ವಿಷಯದ ವಿವರಗಳಿಗೆ ದಾಟಿರಿ

Archive for

4
ಡಿಸೆ

ಪರ ವಿರೋಧಗಳ ನಡುವೆ ನೋಟುಗಳ ಸಮಸ್ಯೆ

– ಮು ಅ ಶ್ರೀರಂಗ

untitledಪ್ರಜಾಪ್ರಭುತ್ವದಲ್ಲಿ ‘ಪಾಸಿಟಿವ್ ಆದ ವಾತಾವರಣ’ ಎಂಬುದು ಒಂದು ಆದರ್ಶವಾಗಬಹುದಷ್ಟೇ ಹೊರತು ವಾಸ್ತವ ಆಗಲಾರದು. ಹೀಗಾಗಿ  ಕೆಲವೊಂದು ಸುಧಾರಣೆಗಳನ್ನು ಮುಂದಿನ ದಿನಗಳ ಒಳಿತಿಗಾಗಿ, ಕೆಲವರಿಗೆ ಸದ್ಯಕ್ಕೆ ಅನಾನುಕೂಲವೆನಿಸಿದರೂ, ಇದು ಪಾಸಿಟಿವ್ ಆದ ವಾತಾವರಣ ಅಲ್ಲ ಎಂದು ಅನಿಸಿದರೂ  ತರಲೇಬೇಕಾಗುತ್ತದೆ. ಹಿಂದೆ ಭಾರತದಲ್ಲಿ ಭೂಸುಧಾರಣಾ ಕಾನೂನು, ಬ್ಯಾಂಕುಗಳ ರಾಷ್ಟ್ರೀಕರಣ, ರಾಜಧನ ರದ್ದತಿ ಇವುಗಳನ್ನು ಜಾರಿಗೆ ತಂದಾಗಲೂ ‘ಎಲ್ಲೂ, ಎಲ್ಲರಲ್ಲೂ ಪಾಸಿಟಿವ್ ಆದ ವಾತಾವರಣ’ ಇರಲಿಲ್ಲ.  ಭಾರತದಲ್ಲಿ ಅನಕ್ಷರಸ್ಥರೇ ಜಾಸ್ತಿ; ಇಡೀ ದೇಶದಲ್ಲಿ ಅಕ್ಷರಸ್ಥರು ಜಾಸ್ತಿ ಇರುವ ರಾಜ್ಯವಾದ  ಕೇರಳದಲ್ಲಿ ಸಹ ‘ನಗದು’ ವ್ಯವಹಾರವೇ ಜಾಸ್ತಿ; ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, Paytm ಇತ್ಯಾದಿಗಳ ಮೂಲಕ ವ್ಯವಹಾರ ಕಡಿಮೆ. ಹೀಗಾಗಿ ಇಡೀ ಭಾರತದಲ್ಲಿ ಈ ವ್ಯವಸ್ಥೆಯನ್ನು ಶೇಕಡಾ ಐವತ್ತರಷ್ಟು ಜಾರಿಗೆ ತರುವುದೂ ಅಸಾಧ್ಯ ಎಂದು ಹೇಳಲು ಕೆಲವರು ಕೊಡುವ ಅಂಕಿ-ಅಂಶಗಳ ಬಗ್ಗೆ ನನ್ನ ತಕರಾರೇನೂ ಇಲ್ಲ. ಯಾವುದಾದರೂ ಒಂದೆರೆಡು ಸಂಸ್ಥೆಗಳು ಅಂತಹ sample surveyಗಳನ್ನು ಮಾಡಿರುತ್ತವೆ. ಅವುಗಳ ಆಧಾರದ ಮೇಲೆ ಹೇಳಿರುತ್ತಾರೆ. ಚುನಾವಣೆಯ ಫಲಿತಾಂಶಗಳು, ಯಾವುದೋ ಒಂದು ಸಾಮಾಜಿಕ ಸಮಸ್ಯೆ ಇವುಗಳ ಬಗೆಗಿನ ಇಂತಹ ಅಂಕಿ-ಅಂಶಗಳು ‘ಬಿಚ್ಚಿಡುವುದಕ್ಕಿಂತ ಮುಚ್ಚಿಡುವುದೇ ಜಾಸ್ತಿ’. ಈಗಂತೂ ಸುದ್ದಿ ವಾಹಿನಿಗಳು yes or no ಎಂಬ ಎರಡು ಪದಗಳ sms ಮೂಲಕ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿವೆ! ಅಲ್ಲಿಗೆ ಮುಗಿಯಿತು. ಅದೇ ಸತ್ಯ, ದೂಸರಾ ಮಾತಿಲ್ಲ.  ಮತ್ತಷ್ಟು ಓದು »