ವಿಷಯದ ವಿವರಗಳಿಗೆ ದಾಟಿರಿ

Archive for

31
ಜನ

ಇಂದು ಕಂಬಳ, ನಾಳೆ ಜೋಡೆತ್ತಿನ ಗಾಡಿ, ಸಂಕ್ರಾಂತಿ, ನಾಡಿದ್ದು ಇನ್ನೇನೋ…?

– ಶಿವಕುಮಾರ ಪಿ.ವಿ.
ಸಂಶೋಧನಾ ವಿದ್ಯಾರ್ಥಿ
ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ.

860897a4867e00f161e4236fd7fe5aeeಪ್ರಾಣಿಗಳಿಗೆ ಹಿಂಸೆ ನೀಡಿ ಮನರಂಜನೆ ಪಡೆಯಲಾಗುತ್ತಿದೆ ಎಂಬುದು ಕಂಬಳ, ಜಲ್ಲಿಕಟ್ಟುವಿನಂತ ಕ್ರೀಡೆಗಳನ್ನು ನಿಲ್ಲಿಸಲು ಪ್ರಾಣಿದಯಾ ಸಂಘಗಳು ನೀಡುತ್ತಿರುವ ಕಾರಣ. ನ್ಯಾಯಾಲಯವೂ ಕೂಡ ‘ಪ್ರಾಣಿ ಹಿಂಸೆ’ಯ ಮಾನದಂಡವನ್ನಾದರಿಸಿ ಈ ಕ್ರೀಡೆಗಳಿಗೆ ನಿಷೇಧಾಜ್ಞೆಯನ್ನೂ ಹೇರುತ್ತಿದೆ. ಇದನ್ನಿಟ್ಟುಕೊಂಡೇ ನೋಡಿದರೆ, ಕೋಳಿ-ಕುರಿ, ದನಗಳನ್ನು ಕಡಿದು ತಿನ್ನುವುದು ಅವುಗಳ ಮಾರಣಹೋಮವಾಗಿ ಕಾಣಿಸಬೇಕಿತ್ತು. ಆದರೆ ಹಾಗಾಗುತ್ತಿಲ್ಲ. ಆಶ್ಚರ್ಯವೆಂದರೆ, ಪ್ರಾಣಿ ಹಿಂಸೆ, ಪ್ರಾಣಿ ಬಲಿಯನ್ನು ನಿಷೇಧಿಸಬೇಕೆನ್ನುವ ಸಕಲ ಪ್ರಾಣಿಗಳ ಜೀವಪರ ದಯಾಳುಗಳೆ ಬೀಫ್, ಮತ್ತಿತರ ಮಾಂಸ ಖಾದ್ಯಗಳನ್ನು, ಅವುಗಳ ರಕ್ತದ ಸೂಪನ್ನು ಚಪ್ಪರಿಸುತ್ತಿರುತ್ತಾರೆ. ಅದಕ್ಕಾಗಿ ಹೋರಾಟಗಳನ್ನೂ ಮಾಡುತ್ತಾರೆ. ಪ್ರಾಣಿಗಳನ್ನು ಬೇಕಾದರೆ ಕಡಿದು ತಿನ್ನಿ, ಆದರೆ ಅವುಗಳಿಗೆ ಹಿಂಸೆ ಕೊಡಬೇಡಿ ಎಂಬುದು ಇವರ ಆಕ್ಷೇಪಣೆ! ಹಾಗಾದರೆ, ಪ್ರಾಣಿ ಹಿಂಸೆಯ ಗುರಾಣಿಯ ಹಿಂದಿರುವ ತರ್ಕವೇನು, ಇವರ ನಿಜವಾದ ಕಾಳಜಿ ಪ್ರಾಣಿ ಹಿಂಸೆ ಮಾಡಬಾರದೆನ್ನುವುದೇ? ಮತ್ತಷ್ಟು ಓದು »