ಎತ್ತ ಸಾಗುತ್ತಿದೆ ಕನ್ನಡದ ಬೌದ್ಧಿಕ ಜಗತ್ತು..?
– ಡಾ. ಪ್ರವೀಣ ಟಿ. ಎಲ್
ಉಪನ್ಯಾಸಕರು
ಕುವೆಂಪು ವಿಶ್ವವಿದ್ಯಾನಿಲಯ
ಬೌದ್ಧಿಕವಲಯದಲ್ಲಿ ಮುಕ್ತ ಸಂವಾದಗಳು ಜ್ಞಾನದ ಬೆಳವಣಿಗೆಯ ದೃಷ್ಟಿಯಿಂದ ಅತ್ಯಂತ ಮುಖ್ಯ. ಅವುಗಳು ಹೆಚ್ಚೆಚ್ಚು ನಡೆಯಲೆಂದೇ ಯುಜಿಸಿಯಂತಹ ಸಂಸ್ಥೆಗಳು, ಸರ್ಕಾರಗಳು ಕೋಟಿಗಟ್ಟಲೇ ಹಣವನ್ನು ನೀಡುತ್ತವೆ. ವಿದ್ಯಾರ್ಥಿಗಳ ನಡುವೆ, ಚಿಂತಕರ ನಡುವೆ ಸಂವಾದಗಳು, ಚರ್ಚೆಗಳು ನಡೆದರೆ ಮಾತ್ರವೇ ತಮ್ಮ ತಿಳುವಳಿಕೆಯ ಮಿತಿಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಹಾಗೂ ಹೊಸ ಹೊಸ ಚಿಂತನೆಯ ಉಗಮಕ್ಕೆ ದಾರಿಯಾಗಲಿವೆ. ಆಗ ಅಲ್ಲಿನ ಬೌದ್ಧಿಕ ವಲಯವು ಹೆಚ್ಚು ಕ್ರಿಯಾಶೀಲವಾಗಿದೆ ಎಂದು ತೀರ್ಮಾನಿಸಬಹುದು. ಕರ್ನಾಟಕದ ಸಂದರ್ಭದಲ್ಲಿ ಬುದ್ಧಿಜೀವಿಗಳೆಂದರೆ ಸಾಹಿತಿಗಳು ಎಂಬಂತಾಗಿದೆ. ಕನ್ನಡ ಬೌದ್ಧಿಕ ವಲಯದಲ್ಲಿ ಇಂತಹ ಸಂವಾದಗಳು ನಡೆಯುತ್ತಿವೆಯೇ? ಎಂಬ ಮುಖ್ಯ ಪ್ರಶ್ನೆಯೊಂದನ್ನು ಕೇಳಿಕೊಳ್ಳಬೇಕಾದ ಸುಸಂದರ್ಭದಲ್ಲಿದ್ದೇವೆ. ಮತ್ತಷ್ಟು ಓದು