆ 4 ವಿಷಯಗಳನ್ನು ಗುರಿಯಾಗಿಟ್ಟುಕೊಂಡಿದೆ: ಭ್ರಷ್ಟಾಚಾರ, ಕಪ್ಪುಹಣ, ಭಯೋತ್ಪಾದನೆ ಮತ್ತು ಖೋಟಾನೋಟು. ಈ ನಾಲ್ಕೂ ವಿಷಯಗಳು ಒಂದಕ್ಕೊಂದು ತಳುಕು ಹಾಕಿಕೊಂಡಿರುವುದರಿಂದ ಅವನ್ನು ಒಟ್ಟಾಗಿ ಪರಿಹರಿಸುವ ಇಲ್ಲವೇ ನಿಶ್ಶಕ್ತಗೊಳಿಸುವ ಅತ್ಯಂತ ಪ್ರಬಲ, ಪರಿಣಾಮಕಾರಿ ಪರಿಹಾರದ ಅಗತ್ಯ ಹಲವು ವರ್ಷಗಳಿಂದ ಇತ್ತು. ಹತ್ತು ವರ್ಷ ದೇಶವನ್ನು ಆಳಿದ ನಾಮಕಾವಾಸ್ತೆ ಆರ್ಥಿಕತಜ್ಞರಿಗಾಗದ ಗಟ್ಟಿ-ದಿಟ್ಟ ನಡೆಯನ್ನು ಮೋದಿ ತೋರಿಸಿ ನಾಯಕತ್ವದಲ್ಲಿ ಜ್ಞಾನದ ಜೊತೆ ಧೈರ್ಯವೂ ಬೇಕೆಂಬ ಸಂದೇಶ ರವಾನಿಸಿದ್ದಾರೆ. ಮತ್ತಷ್ಟು ಓದು
ಮಾನಸಿಕ ದಾಳಿಗಳು ನಮ್ಮನ್ನು ಆಯಾಸಗೊಳಿಸುವುದಿಲ್ಲ : ಡಾ. ಮೋಹನ್ ಆಳ್ವ
2016 ರ ನುಡಿಸಿರಿ ಕಾರ್ಯಕ್ರಮ ನಡೆಯುತ್ತಿರುವ ಈ ಸಮಯದಲ್ಲಿ ಆಳ್ವಾಸ್ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರವರ ಬಳಿ ನುಡಿಸಿರಿಯ ಉದ್ದೇಶಗಳ ಕುರಿತು ಶ್ರೀಮತಿ ಮೌಲ್ಯ ಜೀವನ್ ರವರು ನಡೆಸಿದ ಒಂದು ಸಂದರ್ಶನ ನಿಲುಮೆಯ ಓದುಗರಿಗಾಗಿ ಇಲ್ಲಿದೆ.
ಮೌಲ್ಯ ಜೀವನ್: ಈ ಮೊದಲು ‘ಕನ್ನಡ ಮನಸ್ಸು’ ಎಂಬ ಪರಿಕಲ್ಪನೆಯಲ್ಲಿ ಆಳ್ವಾಸ್ ನುಡಿಸಿರಿ ನಡೆಯುತ್ತಿತ್ತು. ಆದರೆ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ನಂತರ ವಿಭಿನ್ನ ಪರಿಕಲ್ಪನೆಗಳಲ್ಲಿ ನುಡಿಸಿರಿ ನಡೆಯುತ್ತ ಬಂದಿದೆ. ಈ ಬಾರಿ `ಕರ್ನಾಟಕ-ನಾಳೆಗಳ ನಿರ್ಮಾಣ’ ಎಂಬ ಕೇಂದ್ರ ವಿಷಯದಡಿಯಲ್ಲಿ ನುಡಿಸಿರಿ ನಡೆಯುತ್ತಿದೆ. ಈ ಪರಿಕಲ್ಪನೆಗಳ ಬಗ್ಗೆ ನೀವು ಏನು ಹೇಳುತ್ತೀರಿ? ಮತ್ತಷ್ಟು ಓದು
ನಂಬಿಕೆ
– ಗೀತಾ ಹೆಗಡೆ
ಬದುಕೆಂಬ ಪಯಣದಲ್ಲಿ ಸಾವಿರಾರು ಜನರ ಪರಿಚಯ ಒಡನಾಟ ನಮಗಾಗುವುದು ಸಹಜ. ಈ ಸಹಜತೆಯಲ್ಲಿ ಎದುರಾಗುವ ಘಟನೆಗಳು ಹಲವಾರು. ಈ ಘಟನೆಗಳು ಮಹತ್ವ ಪಡೆಯುವುದು ಆಳವಾಗಿ ಮನಸ್ಸಿಗೆ ನಾಟಿದರೆ ಮಾತ್ರ ಸಾಧ್ಯ. ಅದಿಲ್ಲವಾದರೆ ಅದಲ್ಲಿಗೆ ಮರೆತು ಹೋಗುತ್ತದೆ. ಹಾಗಾದರೆ ಈ ಘಟನೆಗಳ ಹಿಂದೆ ಇರುವ ವಿಷಗಳಿಗೆಗೆ ಕಾರಣರಾದವರ ಮೇಲಿನ ನಂಬಿಕೆ ಎಲ್ಲರ ಬಗ್ಗೆ ಯಾಕೆ ಉಂಟಾಗುವುದಿಲ್ಲ? ಕೇವಲ ಕೆಲವು ಮನುಷ್ಯರ ಬಗ್ಗೆ ಮಾತ್ರ ಏಕೆ ನಂಬಿಕೆ ಉಂಟಾಗುತ್ತದೆ? ಕಾರಣ ಏನು? ಏಕೆ ಹೀಗೆ? ಆ ಭಾವನೆ ಯಾವ ಹಂತದಲ್ಲಿ ಮನಸ್ಸನ್ನು ಕಾಡುತ್ತದೆ? ಮತ್ತಷ್ಟು ಓದು