ನೋಟು ರದ್ದತಿಯ ಪೂರ್ವ ತಯಾರಿ ಮತ್ತು ದೂರ ದೃಷ್ಟಿತ್ವ…!
– ಶ್ರೇಯಾಂಕ ಎಸ್ ರಾನಡೆ
ಕಳೆದ ೭೦ ವರ್ಷಗಳಲ್ಲಿ ಭಾರತದ ಪ್ರತೀ ಪ್ರಜೆಗೆ ಬ್ಯಾಂಕ್ ಒಂದರಲ್ಲಿ ಖಾತೆ ತೆರೆಯುವಂತಾಗಲು ಹಿಂದಿನ ಸರಕಾರದ ‘ಸ್ವಾಭಿಮಾನ್’ದಂತಹ ಯೋಜನೆಯಿಂದಲೂ ಸಾಧ್ಯವಾಗಲಿಲ್ಲ. ಅದಕ್ಕೆ ಜನಧನ್ ಯೋಜನೆ ಬರಬೇಕಾಯಿತು. ಇದು ಉದ್ಯೋಗ ಖಾತ್ರಿಯಂತಹ ಸರಕಾರದ ೨೬ ಯೋಜನೆಗಳಲ್ಲಿ ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆಯಾಗುವುದರಿಂದ ಆನೇಕ ರೀತಿಯ ಸೋರಿಕೆ, ಭ್ರಷ್ಟಾಚಾರ ಹಾಗೂ ದಾಖಲೆಗಳ ಕೊರತೆ ಎಲ್ಲದಕ್ಕೂ ಕಡಿವಾಣ ಹಾಕಿದಂತಾಯಿತು. ಅದಕ್ಕೆ ಪೂರಕವಾಗಿ ಕಳೆದ ವರ್ಷದಿಂದ ಜಾರಿಗೆ ತಂದ “ಜಾಮ್ ಟ್ರಿನಿಟಿ” ಯೋಜನೆ, ಅಂದರೆ ವ್ಯಕ್ತಿಯೊಬ್ಬರ ಜನ್ ಧನ್ ಖಾತೆ- ಆಧಾರ್ ಸಂಖ್ಯೆ-ಮೊಬೈಲ್ ಸಂಖ್ಯೆ. ಇವುಗಳನ್ನು ಬೆಸೆಯುವ ಮಹತ್ವದ ಕಾರ್ಯದಿಂದ ಸೋರಿಕೆ, ನಕಲಿ ಫಲಾನುಭವಿಗಳು, ನಕಲಿ ಖಾತೆಯಿಂದ ನಡೆಸಬಹುದಾದ ಮಾರಕ ವ್ಯವಹಾರಗಳನ್ನು ತಡೆಯಲು ಸಾಧ್ಯವಾಗಲಿದೆ. ಇದನ್ನೇ ಭಾನುವಾರ ಪ್ರಧಾನಿಯವರು ವ್ಯಕ್ತಪಡಿಸಿರುವ ದೂರದೃಷ್ಟಿಯ ಮನಿ ಕಿ ಬಾತ್. ಇಡೀ ದೇಶವೇ ಮೊಬೈಲ್ ಮೂಲಕ ನೋಟು ರಹಿತ ಆರ್ಥಿಕ ವ್ಯವಹಾರದತ್ತ ಸಾಗಬೇಕೆಂಬ ಇಂಗಿತಕ್ಕೆ ಪೂರಕವಾಗಿ ಬಹಳ ಅಚ್ಚುಕಟ್ಟಾಗಿ ಸಜ್ಜುಗೊಳಿಸಿದ ಡಿಜಿಟಲ್ ಬ್ಯಾಂಕಿಂಗ್ ಗೆ ಪೂರ್ವಭೂಮಿಕೆ. ಮತ್ತಷ್ಟು ಓದು