ವಿಷಯದ ವಿವರಗಳಿಗೆ ದಾಟಿರಿ

Archive for

21
ಏಪ್ರಿಲ್

ಕರ್ನಾಟಕ ಬಿಜೆಪಿಯ ಪ್ರತೀ ನಾಯಕನು ತಾವು ನಡೆದು ಬಂದ ಹಾದಿಯನ್ನು ಒಮ್ಮೆ ಹಿಂದೆ ತಿರುಗಿ ನೋಡುವ ಸಮಯ ಬಂದಿದೆ.!

– ಸಾಮಾನ್ಯ ಕಾರ್ಯಕರ್ತ.

ಉಪಚುನಾವಣೆಯ ಪಲಿತಾಂಶವನ್ನು ನೆಪವಾಗಿ ಇಟ್ಟುಕೊಂಡು ಕರ್ನಾಟಕ ಬಿಜೆಪಿಗೆ ಕೆಲವು ಮಾತುಗಳನ್ನು ಹೇಳಲೇ ಬೇಕಿದೆ. ಜನಸಾಮಾನ್ಯನ ನಡುವೆ ಬದುಕುವ ಕಾರ್ಯಕರ್ತನ ಮಾತು ಜನರ ಮಾತೇ ಆಗಿರುತ್ತದೆ. ಅವರ ಮಾತನ್ನು ಕೇಳಿದರೆ ಉತ್ತಮ ಕೇಳದಿದ್ದರೆ ನಮ್ಮ ಕರ್ಮ ಅಷ್ಟೆ. ಯಡಿಯೂರಪ್ಪನವರ ಬಗ್ಗೆ ಪ್ರತಿ ಪದ ಬರೆಯುವಾಗ ನನ್ನ ಮನಸ್ಸಿನಲ್ಲಿ ಜಾಗ್ರತೆಯ ಭಾವ ಕಣ್ಣರಳಿಸಿ ಕೂರುತ್ತದೆ, ಯಡಿಯೂರಪ್ಪನವರೇ ಹೀಗೆ ಮಾಡಿ, ಹಾಗೆ ಮಾಡಿ ಎನ್ನಲು ನನಗಿರುವ ಯೋಗ್ಯತೆಯಾದರು ಏನು ಎಂದು ನನ್ನ ಮನಸ್ಸು ಯಾವಾಗಲು ಪ್ರಶ್ನಿಸುತ್ತದೆ. ಯಡಿಯೂರಪ್ಪನವರು ನನ್ನ ಪಕ್ಷದ ಬೆಳವಣಿಗೆಗೆ ಸವೆಸಿರುವ ಕಾಲ ಚರ್ಮದ ಮೂಲೆಯಲ್ಲಿರುವ ದೂಳಿಗೆ ಸಮನಲ್ಲ ಎನ್ನುವ ಶ್ರದ್ದೆ ಇಂದಿಗೂ ಎಂದಿಗೂ ನನ್ನ ಮನಸ್ಸಿನಲ್ಲಿ ಉಳಿಸಿಕೊಳ್ಳುತ್ತೇನೆ. ಆದರೆ ಒಂದಿಡೀ ಯುವ ಸಮೂಹ ತಾಯಿಭಾರತಿಯನ್ನು ವಿಶ್ವಗುರು ಸ್ಥಾನದಲ್ಲಿ ಕುಳ್ಳಿರಿಸಲು ಎಲ್ಲವನ್ನು ತೊರೆದು ದುಡಿಯುತ್ತಿರುವಾಗ, ಆ ಕಾರ್ಯ ಸಾಧನೆಗೆ ಪೂರಕವಾಗಿ ನೀವೊಂದಿಷ್ಟು ಜರೂರ್ ಕೆಲಸಗಳನ್ನು ಮಾಡಲೇಬೇಕಾಗಿರುವುದರಿಂದ ಹಾಗು ನೀವು ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಆಗಿರುವುದರಿಂದ ನಿಮ್ಮ ಬಳಿ ದೇಶದ ಯುವ ಸಮೂಹದ ಪರವಾಗಿ ಈ ಕೆಲಸಗಳನ್ನು ದಯಮಾಡಿ ಮಾಡಿ ಎಂದು ಕೇಳಿಕೊಳ್ಳುತ್ತೇನೆ. ಹಾಗು ಬಿಜೆಪಿಯ ನಾಯಕ ಪಟ್ಟ ಅಲಂಕರಿಸಿ ತಮ್ಮ ಸುತ್ತ ಕೋಟೆ ಕಟ್ಟಿಕೊಂಡಿರುವ ಹಲವು ಮಹಾಶಯರಿಗೂ ಬದಲಾಗುತ್ತಿರುವ ಭಾರತದ ರಾಜಕಾರಣವನ್ನೊಮ್ಮೆ ಕಣ್ಣು ಬಿಟ್ಟು ನೋಡಿ ಎಂದು ಹೇಳಲು ಬಯಸುತ್ತೇನೆ. ಮತ್ತಷ್ಟು ಓದು »