ದೇವರು – ಪೂಜೆ
– ಗೀತಾ ಹೆಗಡೆ
ಸಾಮಾನ್ಯವಾಗಿ ಹಳೆಯ ಸಂಪ್ರದಾಯಗಳೆಲ್ಲ ಸ್ವಚ್ಛತೆ ಆಧಾರದ ಮೇಲೆ ನಿಂತಿದೆ. ಹಾಗೆ ಸುಮ್ಮನೆ ಹೇಳಿದರೆ ಯಾರೂ ಅನುಸರಿಸುವುದಿಲ್ಲ. ಅದಕ್ಕೆ ದೇವರು ಹಾಗೆ ಹೀಗೆ ಎಂದು ಕಥೆ ಕಟ್ಟಿದ್ದಾರೆ ಅನಿಸುತ್ತದೆ. ಸ್ವಚ್ಛತೆ ಜನ ಅನುಸರಿಸಲಿ ಎಂದು. ಮಡಿ ಮೈಲಿಗೆ ಆಚಾರ ವಿಚಾರ ಜಾತಿ ಪದ್ಧತಿ ಇವೆಲ್ಲ ಮನುಷ್ಯನೆ ಮಾಡಿದ್ದು ತಾನೆ. ದೇವರಲ್ಲವಲ್ಲ..? ಹಾಗೆಯೇ ಇದು. ಇಲ್ಲಿ ನಂಬಿಕೆಯಿಂದ ಮಾಡಿದ ಕೆಲಸದಲ್ಲಿ ಸ್ವಚ್ಛತೆಯಿದೆ; ಇದರಿಂದ ಶಾಂತಿ ಸಿಗುತ್ತದೆ. ದೇವರು ಒಂದು ಕಲ್ಪನೆ. ಜಾತಿಗೆ ತಕ್ಕಂತೆ ಅವನ ಸ್ವರೂಪದ ವಿಮರ್ಷೆ. ಆದರೆ ದೇವರು ಒಬ್ಬನೇ. ಅದೊಂದು ಶಕ್ತಿ.. ಅದು ಎಲ್ಲೂ ಇಲ್ಲ. ನಮ್ಮ ಮನಸ್ಸಿನ ಒಳ್ಳೆಯ ನಡೆ ನುಡಿ, ನಮ್ಮ ನಿತ್ಯದ ಜೀವನ ಶೈಲಿ, ನಮ್ಮ ಜೀವನದ ಕನ್ನಡಿ. ಮನಸ್ಸು ಬುದ್ಧಿ ಸರಿಯಾಗಿದ್ದರೆ ದೇವರೆನ್ನುವ ಶಕ್ತಿ ನಮ್ಮಲ್ಲೆ ಕಾಣಬಹುದು. ಆದುದರಿಂದ ಅನಾದಿ ಕಾಲದ ಆಚರಣೆ ಅನುಸರಿಸುತ್ತ ನಮ್ಮ ಮನೆ ಸುತ್ತ ಮುತ್ತಲಿನ ವಾತಾವರಣ ಸುಂದರವಾಗಿರಿಸುವುದರಲ್ಲಿ ತಪ್ಪಿಲ್ಲ. ಮತ್ತಷ್ಟು ಓದು