ವಿಷಯದ ವಿವರಗಳಿಗೆ ದಾಟಿರಿ

Archive for

10
ನವೆಂ

ನನ್ನ ಚೊಚ್ಚಲ ಪರ್ವತಾರೋಹಣ

– ಅಭಿಜಿತ್ ಕೆ ಜಾಯಕ್ಕನವರ

kp4ನನಗೆ ತುಂಬಾ ಖುಷಿಯಾದಾಗ ಬರೆಯಬೇಕೆನಿಸುತ್ತದೆ. ಈಗ ಬರೆಯುತ್ತಿರುವ ಖುಷಿಗೆ ಕಾರಣ ಮೂರು. ಒಂದು ಸತತ ೭೦ ಘಂಟೆಗಳ ನಂತರ ಸುಖವಾಗಿ ನಿದ್ರೆ ಮಾಡಿದ್ದು, ಎರಡು ನನ್ನ ಮೊದಲ ಪರ್ವತಾರೋಹಣವನ್ನು ಯಶಸ್ವಿಯಾಗಿ ಮುಗಿಸಿದ್ದು, ಮೂರು ಈ ಎರಡಕ್ಕಿಂತಲೂ ಮುಖ್ಯವಾದದ್ದು ಅದೆಂದರೆ ಪರ್ವತಾರೋಹಣದ ಸಮಯದಲ್ಲಿ ನಾನು ಮತ್ತು ನನ್ನ ನಾಲ್ಕು ಜನ ಗೆಳೆಯರು ಕೈಗೊಂಡ ಒಂದು ಸಣ್ಣ ಕಾರ್ಯ ( an initiative ). ಈ ನನ್ನ ಪರ್ವತಾರೋಹಣದ ಮೇಲೆ ಒಂದು ಸುದೀರ್ಘವಾದ ಪ್ರಭಂದವನ್ನೇ ಬರೆಯಬಹುದಾದರೂ, ನನ್ನ ಮನಸ್ಸು ಆ ಚಿಕ್ಕ ಘಟನೆಯೊಂದನ್ನು ಮಾತ್ರ ಪ್ರಸ್ತಾಪಿಸಲು ಹಾತೊರೆಯುತ್ತಿದೆ. ಮತ್ತಷ್ಟು ಓದು »

10
ನವೆಂ

ಅಬ್ ಕಿ ಬಾರ್, ‘ಟ್ರಂಪ್ ಸರ್ಕಾರ್’

– ಶ್ರೇಯಾಂಕ ಎಸ್ ರಾನಡೆ

ಎಲ್ಲಾ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ತಲೆಕೆಳಗೆ ಮಾಡುವ ಮೂಲಕ, ಸ್ಥಾಪಿತ ರಾಜಕೀಯ ಶಕ್ತಿಗಳನ್ನು ಬೀಳಿಸಿದ ಡೊನಾಲ್ಡ್ ಟ್ರಂಪ್ ಅಮೆರಿಕದ 45ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದು ಮೋದಿಯವರನ್ನು ಟ್ರಂಪ್ ರೀತಿಯ ವ್ಯಕ್ತಿತ್ವದವರೆಂದೋ, ಟ್ರಂಪ್ ಮೋದಿಯವರಷ್ಟೇ ಉತ್ತಮರೆಂದೋ ಹೇಳುವ ಪ್ರಯತ್ನವಲ್ಲ. ಆದರೆ ಭಾರತದ ಅನುಕೂಲಕ್ಕೆ ತಕ್ಕಂತಹ ಸೂಕ್ತ ಸಮಯ, ವಾತಾವರಣ “ನ ಭೂತೋ ಭವಿಷ್ಯತಿಃ” ಎಂಬಂತೆ ಅಮೆರಿಕದಲ್ಲಿ ನಿರ್ಮಾಣಗೊಂಡಿದೆ. 21ನೇ ಶತಮಾನ ಭಾರತ ಹಾಗೂ ಉಪಖಂಡದ್ದಾಗಲು ಭಾರತ ಈ ಸಮಯವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು. ಭಾರತ ಹಾಗೂ ಅಮೆರಿಕದ ಸಮಾನ ಆಸಕ್ತಿಗಳನ್ನು ದ್ವಿಪಕ್ಷೀಯ ಬಾಂಧವ್ಯದ ಮತ್ತೊಂದು ದಿಕ್ಕಿಗೆ ಕೊಂಡೊಯ್ಯಬೇಕು. ಮತ್ತಷ್ಟು ಓದು »

9
ನವೆಂ

ಯಾರಿಗೂ ಬೇಡವಾದ ಪಾತಕಿ.. ದಾವೂದ್..!

– ಸಂತೋಷಕುಮಾರ ಮೆಹೆಂದಳೆ.

314922-dawood700( ಮೈಗಿಷ್ಟು ಪುಕ್ಕಟ್ಟೆ ಅನ್ನ, ತಂತಮ್ಮ ಮೋಜು ಮಸ್ತಿಯ ಚಟಕ್ಕಿಷ್ಟು ಯಾರದ್ದೋ ತಲೆ ಒಡೆದ ದುಡ್ಡು.. ಅದಕ್ಕೆ ಸರಿಯಾಗಿ ಮೆರೆಯೋದಕ್ಕೆ ಪಾಪಿಲೋಕದ ಕಡುಗತ್ತಲೆಯ ಸಾಮ್ರಾಜ್ಯ. ಕೊನೆಗೆ ಇದೆಲ್ಲದರಿಂದ ತಲೆ ತಪ್ಪಿಸಿಕೊಂಡು ಬದುಕಿಕೊಳ್ಳಲು ತೀರ ಪರಮ ನಿರ್ಲಜ್ಯ ಪಾಕಿಸ್ತಾನ. ಇಷ್ಟನ್ನಿಟ್ಟುಕೊಂಡು ಕತ್ತಲ ಲೋಕವನ್ನು ಆಳುತ್ತೇನೆಂದು ಹೊರಟು ಬಿಡುವವರು ತಮ್ಮ ಕೊನೆಯ ಕಾಲಾವಧಿಯುದ್ದಕ್ಕೂ ಇದೆಲ್ಲಾ ಶಾಶ್ವತ ಎಂದೇ ತಿಳಿದಿರುತ್ತಾರೆ. ದುರಾದೃಷ್ಟ ಮತ್ತು ನೂರಾರು ಹೆಣ್ಣುಮಕ್ಕಳ ಶಾಪ ಅವರನ್ನು ಜೀವಂತ ನರಕಕ್ಕೆ ನೂಕುತ್ತದೆ ಎನ್ನುವುದಕ್ಕೆ ಅಷ್ಟೆ ಉದಾಃ ಗಳು ನಮ್ಮ ಮುಂದಿವೆ. ಆದರೂ ಪಾತಕ ಲೋಕದ ಪಾತಕಿಗಳು ಬುದ್ಧಿ ಕಲಿತದ್ದೇ ಇಲ್ಲ. ಅದರಲ್ಲೂ ಪಾಕಿಸ್ತಾನದ ಕೊಚ್ಚೆಯಲ್ಲಿ ಹೊರಳುವ ಕ್ರಿಮಿಗಳಿಗೆ ಬುದ್ಧಿ ಮತ್ತು ವಿವೇಚನಾ ಶಕ್ತಿ ಬಿಟ್ಟು ಬೇರೆಲ್ಲ ಬೆಳೆಯುತ್ತದೆ. ಅದೇ ವಿನಾಶಕ್ಕೂ ಕಾರಣವಾಗುತ್ತದೆ. ಇಂಥ ಕೊಚ್ಚೆಯಂತಿರುವ ಕಥಾನಕದ ಕೊನೆಯ ತುಂಡು, ಅರೆಜೀವವಾಗಿರುವ ಪಾತಕಿ ತನಗೇ ತಾನೇ ಡಾನ್ ಎಂದು ಕರೆದುಕೊಂಡ ದಾವೂದ್ ಇಬ್ರಾಹಿಂ ಯಾವ ನೆಲಕ್ಕೆ ದ್ರೋಹ ಬಗೆದಿದ್ದನೋ ಅಲ್ಲಿವತ್ತು ಕಾಲೂರುವ ಬಗ್ಗೆ ಚಡಪಡಿಸುತ್ತಿದ್ದಾನೆ. ಆದರೆ ಊರಲು ಒಂದು ಕಾಲೇ ಉಳಿದಿಲ್ಲ. ಬದುಕಿನ ವಿಪರ್ಯಾಸ ಅಂದರೆ ಇದೇ ಅಲ್ಲವೇ..?) ಮತ್ತಷ್ಟು ಓದು »

8
ನವೆಂ

ಭಾರವಾಗದಿರಲಿ ಬದುಕು..!

– ದಿವ್ಯಾಧರ ಶೆಟ್ಟಿ ಕೆರಾಡಿ

hanuman-sanjivaniಕೆಲ ದಿನದ ಹಿಂದೆ ನಮ್ಮ ಹುಡುಗನೊಬ್ಬ ಮನೆಯಲ್ಲಿದ್ದ ಬೆಕ್ಕನ್ನು ಮೇಲೆ ಎತ್ತಿ ಎಸೆಯುತ್ತ ಆಟ ಆಡುತ್ತಿದ್ದ ನನಗ್ಯಾಕೊ ಇದು ವಿಪರೀತ ಅನ್ನಿಸಿ ನಾನು ಯಾಕೋ ಬೆಕ್ಕಿನ ಜೀವ ತಿಂತಿಯಾ ಅಂತ ರೇಗಿದ್ರೆ ಅವನು ನೋಡಣ್ಣ ಬೆಕ್ಕನ್ನು ಎಷ್ಟೇ ಮೇಲೆ ಎಸೆದ್ರೂ ಹೇಗೆ ತಿರುಗಿಸಿ ಎಸೆದ್ರೂ ಕೆಳಕ್ಕೆ ಬೀಳೊವಾಗ ಪಾದ ನೆಲಕ್ಕೂರಿ ನಿಲ್ಲುತ್ತದೆ ಎಂದು ಇನ್ನೊಮ್ಮೆ ಎಸೆದ ಗರಗರನೆ ತಿರುಗಿದ ಬೆಕ್ಕು ಕಾಲೂರಿ ನಿಂತು ಮಿಯ್ಯಾವ್ ಎಂದು ಓಡಿತು.. ನನಗೂ ಇದು ಒಂದು ಕ್ಷಣ ಅರೇ ಹೌದಲ್ವ..! ಎಂದು ಅನ್ನಿಸಿತು. ಇದೇನು ಯಾರಿಗೂ ಗೊತ್ತಿಲ್ಲದ ವಿಷಯವೆನಲ್ಲ, ಅದ್ಭುತವಾದ ಸಂಶೋದನೆಯೂ ಅಲ್ಲ.. ಆದರೆ ಇದನ್ನು ಸ್ವಲ್ಪ ಬದುಕಿಗೆ ಅಳವಡಿಸಿಕೊಂಡ್ರೆ ಬೆಕ್ಕನ್ನೇ ಬದುಕಿಗೆ ‘ಗುರು’ ಅಂದುಕೊಂಡ್ರೆ ಎಷ್ಟು ಚೆನ್ನಾಗಿರುತ್ತಲ್ಲ ಅನ್ನಿಸಿ ಇಲ್ಲಿ ನನಗನ್ನಿಸಿದ್ದನ್ನು ಬರೆಯುತ್ತಿದ್ದೇನೆ.. ಮತ್ತಷ್ಟು ಓದು »

7
ನವೆಂ

ಟಿಪ್ಪು ಜಯಂತಿ ಬೇಕಿರುವುದು ಯಾರಿಗೆ ?

– ರೋಹಿತ್ ಚಕ್ರತೀರ್ಥ

dsc8476_tipu_sultan_mಟಿಪ್ಪು ಜಯಂತಿಯಿಂದ ಯಾರಿಗೆ ಉಪಕಾರ ಎಂದು ಕೆಲವರು ಕೇಳುತ್ತಿದ್ದಾರೆ. ಕಳೆದ ವರ್ಷ ಸರಕಾರ ಪ್ರತಿ ಜಿಲ್ಲಾಡಳಿತಕ್ಕೆ 50,000 ರುಪಾಯಿ, ಪ್ರತಿ ತಾಲೂಕು ಕಚೇರಿಗೆ 25,000 ರುಪಾಯಿ ಕೊಟ್ಟು “ಟಿಪ್ಪು ಸುಲ್ತಾನ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸತಕ್ಕದ್ದು” ಎಂಬ ಖಡಕ್ ಸುತ್ತೋಲೆ ಕಳಿಸಿತ್ತು. ನಮ್ಮೂರ ಕಡೆ ಒಂದು ತಾಲೂಕು ಪಂಚಾಯಿತಿಗೂ 25,000 ರುಪಾಯಿಗಳು ಸಂದಾಯವಾಗಿದ್ದವು. ಆ ಕಚೇರಿಯಲ್ಲಿ ನೀರಿನ ವ್ಯವಸ್ಥೆ ಇಲ್ಲ; ಇದ್ದೊಂದು ಕೊಳ ಒಡೆದುಹೋಗಿ ಆರು ತಿಂಗಳ ಮೇಲಾಯಿತು; ಗೋಡೆಗೆ ಸುಣ್ಣಬಣ್ಣ ಹೊಡೆಸದೆ ನಾಲ್ಕು ವರ್ಷಗಳಾಗುತ್ತ ಬಂತು; ಊರಿನಲ್ಲೊಂದು ಸಣ್ಣ ಸಂಕ ಕಟ್ಟಿಸಬೇಕೆಂದು ಬೇಡಿಕೆ ಇಟ್ಟೂ ಇಟ್ಟೂ ಅರ್ಜಿ ಕೊಟ್ಟೂ ಕೊಟ್ಟೂ ಬೇಸತ್ತು ಕೊನೆಗೆ ಊರವರೇ ಒಂದಷ್ಟು ದುಡ್ಡು ಹಾಕಿ ಏನೋ ತಮ್ಮ ಸಂಕ ತಾವೇ ಕಟ್ಟಿಕೊಂಡಿದ್ದಾರೆ. ಆ ತಾಲೂಕಿನ ಕೆಲವು ರಸ್ತೆಗಳಿಗೆ ಒಂದೊಮ್ಮೆ ಓಬೀರಾಯನ ಕಾಲದಲ್ಲಿ ಜಲ್ಲಿ ಹೊಡೆಸಿದ್ದು, ಅದೀಗ ಡಾಂಬರಿಗೆ ಅನುದಾನ ಸಿಗದೆ ಮತ್ತೆ ಮಣ್ಣಿನ ರಸ್ತೆಯಾಗುವ ಸ್ಥಿತಿಗೆ ಬಂದಿದೆ. ಮತ್ತಷ್ಟು ಓದು »

7
ನವೆಂ

ಭವಿಷ್ಯತ್ತಿನಲ್ಲಿ ಯಾವ ಹಬ್ಬ ಕೈಬಿಡಲಿದೆಯೋ…?

– ಸಂತೋಷಕುಮಾರ ಮೆಹೆಂದಳೆ. ಕೈಗಾ 

dsc8476_tipu_sultan_m
( ನಾನು ನನ್ನ ಸಮಾಜ ಮತ್ತು ಧರ್ಮಾಧಾರಿತ ವೃತ್ತದಲ್ಲಿ ನನ್ನ ಹಿರಿಮೆಯನ್ನು ಸ್ಥಾಪಿಸಿಕೊಳ್ಳುವುದು ಹೇಗೆ..? ಇನ್ನೊಂದು ಧರ್ಮವನ್ನು ಮುಗಿಸಿ ಹಾಕುವುದರ ಮೂಲಕ. ಇದು ಸುಲಭದ ದಾರಿ ಮತ್ತು ಸರಿಯಾಗಿ ಇನ್ನೂರು ವರ್ಷಗಳ ಹಿಂದೆ ಟಿಪ್ಪು ಮಾಡಿದ್ದೂ ಅದೇ. ಅನಾಮತ್ತಾಗಿ ಲಕ್ಷಗಟ್ಟಲೇ ಹಿಂದೂಗಳನ್ನು ವರ್ಷವಧಿಯೊಳಗೆ ಮುಗಿಸಿ ಹಾಕಿ, ಕೊಡವರ ಒಂದು ತಲೆಮಾರನ್ನೇ ನಿರ್ನಾಮ ಮಾಡಿ, ಅದನ್ನು ಸಾಧನೆ ಎಂಬಂತೆ ಪತ್ರಗಳ ಮೂಲಕ ಪ್ರಚುರಪಡಿಸಿದ ಕೂಡಾ. ಆದರೆ ಇವತ್ತಿಗೂ ಅವನ ಭಜನೆ ಮಾಡುತ್ತಿರುವ ಭಟ್ಟಂಗಿಗಳಿಗೆ ತಾವೂ ಮುಂದೊಮ್ಮೆ ಇಂತಹದ್ದೇ ಪರಿಸ್ಥಿತಿಗೆ ಈಡಾಗಲಿದ್ದೇವೆ ಎನ್ನುವ ಅರಿವಾದರೂ ಬೇಡವಾ…? )   ಮತ್ತಷ್ಟು ಓದು »

5
ನವೆಂ

ಗಾಳಿಪಟ ಮತ್ತು ಆಲದ ಮರ

– ಗುರುರಾಜ ಕೋಡ್ಕಣಿ. ಯಲ್ಲಾಪುರ

ಗಲಿರಾಮ್ ನಾಥನ್ ಎನ್ನುವ ಗಲ್ಲಿಯಲ್ಲಿದ್ದ ಹಳೆಯ ಪಾಳುಬಿದ್ದ ಮಸೀದಿಯ ಸಂದಿಯೊಂದರಿಂದ ಟಿಸಿಲೊಡೆದು ವಿಶಾಲವಾಗಿ ಬೆಳೆದುಕೊಂಡಿತ್ತು ಆ ಆಲದಮರ. ಅದೇ ಮರದ ಟೊಂಗೆಯೊಂದಕ್ಕೆ ಸಿಕ್ಕಿಕೊಂಡಿತ್ತು ಅಲಿಯ ಗಾಳಿಪಟ. ಹರುಕು ಅಂಗಿಯನ್ನು ಧರಿಸಿದ್ದ ಅಲಿ, ಮರದ ಮೇಲೆ ಸಿಕ್ಕಿಬಿದ್ದಿದ್ದ ಪಟವನ್ನು ಬಿಡಿಸಿಕೊಳ್ಳಲು ಹಲವು ಬಾರಿ ವಿಫಲಪ್ರಯತ್ನ ನಡೆಸಿ ಕೊನೆಗೊಮ್ಮೆ ಹತಾಶನಾಗಿ ಕೈಚೆಲ್ಲಿದ್ದ. ಅಲ್ಲಲ್ಲಿ ಉರುಟುಕಲ್ಲುಗಳೆದ್ದು ಕಾಣುತ್ತಿದ್ದ ಕಿರಿದಾದ ಓಣಿಯಲ್ಲಿ ಬರಿಗಾಲಿನಲ್ಲಿ ಓಡುತ್ತ ತನ್ನ ತಾತನತ್ತ ತೆರಳಿದ. ಮನೆಯ ಹಿತ್ತಲಿನಲ್ಲಿ ನೀರವ ಮಧ್ಯಾಹ್ನದ ಬಿರುಬಿಸಿಲಿನಲ್ಲಿ ಸಣ್ಣ ಮಂಪರಿನ ನಡುವೆ ಹಗಲುಗನಸು ಕಾಣುತ್ತ ಕುಳಿತಿದ್ದ ತಾತನನ್ನು ಕಾಣುತ್ತಲೇ, ‘ಅಜ್ಜಾ, ನನ್ನ ಗಾಳಿಪಟ ಕಳೆದುಹೋಯಿತು’ ಎಂದು ಜೋರಾಗಿ ಕಿರುಚಿದ. ಮೊಮ್ಮಗನ ಕೂಗಿನಿಂದ ಮಂಪರು ಹಾರಿಹೋದ ಮುದಿಯ ನಿಧಾನವಾಗಿ ತನ್ನ ತಲೆಯನ್ನೆತ್ತಿದ. ಮದರಂಗಿಯ ಬಣ್ಣದಿಂದಾಗಿ ಕೆಂಚಗಾಗಿದ್ದ ತನ್ನ ಮುಪ್ಪಿನ ಗಡ್ಡವನ್ನೊಮ್ಮೆ ಸಾವಕಾಶವಾಗಿ ನೀವುತ್ತ, ‘ಪಟದ ನೂಲು ಕಿತ್ತು ಹೋಗಿತ್ತಾ..’? ಎಂದು ಮೊಮ್ಮಗನನ್ನು ಪ್ರಶ್ನಿಸಿದ. ಕಳಪೆ ಗುಣಮಟ್ಟದ ದಾರದಿಂದ ಹಾರಿಸಲ್ಪಟ್ಟ ಪಟವಿದ್ದಿರಬಹುದು ಎಂಬ ಊಹೆ ಆತನದ್ದು. ‘ಇಲ್ಲಾ ಅಜ್ಜ, ನೂಲು ಹರಿದಿಲ್ಲ, ಅದು ಆಲದ ಮರದ ಕೊಂಬೆಗೆ ಸಿಕ್ಕಿಬಿದ್ದಿದೆ’ ಎಂದುತ್ತರಿಸಿದ ಮೊಮ್ಮಗ. ಮತ್ತಷ್ಟು ಓದು »

4
ನವೆಂ

ಕಲೆಕ್ಷನ್ ಹಣ ಹಂಚಿಕೆ ವಿಚಾರಕ್ಕೆ ಗಂಜಿ ಚಲೋ ನಾಯಕರ ಮಾರಾಮಾರಿ: ಐವರಿಗೆ ಗಾಯ (ಸುಳ್ಸುದ್ದಿ)

– ಪ್ರವೀಣ್ ಕುಮಾರ್, ಮಾವಿನಕಾಡು

%e0%b2%ae%e0%b2%be%e0%b2%b0%e0%b2%be%e0%b2%ae%e0%b2%be%e0%b2%b0%e0%b2%bfಕೆಲವು ದಿನಗಳ ಹಿಂದೆ “ಗಂಜಿಗಾಗಿ ಚಲೋ” ಎನ್ನುವ ಕಾರ್ಯಕ್ರಮ ಮಾಡಿದ್ದ ತಂಡವೊಂದು ಆ ಕಾರ್ಯಕ್ರಮಕ್ಕೆಂದು ಕಲೆಕ್ಷನ್ ಮಾಡಿದ್ದ ಹಣವನ್ನು ಹಂಚಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕ್ ಮಾಡಿಕೊಂಡು ಪರಸ್ಪರ ಬಡಿದಾಡಿ ಆಸ್ಪತ್ರೆ ಸೇರಿದ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.

ಘಟನೆಯ ಹಿನ್ನೆಲೆ: ಕೆಲವು ದಿನಗಳ ಹಿಂದೆ ನಕ್ಸಲ್ ಹೋರಾಟಗಾರರು, ಅನ್ಯ ಕೋಮಿನ ಕೆಲವರ ಬೆಂಬಲದೊಂದಿಗೆ ಕೆಲ ದಪಹೋಗಾರರ ಜೊತೆ ಸೇರಿ ಗಂಜಿಗಾಗಿ ಚಲೋ ಎನ್ನುವ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮಕ್ಕೆ ಒಂದು ಲಕ್ಷ ಜನರನ್ನು ಸೇರಿಸುವುದಾಗಿ ಹೇಳಿಕೊಂಡಿದ್ದ ಆ ಹೋರಾಟಗಾರರು ತಳಮಟ್ಟದ ಶೋಷಿತರಷ್ಟೇ ಅಲ್ಲದೇ ರಾಜಕಾರಣಿಗಳೂ ಸೇರಿದಂತೆ ಹಲವಾರು ಜನರಿಂದ ರೂ.500 ರಿಂದ ಐವತ್ತು ಸಾವಿರದವರೆಗೆ ಹಣವನ್ನು ಕಲೆಕ್ಷನ್ ಮಾಡಿದ್ದರು. ಕಲೆಕ್ಷನ್ ಆದ ಆ ಹಣದ ಒಟ್ಟು ಮೊತ್ತ ಸುಮಾರು ಎರಡು ಕೋಟಿಗೂ ಮೀರಿತ್ತು. ಆದರೆ ಒಂದು ಲಕ್ಷ ಜನರು ಸೇರುತ್ತಾರೆ ಎಂದು ಬಿಂಬಿತವಾಗಿದ್ದ ಆ ಕಾರ್ಯಕ್ರಮಕ್ಕೆ ಸೇರಿದ್ದು ಕೇವಲ 632 ಜನ ಮಾತ್ರ! ಕಾರ್ಯಕ್ರಮಕ್ಕೆ ಖರ್ಚಾಗಿದ್ದು ಕೇವಲ ನಾಲ್ಕೂವರೆ ಲಕ್ಷಗಳು! ಇದರಿಂದಾಗಿ ಬರೋಬ್ಬರಿ ಎರಡು ಕೋಟಿ ರೂಪಾಯಿಗಳಷ್ಟು ಹಣ ಹೋರಾಟಗಾರರ ಬಳಿಯೇ ಉಳಿಯಿತು. ಇದನ್ನು ಮೊದಲೇ ಯೋಚಿಸಿದ್ದ ಕಾರ್ಯಕ್ರಮದ ಆಯೋಜಕರಾದ ಹೋರಾಟಗಾರರು ಮುಂದಿನ ವಾರ ಎಲ್ಲರೂ ತುಮಕೂರು ರಸ್ತೆಯ “ಫಿಶ್ ಲ್ಯಾಂಡ್ ಢಾಬಾ” ದಲ್ಲಿ ಕೂತು ಹಂಚಿಕೊಳ್ಳುವುದೆಂದು ತೀರ್ಮಾನಿಸಿ ಕಾರ್ಯಕ್ರಮಕ್ಕೆ ತಮ್ಮ ತನು-ಮನವನ್ನು ಅರ್ಪಿಸಿದ್ದ ರಾಜಕಾರಣಿಯೊಬ್ಬರ ಸಲಹೆಗಾರರ ಕೈಲಿ ಆ ಹಣವನ್ನು ಕೊಟ್ಟು ತಮ್ಮ ತಮ್ಮ ಮನೆಗಳನ್ನು ತಲುಪಿದ್ದರು. ಮತ್ತಷ್ಟು ಓದು »

4
ನವೆಂ

ಯೌವನದ ಬರೆ..!

– ಗೀತಾ ಹೆಗ್ಡೆ

imagesಜಗತ್ತು ಎಷ್ಟು ವಿಚಿತ್ರ. ಯಾವುದು ನಮ್ಮ ಕೈಗೆ ಸಿಗುತ್ತದೆ ಎಂದು ಭಾವಿಸುತ್ತೇವೊ ಅದು ಸುಲಭದಲ್ಲಿ ಸಿಗೋದೇ ಇಲ್ಲ. ನನಗಾಗಿ ಈ ಜಗತ್ತಿದೆ. ನನ್ನ ಆಸೆಗಳೆಲ್ಲ ಇಲ್ಲಿ ಈಡೇರುತ್ತದೆ, ನಾ ಯಾವತ್ತೂ ಸೋಲೋದೆ ಇಲ್ಲ ಅನ್ನುವ ಭಾವಾವೇಶದಲ್ಲಿ ಸಾಗುವ ಈ ಯೌವ್ವನದ ಒಂದೊಂದು ಮಜಲು ದಾಟಿಕೊಂಡು ಹೋದಂತೆಲ್ಲ ಪರಿಸ್ಥಿತಿಯ ಅನುಭವ ತನ್ನಷ್ಟಕ್ಕೆ ಚಿತ್ತವನ್ನು ಕಲಕಲು ಶುರುಮಾಡುತ್ತದೆ. ನೂರೆಂಟು ಕನಸುಗಳ ಆಗರ ಈ ಯೌವ್ವನದ ಮೆಟ್ಟಿಲು. ಏರುವ ಗತಿ ತೀವ್ರವಾದಂತೆಲ್ಲ ಆಸೆಗಳ ಭಂಡಾರ ಹೆಚ್ಚುತ್ತಲೇ ಹೋಗುತ್ತದೆ. ಏರುವ ರಭಸದಲ್ಲಿ ಹಿಂತಿರುಗಿ ನೋಡುವ ಗೊಡವೆ ಕಡೆಗೆ ಲಕ್ಷವಿಲ್ಲ. ಅಷ್ಟೊಂದು ಕಾತರ, ನಿರೀಕ್ಷೆ, ಪಡೆದೆ ತೀರಬೇಕೆನ್ನುವ ಉತ್ಕಟ ಆಕಾಂಕ್ಷೆ. ಈ ಸಮಯದಲ್ಲಿ ಯಾರ ಮಾತೂ ಕಿವಿಗೆ ಬೀಳೋದೆ ಇಲ್ಲ. ನಾ ಮಾಡಿದ್ದೆ ಸರಿ. “ಕೋಳಿಗೆ ಮೂರೇ ಕಾಲು” ಎಂದು ವಾದ ಮಾಡುವ ಮೊಂಡು ಬುದ್ಧಿ ಅದೆಲ್ಲಿಂದ ಮನಸ್ಸು ಹೊಕ್ಕು ತಾಂಡವವಾಡುತ್ತೊ! ಮತ್ತಷ್ಟು ಓದು »

3
ನವೆಂ

ಸಮಾಜ ಒಡೆಯುವ ಜಯಂತಿ, ಉತ್ಸವಗಳು ಬೇಕೆ…?

– ಸಂತೋಷಕುಮಾರ ಮೆಹೆಂದಳೆ.

dsc8476_tipu_sultan_m( ಬುದ್ಧಿಜೀವಿಗಳು ಆಳುವವರನ್ನು ಮೆಚ್ಚಿಸಲು ಬರೆದ ಲೇಖನಗಳನ್ನು ನಾನು ನೋಡಿದ್ದೇನೆ. ಟಿಪ್ಪು ರಾಕೇಟ್ ಹಾರಿಸಿದ, ಟಿಪ್ಪು ತನ್ನ ಮಕ್ಕಳನ್ನು ಬಲಿಕೊಟ್ಟ ಎನ್ನುವವರಿಗೆ, ಸಾಲುಸಾಲಾಗಿ ತಮ್ಮ ಗಂಡಂದಿರನ್ನೇ ಇವತ್ತು ಕಾಶ್ಮೀರ ಗಡಿಯಲ್ಲಿ ನಮ್ಮ ಮಹಿಳೆಯರು ತ್ಯಾಗಮಾಡುತ್ತಿದ್ದರೆ, ಅವರ ಮಕ್ಕಳು ಅಪ್ಪನ ಹೆಣಕ್ಕೆ ಸೆಲ್ಯೂಟ್ ಹೋಡೆದು `..ಜೈ ಹಿಂದ್..’ ಎಂದು ಕಿರುಚುತ್ತಾ ಕಣ್ಣೀರು ಹಾಕುತ್ತವಲ್ಲ ಅದು ಯಾವನಿಗೂ ಕಾಣುತ್ತಲೇ ಇಲ್ಲವಲ್ಲ. )

ಇಂದು ಜಯಂತಿ, ಒಂದು ಹಬ್ಬ ಹರಿದಿನ ಎನ್ನುವುದು ಖುಶಿಯಾಗಿ ಮನೆ ಮತ್ತು ಕುಟುಂಬ ಕೊನೆಗೆ ಸಮಾಜವೊಂದು ಸಂಪೂರ್ಣವಾಗಿ ಪಾಲ್ಗೊಳ್ಳುವಿಕೆಯ ಸಾಮೂಹಿಕ ಹಬ್ಬವಾಗಿರುತ್ತದೆಯೇ ಹೊರತಾಗಿ ಮುಖ ತಿರುವುವ, ಇದ್ದಬದ್ದ ಸಾಮರಸ್ಯದ ಸಂಬಂಧವೂ ಮುರಿದುಕೊಳ್ಳುವ ಜಾಡ್ಯವಾಗಬಾರದು. ಇವತ್ತು ಮನೆ, ವಠಾರಗಳಲ್ಲಿ ನಡೆಯುವ ಸಮಾರಂಭಗಳನ್ನು ಗಮನಿಸಿ. ಮನೆಯಲ್ಲಿಷ್ಟು ಸಂತಸ, ನೆಂಟರಿಷ್ಟರಿಗೆ ಸಿಹಿ, ಮಾಂಸಾಹಾರಿಗಳಾಗಿದ್ದರೆ ಕೊನೆಯ ದಿನ ಬಾಡೂಟ ಹಾಕಿಸಿ ಹಿಂದಿನ ಇದ್ದಬದ್ದ ಕಹಿಯನ್ನೂ ಮರೆಯುವ ಸಂಪ್ರದಾಯ ಮತ್ತು ಸಾಮಾಜಿಕ ಅಗತ್ಯತೆಗಳನ್ನು ಗಮನಿಸಿಯೇ ನಮ್ಮ ನಮ್ಮಲ್ಲಿ ಆಯಾ ಕಾಲವಾರು ಮತ್ತು ಸಾಮಾಜಿಕ ನಡವಳಿಕೆ ಜಾತಿ ಧರ್ಮಾಧಾರಿತ ಆಚರಣೆಗಳು ಬೆಳಕಿಗೆ ಬಂದವು. ಮತ್ತಷ್ಟು ಓದು »