ಅವರ ಸಹಕಾರವಿಲ್ಲದೆ ಈ ಮರಳು ದಂಧೆ ನಡೆಯುತ್ತಾ ?
– ನರೇಂದ್ರ ಎಸ್ ಗಂಗೊಳ್ಳಿ, ವಾಣಿಜ್ಯಶಾಸ್ತ್ರ ಉಪನ್ಯಾಸಕರು.
ಕಳೆದ ಭಾನುವಾರ ರಾತ್ರಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ತಡರಾತ್ರಿ ಅಕ್ರಮ ಮರಳುಗಾರಿಕೆ ದಂಧೆಯ ಕುರಿತಂತೆ ತನಿಖೆ ಮಾಡಲು ತೆರಳಿದ್ದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ತಹಶೀಲ್ದಾರ್ ಶಿಲ್ಪಾ ನಾಗ್ , ಅಂಪಾರು ಗ್ರಾಮಕರಣ ಕಾಂತರಾಜು ಸೇರಿದಂತೆ ಆರು ಜನರ ತಂಡದ ಮೇಲೆ ಈ ಅಕ್ರಮ ದಂಧೆ ನಿರತ ತಂಡ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದು ಖಂಡನೀಯ. ಮೊದಲು ಬಿಹಾರ ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಇಂತಹ ಘಟನೆಗಳು ಕೇಳಿಬರುತ್ತಿದ್ದವು, ಆದರೆ ಇದೀಗ ಬುದ್ಧಿವಂತರ ಜಿಲ್ಲೆ ಎಂದೆನ್ನಿಸಿಕೊಂಡ ಉಡುಪಿಯಲ್ಲೇ ಇಂತಹ ಘಟನೆ ನಡೆದಿರುವುದು ಇಡೀ ಜಿಲ್ಲೆಯ ಜನರೇ ತಲೆ ತಗ್ಗಿಸುವಂತಾಗಿದೆ.