ಉಳಿಯುವಂಥ ವಿಜ್ಞಾನ ಸಾಹಿತ್ಯ ಕೊಟ್ಟ ಅಡ್ಯನಡ್ಕರು
– ರೋಹಿತ್ ಚಕ್ರತೀರ್ಥ
ಶಾಲೆಯಲ್ಲಿದ್ದಾಗ ನಾವು ಕಿತ್ತಾಡಿಕೊಂಡು ಓದುತ್ತಿದ್ದ ಪತ್ರಿಕೆ ಎಂದರೆ ಬಾಲವಿಜ್ಞಾನ. ಅದರಲ್ಲಿ ಬರುತ್ತಿದ್ದ “ನೀನೇ ಮಾಡಿ ನೋಡು” ಎಂಬ ಸರಳ ಪ್ರಯೋಗಗಳನ್ನು ಮನೆಯಲ್ಲಿ ಮಾಡಿ ನೋಡುತ್ತಿದ್ದೆವು. ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಅಲ್ಲಿ ತಜ್ಞರು ಕೊಟ್ಟ ಉತ್ತರಗಳನ್ನು ಓದಿ ಖುಷಿ ಪಡುತ್ತಿದ್ದೆವು. ವ್ಯಕ್ತಿಚಿತ್ರಗಳನ್ನು ಎರಡೆರಡು ಬಾರಿ ಓದಿ ಮನನ ಮಾಡಿಕೊಳ್ಳುತ್ತಿದ್ದೆವು. ವಿಜ್ಞಾನ ಪದಬಂಧವನ್ನು ಪೂರ್ತಿಗೊಳಿಸಲು ಹೆಣಗುತ್ತಿದ್ದೆವು. ಪಂಡಿತವರ್ಗಕ್ಕೆ ಸೇರಿದ ವಿಶೇಷ ತಳಿಗಳೆಂಬ ನಮ್ಮ ಜಂಬವನ್ನು ಬಾಲವಿಜ್ಞಾನ ಹೀಗೆ ತೃಪ್ತಿಗೊಳಿಸುತ್ತಿತ್ತು. ಆ ಪತ್ರಿಕೆಯಲ್ಲಿ ತಪ್ಪದೆ ಕಾಣಿಸಿಕೊಳ್ಳುತ್ತ, ನಮ್ಮ ಮನಸ್ಸಿನಲ್ಲಿ ಅಚ್ಚೊತ್ತಿಹೋಗಿದ್ದ ಒಂದು ಹೆಸರು ಅಡ್ಯನಡ್ಕ ಕೃಷ್ಣ ಭಟ್. ಮತ್ತಷ್ಟು ಓದು