ಜಲ್ಲಿಕಟ್ಟು ಹೆಸರಿನಲ್ಲಿ ಹೊಸದೊಂದು ಸಂಸ್ಕೃತಿ ಸಾಧ್ಯವಿಲ್ಲ ಅಂತೀರಾ?
– ನರೇಂದ್ರ ಎಸ್ ಗಂಗೊಳ್ಳಿ
ನಾಡು ನುಡಿ ಸಂಸ್ಕೃತಿ ಸಂಪ್ರದಾಯದ ಅಭಿಮಾನದ ವಿಚಾರಕ್ಕೆ ಬಂದಾಗ ತಮಿಳುನಾಡಿನ ಜನರು ಯಾವತ್ತಿಗೂ ಒಂದು ಹೆಜ್ಜೆ ಮುಂದೆ ನಿಲ್ಲುತ್ತಾರೆ. ಇದು ಹೊಗಳಿಕೆ ಅಂತೇನೂ ಅಲ್ಲ. ನಮ್ಮ ಜನರ ಅಭಿಮಾನದ ನೆಲೆಯಲ್ಲಿ ನೋಡಿದಾಗ ಹಾಗನ್ನಿಸುವುದು ಸಹಜ. ಮೊನ್ನೆ ಮೊನ್ನೆ ಪ್ರಸ್ತುತ ಜಲ್ಲಿಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ನಡೆದ ಹೋರಾಟದ ಪರಿ ಇದೆಯಲ್ಲಾ ಅದು ನಿಜಕ್ಕೂ ಪ್ರತಿಯೊಬ್ಬರಿಗೂ ಪ್ರೇರಣೆಯನ್ನು ನೀಡುವಂತಾದ್ದು. ಅವರಿಗೊಂದು ಮೆಚ್ಚುಗೆಯಿರಲಿ. ಆದರೆ ಈ ಜಲ್ಲಿಕಟ್ಟು ವಿಚಾರವನ್ನು ತೀರಾ ಭ್ರಮೆಗಳಿಗೆ ಕಟ್ಟುಬೀಳದೆ ವಾಸ್ತವದ ನೆಲೆಗಟ್ಟಿನಲ್ಲಿ ವಿಶ್ಲೇಷಿಸಿ ತೀರ್ಮಾನಕ್ಕೆ ಬರುವ ಅವಶ್ಯಕತೆ ಇಲ್ಲ ಎನ್ನುತ್ತೀರಾ? ಮತ್ತಷ್ಟು ಓದು