ವಿಷಯದ ವಿವರಗಳಿಗೆ ದಾಟಿರಿ

Archive for

1
ಡಿಸೆ

ಅನಾಣ್ಯೀಕರಣ ಯಾಕೆ ? ಹೇಗೆ ?

– ರೂಪಲಕ್ಷ್ಮಿ

hqdefaultಮೋದಿಯವರು ಈ ೫೦೦/೧೦೦೦ ನೋಟ್ ಗಳನ್ನು ನಿಷೇಧಿಸಿದ ದಿವಸದಿಂದ ಜನರಿಗೆ ಸಿಕ್ಕಾಪಟ್ಟೆ ಗೊಂದಲಗಳು. ಬಹುಶಃ ರಹಸ್ಯವಾಗಿಟ್ಟು, ದಿಢೀರನೆ ಘೋಷಿಸಿದ್ದರಿಂದಾದ ಪ್ರಮಾದವಿದು. ಮಾಧ್ಯಮಗಳು ಕೂಡ ವಸ್ತುನಿಷ್ಟವಾಗಿ ಇದನ್ನು ವಿಶ್ಲೇಷಿಸದೆ, ಯುದ್ಧವೇ ಘೋಷಣೆಯಾಗಿದೆ ಅನ್ನುವ ರೀತಿಯಲ್ಲಿ ಬಿಂಬಿಸಿದ್ದು ಮತ್ತೊಂದು ಕಾರಣ. ಕಪ್ಪು ಹಣ / ಬಿಳಿ ಹಣ, ೨೦೦% ಟ್ಯಾಕ್ಸ್ / ೫೦% ಟ್ಯಾಕ್ಸ್, ರಾಜಕಾರಣಿಗಳು / ಉದ್ಯಮಿಗಳು, ೨೦೦೦ದ ನೋಟ್ / ೫೦೦ ರ ನೋಟ್, ನಮಗೆ ಟೈಮ್ ಕೊಡಬೇಕಿತ್ತು ಅಂತಾ ಒಂದಷ್ಟು ಜನರ ಬೊಬ್ಬೆ, ಬಡಜನರು ಸಾಯ್ತಿದ್ದಾರೆ ಅಂತಾ ಒಂದಷ್ಟು ಜನರ ಗೋಳು, ಇದರ ಮಧ್ಯೆ ಆ ನೋಟ್ ಗಳನ್ನು ನಿಷೇಧಿಸಿರುವುದಷ್ಟೆ, ಮೌಲ್ಯವನ್ನಲ್ಲ, ಅದಕ್ಕೆ ನಿಮಗೆ ಬದಲಾಯಿಸಲು ಅಥವಾ ನಿಮ್ಮ ಅಕೌಂಟಿಗೆ ಪಡೆಯಲು ೫೦ ದಿವಸಗಳ ಕಾಲಾವಕಾಶ ಇದೆ ಎಂದರೂ ಕೂಡ ಜನರು ಅರ್ಜೆಂಟಿನಲ್ಲಿ ಹೋಗಿ, ಅವಶ್ಯಕತೆ ಇದೆಯೋ, ಇಲ್ಲವೋ, ಕ್ಯೂ ನಲ್ಲಿ ನಿಂತು ಹಣ ತಂದು ಸಂಗ್ರಹಿಸಿಟ್ಟುಕೊಂಡು ಸದ್ಯ, ಬದಲಾಯಿಸಿಕೊಂಡ್ವಿ ಎಂಬ ನಿಟ್ಟುಸಿರು ಬಿಟ್ಟರು. ಮತ್ತೂ ಕೆಲವರು ಇದೇ ಸಮಯದಲ್ಲಿ ತಮ್ಮಲ್ಲಿರುವ ಕಪ್ಪು ಹಣವನ್ನು ಬದಲಾಯಿಸಲು ಪೈಪೋಟಿಗೆ ಬಿದ್ದವರಂತೆ ಕೂಲಿಯಾಳುಗಳನ್ನು ಕ್ಯೂ ನಲ್ಲಿ ನಿಲ್ಲಿಸಿ, ಹಣ ಬದಲಾಯಿಸಿದರು. ಮೋದಿಯವರು ಯಾರೂ ಕೂಡ ಹೆದರುವ ಅವಶ್ಯಕತೆಯಿಲ್ಲ ಎಂದು ಸಾರಿ, ಸಾರಿ ಹೇಳಿದರೂ ಕೂಡ ಬಡವ, ಬಲ್ಲಿದರೆನ್ನದೆ ಕ್ಯೂನಲ್ಲಿ ನಿಂತದ್ದೇ, ನಿಂತದ್ದು. ಹಾಗಿದ್ದರೆ ಈ ಅನಾಣ್ಯೀಕರಣದಿಂದ ತೊಂದರೆಗಳಿಲ್ಲವೇ? ಈ ಯೋಜನೆಯಿಂದ ದೇಶಕ್ಕಾಗುವ ಉಪಯೋಗಗಳೇನು? ಮತ್ತಷ್ಟು ಓದು »