ಆನಂದ ಕರುಣಿಸಿದ ತಾಂಡವ
– ರಾಜೇಶ್ ರಾವ್
ಭಾರತವು ಬ್ರಿಟಿಷರ ದಾಸ್ಯದಲ್ಲಿದ್ದ ಕಾಲ. ಬರಿಯ ರಾಜಕೀಯ ದಾಸ್ಯವಲ್ಲ. ನಮ್ಮ ಇತಿಹಾಸವನ್ನು ತಿರುಚಿ ನಮ್ಮ ಮೂಲವನ್ನೇ ಪ್ರಶ್ನಿಸಿದ್ದ ಕಾಲ. ಅಂತಹ ತಿರುಚಿದ ವಿಚಾರವನ್ನೇ ಶಿಕ್ಷಣದಲ್ಲಿ ಅಳವಡಿಸಿ ಉರು ಹೊಡೆಸಿ ಪೀಳಿಗೆಗಳನ್ನೇ ದಾಸ್ಯಕ್ಕೊಳಪಡಿಸಲು ತಯಾರಾಗಿರಿಸಿದ್ದ ಕಾಲ. ಆರ್ಯ ಆಕ್ರಮಣವಾದವನ್ನೇ ತಲೆಯಲ್ಲಿ ತುಂಬಿಕೊಂಡು ನಮ್ಮ ಅಸ್ಮಿತೆಗೆ, ಉತ್ಕರ್ಷಕ್ಕೆ, ಜಗದ್ಗುರು ಪಟ್ಟಕ್ಕೆ ಕಾರಣವಾದ ನಮ್ಮ ಪ್ರಾಚೀನ ಕಲೆ, ಸಂಸ್ಕೃತಿಗಳನ್ನು ತುಚ್ಛವಾಗಿ ಕಾಣುವ ಪೀಳಿಗೆಯೇ ಸೃಷ್ಟಿಯಾಗಿದ್ದ ಕಾಲ. ಆದರೂ ಒಂದು ಕಡೆ ರಾಜಕೀಯ ದಾಸ್ಯವನ್ನು ಹೊಡೆದೋಡಿಸಲು ಹೋರಾಟ ನಡೆದಿತ್ತು. ಅದರ ನಡುವಲ್ಲೇ ನಮ್ಮ ಇತಿಹಾಸವನ್ನು ಶುದ್ಧೀಕರಿಸುವ ಪ್ರಕ್ರಿಯೆಯೂ ನಡೆದಿತ್ತು. ಭಾರತೀಯ ಕಲೆಯನ್ನು ಪೌರ್ವಾತ್ಯ, ಪಾಶ್ಚಿಮಾತ್ಯರಿಬ್ಬರೂ ತುಚ್ಛವಾಗಿ ನೋಡುತ್ತಿದ್ದ ಸಂದರ್ಭದಲ್ಲಿ ಅವುಗಳ ಮಹತ್ವವನ್ನು ಪಾಶ್ಚಿಮಾತ್ಯರದ್ದೇ ಪರಿಭಾಷೆಯಲ್ಲಿ ಕಟ್ಟಿಕೊಟ್ಟ ಮಹಾನುಭಾವ ಪಶ್ಚಿಮ ಮೂಲದ-ಪೂರ್ವದ ಮೇಲಿನ ಆದರ ಭಾವದ ಆನಂದ ಕುಮಾರ ಸ್ವಾಮಿ. ಮತ್ತಷ್ಟು ಓದು