ವಿಶ್ವವನ್ನೇ ಅಚ್ಚರಿಯ ತೆಕ್ಕೆಗೆ ಸೆಳೆಯುವ ಭಾರತದ ದೈತ್ಯ
– ಸುರೇಶ್ ಮುಗಬಾಳ್
ತಮಿಳುನಾಡಿನಲ್ಲಿ ಶಶಿಕಲಾ ನಟರಾಜನ್ ತನ್ನ ಆಸೆ ಈಡೇರದೆ ಸೆರೆಮನೆಯತ್ತ ಮುಖಮಾಡಿದಾಗ, ಇತ್ತ ಇಡೀ ಪ್ರಪಂಚವೇ ನಮ್ಮ ದೇಶದತ್ತ ಮುಖಮಾಡಿತ್ತು. ಶಶಿಕಲಾ ಸೆರೆಮನೆಗೆ ಹೋಗುವುದನ್ನು ನೋಡಲಿಕ್ಕಲ್ಲಾ, ನಮ್ಮ ಹೆಮ್ಮೆಯ ISRO ( Indian Space Research Organisation) PSLV-C37 ಗ್ರಹ ನೌಕೆಯ ಸಹಾಯದಿಂದ 104 ಉಪಗ್ರಹಗಳನ್ನು ಒಂದೇ ಬಾರಿಗೆ ಕಕ್ಷೆಗೆ ಸೇರಿಸುವುದರೊಂದಿಗೆ ಯಾರೂ ಮಾಡದ ಸಾಧನೆಗೆ ಕೈ ಹಾಕಿದೆ ಎಂದು. ಅಚ್ಚರಿ ಪಡಲೇಬೇಕು..! ಏಕೆ ಗೊತ್ತೇ? ಭಾರತೀಯ ಟಿ.ವಿ. ಮಾಧ್ಯಮಗಳು ಇಡೀ ದಿನ ಶಶಿಕಲಾರ ಬಗ್ಗೆ ಪ್ರಸಾರ ಮಾಡುತ್ತಿದ್ದರೆ ಅಲ್ಲೆಲ್ಲೋ ಅಮೇರಿಕಾ, ಸ್ವಿಡ್ಜರ್ಲ್ಯಾಂಡ್, ನೆದರ್ಲ್ಯಾಡ್, ಯು.ಎ.ಇ., ಇಸ್ರೇಲ್, ಖಜಕೀಸ್ತಾನ್ ದೇಶಗಳು ತಮ್ಮ ಮಾಧ್ಯಮಗಳ ತಲೆಪಂಕ್ತಿಯಲ್ಲಿ (Headlines) ನಮ್ಮ ದೇಶದ ಸಾಧನೆಯನ್ನು ಬಿತ್ತರಿಸಿದವು. ತಮ್ಮದೇ ದೇಶದ ವಿಜ್ಞಾನಿಗಳು ಭೂಕಕ್ಷೆಗೆ ಉಪಗ್ರಹಗಳನ್ನು ಸೇರಿಸಿದವರಂತೆ ಅಲ್ಲಿನ ಪ್ರಜೆಗಳು ಖುಷಿಪಟ್ಟುಕೊಂಡರು. ನಮ್ಮ ಟಿ.ವಿ.ಮಾಧ್ಯಮಗಳ ಕತೆಯೇ ಬೇರೆ, ಸುದ್ದಿ ಬಿತ್ತರಿಸುವಾಗ ಗಮನಾರ್ಹವಾದ ಸುದ್ದಿಗಳು 2-3 ನಿಮಿಷಗಳಿಗಷ್ಟೇ ಸೀಮಿತವಾಗಿಸಿಬಿಡುತ್ತವೆ. ಅದೇ ಕೊಳಕು ರಾಜಕೀಯವು ಮಾಧ್ಯಮಗಳ ತುಂಬೆಲ್ಲಾ ಹರಡಿರುತ್ತದೆ. ಚೀನಾದ ಪ್ರಮುಖ ಪತ್ರಿಕೆಯೊಂದು ಭಾರತದ ಈ ಸಾಧನೆಯನ್ನು ಕೊಂಡಾಡಿ, ಸಂಪಾದಕೀಯದಲ್ಲಿ ಮೆಚ್ಚುಗೆಯ ಮಾತುಗಳನ್ನಾಡಿತ್ತು. ಮತ್ತಷ್ಟು ಓದು