ರಾಹುಲ್ ಗಾಂಧಿಗೆ ಬಿ.ಪಿ.ಎಲ್ ಕಾರ್ಡ್ ನೀಡಲು ನಿರ್ಧಾರ: ಸಿಎಂ (ಸುಳ್ಸುದ್ದಿ)
– ಪ್ರವೀಣ್ ಕುಮಾರ್, ಮಾವಿನಕಾಡು
ರಾಹುಲ್ ಗಾಂಧಿ ಅವರಿಗೆ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಮೂಲಕ ಬಿ.ಪಿ.ಎಲ್ ಕಾರ್ಡ್ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅವರು ಇಂದು ಮೂರನೇ ಮಹಡಿಯಲ್ಲಿ ನಡೆದ ತುರ್ತು ಸಚಿವ ಸಂಪುಟದ ಸಭೆಯ ನಂತರ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.ಈ ಬಗ್ಗೆ ಸಚಿವ ಸಂಪುಟ ಒಮ್ಮತದ ನಿರ್ಧಾರ ಕೈಗೊಂಡಿದ್ದು ಮುಂದಿನ ಶುಕ್ರವಾರ ನವದೆಹಲಿಯಲ್ಲಿ ಅವರನ್ನು ಭೇಟಿಯಾಗಿ ಅವರಿಗೆ ಬಿ.ಪಿ.ಎಲ್ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದರು. ಅದಕ್ಕಾಗಿ ಅಂದು ಅರ್ಧ ಗಂಟೆ ಭೇಟಿಯಾಗಲು ಅವರ ಬಳಿ ಸಮಯ ಕೇಳಿ ಪತ್ರ ಬರೆದಿದ್ದು ಪಕ್ಷಾಧ್ಯಕ್ಷರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರ ಅನುಮತಿಯ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು. ಮತ್ತಷ್ಟು ಓದು