ಓಡುವ ಕೋಣದ ಹಿಂದೆ ಎಷ್ಟೆಲ್ಲಾ ಅಡಗಿದೆ?
– ಸಂತೋಷ್ ತಮ್ಮಯ್ಯ
ಕರಾವಳಿಯ ಖ್ಯಾತ ಕನ್ನಡ ಮತ್ತು ತುಳು ಕಾದಂಬರಿಗಾರ ದಿವಂಗತ ಬೋಳ ಚಿತ್ತರಂಜನ್ ದಾಸ್ ಶೆಟ್ಟಿಯವರು ತಮ್ಮ “ಅಳಿದುಳಿದವರು” ಕಾದಂಬರಿಯಲ್ಲಿ ಕಂಬಳವನ್ನು ವಿವರಿಸುವುದು ಹೀಗೆ : ಎಲ್ಲಾ ಒಕ್ಕಲು ಮಕ್ಕಳು, ಮನೆಯವರೂ ಅಂದು ಸಡಗರದಿಂದಿದ್ದರು. ಏಕೆಂದರೆ ಅಂದು ಗದ್ದೆಯ ನಾಟಿ ಕಾರ್ಯದ ಕಡೆಯ ದಿನ. ನಸುಬೆಳಕಿನಲ್ಲೇ ಎತ್ತುಗಳು, ಕೋಣಗಳನ್ನು ಬಾಕಿಮಾರು ಗದ್ದೆಗೆ ಇಳಿಸಲಾಯಿತು. ಹತ್ತು ಜೋಡೆತ್ತುಗಳು ನಿಂತರೂ ತುಂಬದ ಆ ಬಾಕಿಮಾರು ಗದ್ದೆಯ ಕಡೆಯ ನಾಟಿ ಎಂದರೆ ಆ ಗುತ್ತಿಗಷ್ಟೇ ಅಲ್ಲ, ಊರಿಗೇ ಒಂದು ಸಂಭ್ರಮ. ಹೆಂಗಸರು ಗದ್ದೆಗೆ ತಣಿ ಎರೆದರು, ಸುಳಿ ಬಾಳೆ ಎಲೆಗಳಿಂದ ನಾಗನಿಗೆ ನೈವೇದ್ಯ ಅರ್ಪಿಸಿದರು.ಕೆಲವರು ಬೊಂಡಗಳನ್ನು ಇಟ್ಟು ಪ್ರಾರ್ಥನೆ ಸಲ್ಲಿಸಿದರು. ನಾಟಿಗದ್ದೆಯನ್ನು ಅದಾಗಲೇ ಉತ್ತಾಗಿತ್ತು. ಇನ್ನು ಅದನ್ನು ಹಸನು ಮಾಡಬೇಕು. ಎತ್ತು-ಕೋಣಗಳಿಗೆ ಕಟ್ಟಿದ್ದ ನೊಗವನ್ನು ಹಾಗೇ ಬಿಟ್ಟು ಹಲಗೆಯನ್ನು ಅದಕ್ಕೆ ಬಿಗಿಯಲಾಯಿತು. ಗದ್ದೆಯಲ್ಲಿ ಕೆಸರು ಎಂದರೆ ಮೂರ್ನಾಲ್ಕು ಇಂಚು ಕಾಲು ಹೂತುಹೋಗುವಷ್ಟು ಆಳ. ಆ ಹಲಗೆಯ ಮೇಲೆ ಒಂದು ಕಾಲಿಟ್ಟು. ಕೆಸರಿನಲ್ಲಿ ಇನ್ನೊಂದು ಕಾಲಿಟ್ಟು ಹಲಗೆ ಕಟ್ಟಿದ ಕೋಣಗಳನ್ನು ನಡೆಸಬೇಕು. ಅದನ್ನು ಆದಷ್ಟೂ ಬೇಗ ಮಾಡಬೇಕು. ಆ ಬಾಕಿಮಾರು ಎಂಬ ದೇವರ ಗದ್ದೆಯೋ ಉದ್ದಕ್ಕೆ ಮಲಗಿದೆ. ಬೇಗ ಸಮಾ ಮಾಡದಿದ್ದರೆ ಬೇಗ ನಾಟಿ ಆರಂಭವಾಗುವುದಿಲ್ಲ.
ಪ್ರಾಣಿಗಳ ಕ್ರೀಡೆ ಮತ್ತು ಐಡೆಂಟಿಟಿ
– ವಿನಾಯಕ ಹಂಪಿಹೊಳಿ
ಪೆಟಾ ಹಾಗೂ ಇನ್ನಿತರ ಪ್ರಾಣಿದಯಾ ಸಂಘದವರು ಪ್ರಾಣಿಗಳನ್ನು ಆಹಾರವಾಗಿ ಹೊರತುಪಡಿಸಿ ಉಳಿದೆಲ್ಲ ಕಾರ್ಯಸಾಧನೆಗಾಗಿ ಬಳಸಿಕೊಳ್ಳುವ ಪ್ರಕ್ರಿಯೆಯನ್ನು ವಿರೋಧಿಸುತ್ತಾರೆ. ಅವುಗಳನ್ನು ಮೋಜಿಗಾಗಿ ಪಂದ್ಯಗಳಲ್ಲಿ ಬಳಸುವುದನ್ನು, ಮೆರವಣಿಗೆಯಲ್ಲಿ ಉಪಯೋಗಿಸುವುದನ್ನು, ಅವುಗಳ ಚರ್ಮದಿಂದ ಉಪಯೋಗಿ ವಸ್ತುಗಳನ್ನು ನಿರ್ಮಿಸುವುದನ್ನು, ಸರ್ಕಸ್ಸಿನಲ್ಲಿ ಪ್ರಾಣಿಗಳನ್ನು ಹೊಡೆದು ಪಳಗಿಸುವುದನ್ನು ವಿರೋಧಿಸುತ್ತಾರೆ. ಮೋಜಿಗಾಗಿ ಪ್ರಾಣಿಗಳನ್ನು ಹೊಡೆದೋಡಿಸುವ ಆಟಗಳನ್ನು, ಕೊಲ್ಲುವ ಆಚರಣೆಗಳನ್ನು, ನಿಷೇಧಿಸಬೇಕೆಂದು ಈ ಪ್ರಾಣಿದಯಾ ಸಂಘಗಳು ಪ್ರಯತ್ನಿಸುತ್ತವೆ. ಪ್ರಾಣಿದಯಾ ಸಂಘಗಳ ಈ ಕಾಳಜಿಯು ಜನಸಾಮಾನ್ಯ ಭಾರತೀಯರಿಗೆ ಮೇಲ್ನೋಟಕ್ಕೆ ಅರ್ಥವಾಗಿರುವಂತೆಯೇ ಭಾಸವಾಗುತ್ತದೆ. ಮತ್ತಷ್ಟು ಓದು