ವಿಷಯದ ವಿವರಗಳಿಗೆ ದಾಟಿರಿ

Archive for

20
ಮಾರ್ಚ್

ನಾವೆಲ್ಲರೂ ಒಂದೇ..‌.

– ಗೀತಾ ಹೆಗ್ಡೆ

ಒಂದಿಲ್ಲೊಂದು ಕಾರಣಗಳಿಂದ ನೀನು ಹಿಂದು, ನೀನು ಕ್ರಿಶ್ಚಿಯನ್, ನೀನು ಮುಸ್ಲಿಂ ಹೀಗೆ ಅವರವರ ಧರ್ಮದ ಹೆಸರಲ್ಲಿ, ಒಂದಿನಿತೂ ಅವರ ಮನಸ್ಸಿನಲ್ಲಿ ನಾವೆಲ್ಲ ಒಂದೇ ಅನ್ನುವ ಭಾವನೆ ಬೆಳೆಯಲು ಈ ಸಮಾಜ ಯಾಕೆ ಅನುವು ಮಾಡಿಕೊಡುತ್ತಿಲ್ಲ.. ಇದು ಸದಾ ಕಾಡುವ ನನ್ನೊಳಗಿನ ಪ್ರಶ್ನೆ. ಎಷ್ಟೋ ಸಾರಿ ಜೀವನದ ಅನೇಕ ವೇಳೆಯಲ್ಲಿ ಎದುರಾಗುವ ಮಾನವೀಯ ಜನರು ನಮ್ಮ ಕಷ್ಟ ಸುಃಖಕ್ಕೆ ಸ್ಪಂಧಿಸಿರುತ್ತಾರೆ. ಅವರ ಒಡನಾಟದಲ್ಲಿ ನಾವು ಜಾತಿಯ ಬಗ್ಗೆ ಯೋಚನೆಯನ್ನೆ ಮಾಡುವುದಿಲ್ಲ. ಅಷ್ಟು ನಮ್ಮೊಳಗಿನ ಮನಸ್ಸು ಬೇಧ ಭಾವ ಮರೆತು ಕೇವಲ ಅವರ ಒಳ್ಳೆಯ ನಡೆ ನುಡಿಗಳಲ್ಲಿ ತಲ್ಲೀನವಾಗಿರುತ್ತದೇ. ಆದರೆ ‌ಸಮಾಜದ ಕೆಲವು ವ್ಯಕ್ತಿಗಳು ಇಷ್ಟು ಮುಕ್ತ ಮನಸ್ಸಿನಿಂದ ಬದುಕಲು ಬಿಡುವುದಿಲ್ಲ. ಆಗಾಗ ಅವರ ಚುಚ್ಚು ಮಾತುಗಳನ್ನು ಕೇಳಬೇಕಾಗುತ್ತದೆ. ಅಲ್ಲಿ ನಮ್ಮ ಬದುಕಿನ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವುದನ್ನು ಪ್ರತಿಭಟಿಸುವಷ್ಟು ಶಕ್ತಿ ಎಲ್ಲರಲ್ಲೂ ಇರುವುದಿಲ್ಲ. ಸಮಾಜದ ಕಟ್ಟು ಕಟ್ಟಳೆಗೆ ತಲೆ ಬಾಗಲೇ ಬೇಕಾಗುತ್ತದೆ. ಅಂಥದೊಂದು ಘಟನೆ ಎದುರಿಸಿದ ಸಂದರ್ಭವಿದು. ಮತ್ತಷ್ಟು ಓದು »