ಮೇರಾ ರಂಗ್ ದೇ ಬಸಂತಿ ಚೋಲಾ…
ಶಿವಾನಂದ ಶಿವಲಿಂಗಪ್ಪ ಸೈದಾಪೂರ (ಎಂ.ಎ.ವಿದ್ಯಾರ್ಥಿ)
ರಾಜ್ಯ ಕಾರ್ಯಕಾರಣಿ ಸದಸ್ಯರು
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್
ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ
ಸುಮಾರು ನೂರಾರು ವರ್ಷಗಳ ಕಾಲ ಪರಾಧೀನತೆಯನ್ನು ಕಿತ್ತೊಗೆಯಲು ಲಕ್ಷಾಂತರ ಜನ ತಮ್ಮ ಬಿಸಿ ನೆತ್ತರವನ್ನು ನೀರಾಗಿ ಹರಿಸಿ ನಮಗಾಗಿ, ನಮ್ಮ ಉಳಿವಿಗಾಗಿ ಹೋರಾಡಿ ಜೀವವನ್ನೇ ತೆತ್ತು ಇಂದಿನ ಸುಭದ್ರತೆಗೆ ಕಾರಣರಾದರು. 1857ರ ಮಹಾ ಸಂಗ್ರಾಮದಿಂದ 1947 ರ ವರೆಗೆ ಅನೇಕಾನೇಕ ಕ್ರಾಂತಿಕಾರಿ ಮಹನೀಯರು ಕಾರಣೀಕರ್ತರಾಗಿದ್ದಾರೆ. ಅಂತಹವರಲ್ಲಿ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಹೊಸ ಅಧ್ಯಾಯವನ್ನೇ ಬರೆದ ಮಹಾನ್ ಹೋರಾಟಗಾರರೆಂದರೆ ಅದು ಭಗತ್ ಸಿಂಗ್, ಸುಖದೇವ್, ರಾಜಗುರುರವರು. ಕ್ರಾಂತಿಯ ಇತಿಹಾಸದಲ್ಲಿ ಅವರ ಆತ್ಮ ಬಲಿದಾನವೇ ಅತ್ಯಂತ ಪ್ರಮುಖದೆಂದು ಹೇಳಬಹುದು. ದಾಸ್ಯ ಮುಕ್ತಿಗಾಗಿ, ತಮ್ಮ ಜೀವನದ ಅಂತಿಮ ಹೊತ್ತಿನಲ್ಲಿಯೂ ಕೂಡ ನಗು ನಗುತ ತಾಯಿ ಭಾರತಮಾತೆಯನ್ನು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತ ಉರುಳನು ಚುಂಬಿಸಿ ನೇಣಿನ ಕುಣಿಕೆಗೆ ಕೊರಳನ್ನೊಡ್ಡಿದ್ದರು.
ಅಂತಹ ಮಹಾನ್ ಹೋರಾಟಗಾರರ ಬಲಿದಾನವಾಗಿ 87 ವರ್ಷ ಉರುಳಿದವು. ಅದರ ಸ್ಮರಣೆಯೇ ಈ ಲೇಖನ. ಮತ್ತಷ್ಟು ಓದು