ವಿಷಯದ ವಿವರಗಳಿಗೆ ದಾಟಿರಿ

Archive for

27
ಏಪ್ರಿಲ್

ದೆಹಲಿ ಪಾಲಿಕೆಯ ಫಲಿತಾಂಶದಲ್ಲಿ ಕರ್ನಾಟಕ ಬಿಜೆಪಿಗೇನು ಪಾಠ?

– ವಿನಾಯಕ ಹಂಪಿಹೊಳಿ

ಕಳೆದ ಹತ್ತು ವರ್ಷಗಳಿಂದ ದೆಹಲಿಯ ಮಹಾನಗರ ಪಾಲಿಕೆಯು ಬಿಜೆಪಿಯ ಕೈಯಲ್ಲಿದೆ. ಇಂದು ಸತತ ಮೂರನೇ ಬಾರಿ ಜಯ ಸಾಧಿಸುವ ಮೂಲಕ ಹ್ಯಾಟ್ರಿಕ್ ನಿರ್ಮಿಸಿದೆ. ಆದರೆ ಹತ್ತು ವರ್ಷಗಳ ಆಡಳಿತದ ಕುರಿತು ಜನರಿಗೇನೂ ಒಳ್ಳೆಯ ಅಭಿಪ್ರಾಯವಿಲ್ಲ. ಮಹಾನಗರ ಪಾಲಿಕೆಗೆ ಆಯ್ಕೆಯಾದ ಬಿಜೆಪಿಗರಲ್ಲಿ ಹತ್ತು ವರ್ಷ ಭ್ರಷ್ಟಾಚಾರವೂ ವ್ಯಾಪಕವಾಗಿಯೇ ನಡೆದಿತ್ತು. ಎರಡು ವರ್ಷಗಳ ಹಿಂದೆ ರಾಜ್ಯ ಚುನಾವಣೆಯಲ್ಲಿ ಆಪ್ ಪಕ್ಷವು ಪ್ರಚಂಡ ಬಹುಮತದಿಂದ ಗೆದ್ದಿತ್ತು. ೨೦೧೩ ಹಾಗೂ ೨೦೧೫ರಲ್ಲಿ ಆಪ್ ಪಕ್ಷಕ್ಕೆ ದೆಹಲಿಯ ಜನತೆ ವೋಟಿನ ಜೊತೆ ಪ್ರೀತಿಯನ್ನೂ ನೀಡಿತ್ತು.

ಇಂಥ ಜನಪ್ರಿಯ ಸರ್ಕಾರದ ಜೊತೆ ಬಿಜೆಪಿಯ ಹಿಡಿತದಲ್ಲಿದ್ದ ಮಹಾನಗರ ಪಾಲಿಕೆಯು ಜಗಳಕ್ಕಿಳಿಯಿತು. ದೆಹಲಿ ಸರ್ಕಾರವು ಪಾಲಿಕೆಗೆ ಹಣ ಬಿಡುಗಡೆ ಮಾಡುವಲ್ಲಿ ನಿಧಾನಗತಿ ತೋರಿಸುತ್ತಿದೆ ಹಾಗೂ ವೇತನ ಬಿಡುಗಡೆ ಮಾಡದೇ ತಡೆಹಿಡಿದಿದೆ ಎಂದು ಪಾಲಿಕೆ ಆರೋಪಿಸಿತು. ಹಾಗೆಯೇ, ಪಾಲಿಕೆಯ ಕೆಲಸಗಾರರು ಕೆಲಸ ನಿಲ್ಲಿಸಿ ಪ್ರತಿಭಟಿಸಿದ್ದರಿಂದ ಇಡೀ ಊರು ಸ್ವಚ್ಛತೆಯನ್ನು ಕಾಣದೇ ದುರ್ನಾತ ಹಿಡಿಯಿತು. ಪಾಲಿಕೆಯು ೧೦ ವರ್ಷಗಳಲ್ಲಿ ಜನರಿಂದ ಪ್ರಶಂಸೆಗೆ ಒಳಗಾಗುವಂತಹ ಶ್ರೇಷ್ಠ ಸಾಧನೆಯನ್ನೇನೂ ಮಾಡಿರಲಿಲ್ಲ. ಪ್ರಗತಿ ಕಾರ್ಯಗಳ ವೇಗ ಅಷ್ಟಕ್ಕಷ್ಟೇ ಇತ್ತು.

ಮತ್ತಷ್ಟು ಓದು »

27
ಏಪ್ರಿಲ್

ಅಂಕಣರಂಗ ೧ – ಅನಿಯತಕಾಲಿಕ ಅಂಕಣದ ಅಂಕುರಾರ್ಪಣ!!

– ಮು ಅ ಶ್ರೀರಂಗ, ಬೆಂಗಳೂರು
pexels-photo-302440ನಿಲುಮೆಯಲ್ಲಿ ವಾರಕ್ಕೊಮ್ಮೆ ಒಂದು ಅಂಕಣ ಬರೆಯುವ ಆಸೆ ಸುಮಾರು ದಿನಗಳಿಂದ  ಇತ್ತು. ಸುಮಾರು ಎರಡು ವರ್ಷಗಳ ಹಿಂದೆ ನಾನು ಇದೇ ಜಾಲತಾಣದಲ್ಲಿ ‘ನಿನ್ನೆಗೆ ನನ್ನ ಮಾತು’ ಎಂಬ ತುಂಬಾ  ಧ್ವನಾರ್ಥಕವುಳ್ಳ ಹೆಸರನ್ನಿಟ್ಟುಕೊಂಡು ಒಂದು ಅಂಕಣ ಬರೆದಿದ್ದೆ. ಅದು ಐದು ಲೇಖನಗಳ ನಂತರ ಮುಂದುವರಿಯಲಿಲ್ಲ.  ಬರೀ ಆರಂಭ ಶೂರತ್ವವಾಗಿ ಹೋಯಿತು. ಈ ಸಲದ ಲೇಖನಗಳಿಗೆ   ಅಂಕಣರಂಗ ಎಂಬ ಹೆಸರನ್ನೇನೋ ಇಟ್ಟುಕೊಂಡಿರುವೆ. ಜತೆಗೇ ಯಾವುದಕ್ಕೂ ಇರಲಿ ಎಂಬ ಹುಷಾರಿನಿಂದ ಅನಿಯತಕಾಲಿಕ ಎಂಬ ರಕ್ಷಾಕವಚವನ್ನೂ ಧರಿಸಿಕೊಂಡಿರುವೆ!!. ಏಕೆಂದರೆ  ವಾರಕ್ಕೊಂದರಂತೆಯೋ  ಅಥವಾ ಹದಿನೈದು ದಿನಗಳಿಗೊಮ್ಮೆಯೋ ತಪ್ಪದೆ ಬರೆಯುವ ಬಗ್ಗೆ ನನಗೇ ಅನುಮಾನವಿದೆ. ಅದಕ್ಕೆ ಕಾರಣ  ಬರವಣಿಗೆ ನನ್ನ ಮನದಾಳದ  ಆಸೆಯಾದರೂ  ಅದು ನನಗೆ   ಓದಿನಷ್ಟು  ಪ್ರಿಯವಾದುದಲ್ಲ. ಸುಲಭವೂ ಅಲ್ಲ.  ನಾನು ಬರೆದರೆ ಒಂದು ಹತ್ತು ಪುಸ್ತಕಗಳ ಪರಿಚಯಾತ್ಮಕ ಲೇಖನವನ್ನು ಹೊಸ ಕನ್ನಡ ಸಾಹಿತ್ಯದ ಒಬ್ಬ  ಹವ್ಯಾಸಿ ಓದುಗನ ಮಟ್ಟದಲ್ಲಿ  ಮಾತ್ರ   ಬರೆಯಬಲ್ಲೆ.   ಅಂಕಣ ಬರೆಯಲು ಸಾಹಿತ್ಯವೊಂದೇ ಆಗಬೇಕೇ? ಬರೆಯುವ ಮನಸ್ಸಿದ್ದರೆ ಎಷ್ಟೊಂದು ವಿಷಯಗಳಿಲ್ಲ.

ಮತ್ತಷ್ಟು ಓದು »