ವಿಷಯದ ವಿವರಗಳಿಗೆ ದಾಟಿರಿ

Archive for

14
ಡಿಸೆ

ಭಗವದ್ಗೀತೆ ಹೇಳುವ ಆಹಾರ ಆದರ್ಶ

ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

krsna_eatingಆಹಾರ ಎಂದರೆ ದೇಹಕ್ಕೆ ಪೌಷ್ಟಿಕಾಂಶಗಳನ್ನು ಒದಗಿಸುವ ಯಾವುದೇ ಪದಾರ್ಥ “ಪೋಷಕಾಂಶ (ಪ್ರೊಟೀನು), ಶರ್ಕರಪಿಷ್ಟ (ಕಾರ್ಬೊಹೈಡ್ರೇಟು) ಮತ್ತು ಕೊಬ್ಬು (ಫ್ಯಾಟ್)ಗಳನ್ನು ಅಗತ್ಯವಾಗಿ ಒಳಗೊಂಡ, ದೇಹದ ಪೋಷಣೆ, ಬೆಳವಣಿಗೆ, ಸುಭದ್ರತೆಗೆ ಕಾರಣವಾಗುವ ವಸ್ತು” ಎಂದು ವಿಶ್ವಕೋಶ ಹೇಳುತ್ತದೆ. ಆಹಾರ ವಸ್ತು ಮೂಲತಃ ಸಸ್ಯ ಅಥವಾ ಪ್ರಾಣಿ ಮೂಲದ್ದಿರಬಹುದು. ಅದರಲ್ಲಿ ಜೀವಿಗಳ ಬೆಳವಣಿಗೆಗೆ ಅಗತ್ಯವಾದ ಮೇಲ್ಕಂಡ ಧಾತುಗಳ ಜೊತೆಗೆ ವಿಟಮಿನ್ ಮತ್ತು ಖನಿಜಾಂಶಗಳು ಇದ್ದಾಗ ಮಾತ್ರ ಅಂಥ ವಸ್ತುವನ್ನು ಆಹಾರ ಎನ್ನಲಾಗುತ್ತದೆ. ಆಹಾರ ಸೇವಿಸಿದ ದೇಹದ ವ್ಯವಸ್ಥೆ ಆಹಾರದಲ್ಲಿನ ಮೂಲವಸ್ತುಗಳನ್ನು ಬೇರ್ಪಡಿಸಿ, ತನ್ನ ಕೋಶಗಳ ಮೂಲಕ ದೇಹದ ವಿವಿಧ ಭಾಗಗಳಿಗೆ ಧಾತುಗಳನ್ನು ಪ್ರವಹಿಸಿ ದೇಹದಲ್ಲಿ ಶಕ್ತಿ ಸಂಚಯನವಾಗುವಂತೆ ಮಾಡುತ್ತದೆ, ದೇಹದ ಬೆಳವಣಿಗೆಗೂ ಕಾರಣವಾಗುತ್ತದೆ. ಇದು ಆಹಾರದ ಬಗ್ಗೆ ಆಧುನಿಕ ವಿಜ್ಞಾನ ಹೇಳುವ ಮಾತು. ಮತ್ತಷ್ಟು ಓದು »