ಅಮಿತ್ ಷಾ ಲಕ್ಷದ್ವೀಪ ಪ್ರವಾಸ ವಿಸ್ತಾರದ ಮತ್ತೊಂದು ಮಜಲು…
ಸಂತೋಷ್ ಬಿ.ಎಲ್
ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ
ಭಾಜಪ
ವಿಸ್ತಾರ-ವಿಕಾಸ ಬಿಜೆಪಿಗೆ ಒಂದೇ ನಾಣ್ಯದ ಎರಡು ಮುಖಗಳು. ಬಹುಮತದಲ್ಲಿ ನಿಲ್ಲದೇ ಸರ್ವವ್ಯಾಪಿಯಾಗಬೇಕು.. ಸರ್ವಸ್ಪರ್ಶಿಯಾಗಬೇಕು ಎಂಬುದು ಬಿಜೆಪಿಯ ಗುರಿ. ವಿಚಾರ-ವಿಕಾಸ-ಸಂಘಟನೆ ನಮ್ಮ ಬೆಳವಣಿಗೆಯ ಮೂರು ಆಯಾಮಗಳು. ವಿಕಾಸ ಪುರುಷ ನರೇಂದ್ರ ಮೋದಿಯವರ ನೇತೃತ್ವ ವಿಸ್ತಾರ ಪುರುಷ ಅಮಿತ್ ಷಾರವರ ಸಾರಥ್ಯ ಇಂದು ಬಿಜೆಪಿಯನ್ನು ದೇಶದ ಮೂಲೆ ಮೂಲೆಗಳಿಗೆ ಕೊಂಡೊಯ್ಯುತ್ತಿದೆ. ಪ್ರತೀ ಮನೆ-ಮನವನ್ನು ಮುಟ್ಟುವ ಯೋಜನೆಯೊಡನೆ ಪಂಚಾಯತ್ನಿಂದ ಪಾರ್ಲಿಮೆಂಟ್ವರೆಗೆ ಎಂಬ ಗುರಿಯೊಡನೆ ಬಿಜೆಪಿಯ ಯಾತ್ರೆ ಭರದಿಂದ ಸಾಗಿದೆ. ಪಂ.ದೀನದಯಾಳ ಉಪಾಧ್ಯಾಯ ಜನ್ಮಶತಾಬ್ದಿ ವರ್ಷ ಈ ಯಾತ್ರೆಗೆ ಇನ್ನಷ್ಟು ಹುರುಪು ತುಂಬಿದೆ. 3 ಸಾವಿರಕ್ಕೂ ಮಿಕ್ಕಿ 1 ವರ್ಷದ ‘ವಿಸ್ತಾರಕ’ರು ಹಾಗೂ 4 ಲಕ್ಷಕ್ಕೂ ಹೆಚ್ಚು 15 ದಿನ ಸಮಯ ನೀಡುವ ‘ವಿಸ್ತಾರಕ’ರನ್ನು ಹೊರಡಿಸುವುದು ನಮ್ಮ ಗುರಿ. ಆ ಗುರಿಗೆ ಚೈತನ್ಯ ತುಂಬಲು ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾರವರು ಸ್ವತಃ ತಾವು 15 ದಿನ ವಿಸ್ತಾರಕರಾಗಿ ‘ವಿಸ್ತಾರ ಯಾತ್ರೆ’ ಘೋಷಣೆ ಮಾಡಿದರು. ಪಶ್ಚಿಮ ಬಂಗಾಲ, ಓರಿಸ್ಸಾ, ತೆಲಂಗಾಣ, ಲಕ್ಷದ್ವೀಪ ಹಾಗೂ ಗುಜರಾತ್ನಲ್ಲಿ 3 ದಿನ ಕೆಲಸ ಮಾಡುವ ಸಂಕಲ್ಪ ಘೋಷಿಸಿದರು. ಈ ಘೋಷಣೆಯೇ ಪಕ್ಷದ ಒಳಗೆ ವಿದ್ಯುತ್ ಸಂಚಾರ ಮೂಡಿಸಿತು. ಮತ್ತಷ್ಟು ಓದು
ಯಶಸ್ಸಿನಿಂದ ಮುನ್ನುಗ್ಗುತ್ತಿರುವ #ಗೋಪ್ರಾಣಭಿಕ್ಷೆ
-ಶಿಶಿರ್ ಅಂಗಡಿ
ಸಾಮೂಹಿಕ ಪ್ರಾರ್ಥನೆ,ಸಮಾಜದ ಸಹಾಕರ ~ ಯಶಸ್ಸಿನಿಂದ ಮುನ್ನುಗ್ಗುತ್ತಿರುವ #ಗೋಪ್ರಾಣಭಿಕ್ಷೆ
ಪ್ರಾರ್ಥನೆ ಅಂದ್ರೆ ನಿಸ್ವಾರ್ಥವಾಗಿ ಒಳ್ಳೆಯ ಕೆಲಸಗಳನ್ನು ಮಾಡೋದು.ಪ್ರಾರ್ಥನೆ ಅಂದ್ರೆ ರಸ್ತೆ ದಾಟಲು ಕಷ್ಟ ಪಡುತ್ತಿರುವ ವೃದ್ಧರಿಗೆ, ಮಕ್ಕಳಿಗೆ ಸಹಾಯ ಮಾಡುವದು.ಪ್ರಾರ್ಥನೆ ಅಂದ್ರೆ ಇನ್ನೊಬ್ಬರಿಗೆ ಹೃದಯಾಂತರಾಳದಿಂದ ಶುಭವನ್ನು ಹಾರೈಸುವುದು.ಸಾಮೂಹಿಕ ಪ್ರಾರ್ಥನೆಗೆ ದೇವರನ್ನೇ ಧರೆಗಿಳಿಸುವ ಶಕ್ತಿ ಇದೆ ಅಂತ ಹೇಳ್ತಾರೆ.ಪ್ರಾರ್ಥನೆ ಎಂದರೆ ದೇವರ ಎದುರಿನಲ್ಲಿ ಬೇಡುವುದು ಎಷ್ಟು ಸರಿಯೋ, ಇನ್ನೊಬ್ಬರಿಗೆ ಒಳಿತು ಬಯಸುವುದು, ಒಳಿತನ್ನು ಮಾಡುವುದು ಕೂಡ ಅಷ್ಟೇ ಸರಿ ಎನ್ನುತ್ತಾರೆ ಬಲ್ಲವರು.
ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಸಾವಿನಂಚಿನಲ್ಲಿರುವ ಗೋವುಗಳ ಶೋಷನೀಯ ಸ್ಥಿತಿ ಮನಗಂಡು ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರಭಾರತಿ ಮಹಾಸ್ವಾಮಿಗಳವರು ಕೊಟ್ಟ ಒಂದು ಕರೆಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಗೋಪ್ರೇಮಿಗಳು ದೇಶದ ಉದ್ದಗಲಗಳಿಂದ ದೊಡ್ಡ ಮಟ್ಟದಲ್ಲಿ ಸ್ಪಂದಿಸಿ ಸರಳ ಭೋಜನ – ಸರಳ ಜೀವನದೊಟ್ಟಿಗೆ ವಾರಕ್ಕೆ ಒಂದು ಹೊತ್ತಿನ ಊಟ ಬಿಟ್ಟು ಆ ಹಣವನ್ನು ಗೋಪ್ರಾಣಭಿಕ್ಷೆಗೆ ಸಮರ್ಪಿಸಿದ್ದಾರೆ. ಈ ಮೂಲಕ ಸಾವಿರಾರು ಟನ್ ಮೇವು ಖರೀದಿಗೆ ಸಹಕರಿಸಿದ್ದಾರೆ. ನೂರಾರು ಕಾರ್ಯಕರ್ತರು ಬೆಟ್ಟದ ತಪ್ಪಲಿನಲ್ಲಿ ಅವಿಶ್ರಾಂತವಾಗಿ ಸೇವೆ ಸಲ್ಲಿಸುತ್ತಾ ದಿನನಿತ್ಯ ಸಮಯಕ್ಕೆ ಸರಿಯಾಗಿ ಗೋವಿಗೆ ಮೇವು ತಲುಪುವಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ #GiveUpAMeal ಅಭಿಯಾನಗಳ ಮೂಲಕ ದೇಶದ ಒಳ ಹೊರಗಿನ ಒಂದು ಮಿಲಿಯನಗೂ ಅಧಿಕ ಜನರನ್ನು ತಲುಪಿದ್ದು ಬಹುಪಾಲು ಜನ ಈ ಅಭಿಯಾನಕ್ಕೆ ತನು-ಮನ-ಧನದ ಸಹಕಾರ ನೀಡಿದ್ದಾರೆ.
ಹಾಗೇಯೆ ದೃಶ್ಯ ಹಾಗೂ ಪತ್ರಿಕಾ ಮಾಧ್ಯಮಗಳೂ, ನ್ಯೂಸ್ ಪೋರ್ಟಲ್,ಬ್ಲಾಗುಗಳೂ ಕೂಡ ಅಭಿಯಾನದ ಪ್ರತಿಹಂತದಲ್ಲೂ ವಿಷಯಗಳನ್ನು ಸಮಾಜಕ್ಕೆ ತಲುಪಿಸುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿವೆ.
ಆಫ್ರಿಕಾದ ಕಾಡಿನಲ್ಲೊಂದು ಸರ್ಜಿಕಲ್ ಸ್ಟ್ರೈಕ್ (ಭಾಗ-1)
– ತಾರನಾಥ ಸೋನ
ಲೆಫ್ಟಿನಂಟ್ ಮುಸ ಬಂಗುರಾ ಬಂಧಿಯಾಗಿದ್ದ ಗುಂಡಿ ತುಂಬಾ ಆಳವೇನೂ ಇರಲಿಲ್ಲ, ಕೇವಲ 2 ಮೀಟರ್ ಅಷ್ಟೇ. ಆದರೆ ಸುತ್ತಲು ಹರಡಿದ್ದ ಮಾನವ ತ್ಯಾಜ್ಯ, ಕೆಸರು ನರಕದರ್ಶನ ಮಾಡಿಸುತಿತ್ತು. ಅದಲ್ಲದೆ ಹಲ್ಲೆಯಿಂದ ದೇಹದಲ್ಲಿ ಅದ ಗಾಯಗಳು ಅಪಾರ ಹಿಂಸೆ ಉಂಟುಮಾಡುತ್ತಿದ್ದವು. ಮದ್ಯ ಮತ್ತು ಮಾದಕ ಪದಾರ್ಥ ಸೇವಿಸಿ ಕ್ರೂರವಾಗಿ ದಂಡಿಸುತ್ತಿದ್ದ ನರ ರಾಕ್ಷಸರ ಕೈಯಿಂದ ಹೊರಬಂದು ಬದುಕುವ ಸಾಧ್ಯತೆಯೂ ಇರಲಿಲ್ಲ. ”ಉಳಿದ ಬ್ರಿಟಿಷರನ್ನು ಅವರು ಬಿಟ್ಟುಬಿಡಬಹುದು, ಆದರೆ ನಾನು ಅವರಷ್ಟು ಮೌಲ್ಯಯುತವಾಗಿಲ್ಲ, ಸೇನೆಗೆ ನಿಷ್ಠನಾಗಿ ಸೇವೆ ಸಲ್ಲಿಸಿದಕ್ಕೆ ಬಂಡುಕೋರರಿಂದ ಸಿಕ್ಕ ಶಿಕ್ಷೆ ಇದು” ಎಂದು ಅವರ ಮನಸ್ಸು ಹೇಳುತ್ತಿತ್ತು. ಏಕೆಂದರೆ ಅವರು ಸಿಯಾರ್ ಲಿಯೋನ್ ಸೇನೆಯ ಸೈನಿಕ. ಮತ್ತಷ್ಟು ಓದು
ಕೈದಾಳ..!
– ರವಿಶಂಕರ್
ಹೊಯ್ಸಳರ ಕಾಲದ ಶಿಲ್ಪ ಕಲೆಗೆ ಪ್ರಸಿದ್ದವಾದ ಬೇಲೂರು, ಹಳೇಬೀಡು ಇವುಗಳ ಹೆಸರನ್ನು ಎಲ್ಲರೂ ಕೇಳೇ ಇರುತ್ತೀರಿ! ಅದರ ಶಿಲ್ಪಿ ಜಕಣಾಚಾರಿಯ ಹೆಸರನ್ನು ಕೇಳದೇ ಇರುವವರೂ ಕಡಿಮೆ ಎಂದೇನನ್ನ ಅನಿಸಿಕೆ! ಇದರ ಹೊರತಾಗಿ ಜಕಣಾಚಾರಿಯ ಹುಟ್ಟೂರಾದ “ಕೈದಾಳ”ದ ಬಗ್ಗೆ ಕೇಳಿರುವುದು/ತಿಳಿದಿರುವುದು ಕಡಿಮೆ ಎಂದು ನನ್ನ ಬಲವಾದ ನಂಬಿಕೆ ;)! ಪ್ರೂವ್ ಮೀ ರಾಂಗ್!
“ಕ್ರೀಡಾಪುರ” ಇದು ಕೈದಾಳದ ಮೊದಲ ಹೆಸರು! ಇಲ್ಲಿ ಜನಿಸಿದ ಜಕಣಾಚಾರಿ ಶಿಲ್ಪಕಲೆಯಲ್ಲಿ ಪಳಗಿ, ಸ್ಥಳೀಯ ಮುಖ್ಯಸ್ಥನಾದ ‘ನೃಪ ಹಾಯ’ ಎಂಬುವನಲ್ಲಿ ತನ್ನ ವೃತ್ತಿಜೀವನವನ್ನು ಶುರು ಮಾಡಿದಎಂದು ತಿಳಿದು ಬಂದಿದೆ! ವೃತ್ತಿ ಜೀವನದ ಮಹತ್ವಾಕಾಂಕ್ಷೆಯಿಂದ ಮದುವೆಯ ನಂತರ ಮನೆ ಬಿಟ್ಟ ಯುವಕನಾದ ಜಕಣಾಚಾರಿ, ನಾಡಿನ ಉದ್ದಗಲಕ್ಕೂ ತಿರುಗಿ ತನ್ನ ಅಸ್ತಿತ್ವ ಹಾಗೂ ಖ್ಯಾತಿಯನ್ನು ಗಳಿಸಿದ್ದು ಹೊಯ್ಸಳರ ನಾಡಿನಲ್ಲಿ. ಇದರ ಸಾಕ್ಷಿಗಳೇ ಬೇಲೂರು ಹಾಗೂ ಹಳೇಬೀಡಿನ ದೇವಾಲಯಗಳು! ಮತ್ತಷ್ಟು ಓದು
ಯಕ್ಷಗಾನದಲ್ಲಿ ಏಸುಕ್ರಿಸ್ತ
– ವಿನಾಯಕ ಹಂಪಿಹೊಳಿ
ಏಸುಕ್ರಿಸ್ತನ ಜೀವನ ಕಥೆಯನ್ನು ಯಕ್ಷಗಾನದ ಆಟದ ರೂಪದಲ್ಲಿ ತೋರಿಸುವ ಪ್ರಯತ್ನವೊಂದು ಈಗ ಚರ್ಚೆಗೆ ಗ್ರಾಸವಾಗಿದೆ. ಒಂದು ಗುಂಪು ಇಂಥದೊಂದು ಪ್ರಯತ್ನವು ಕ್ರಿಶ್ಚಿಯಾನಿಟಿಯನ್ನು ಹರಡುವ ಹುನ್ನಾರದ ಭಾಗವೆಂದು ಭಾವಿಸಿದೆ. ಏಸುಕ್ರಿಸ್ತನ ಜೀವನವನ್ನು ಭಾರತೀಯ ಕಲೆಯೊಂದರ ಮೂಲಕ ತೋರಿಸಿ, ಏಸುವು ಇಡೀ ಮಾನವ ಸಮುದಾಯವನ್ನು ರಕ್ಷಿಸಲು ಹುಟ್ಟಿದ್ದಾನೆ ಎಂಬ ಕ್ರಿಶ್ಚಿಯಾನಿಟಿಯ ನಂಬಿಕೆಯೊಂದನ್ನು ಹರಡಿ, ಜನರನ್ನು ಮತಾಂತರಗೊಳಿಸುವ ಯೋಜನೆಯ ಒಂದು ಭಾಗ ಎಂಬುದು ಮೊದಲನೇ ಗುಂಪಿನ ವಾದವಾಗಿದೆ. ಹೀಗಾಗಿ ಇಂಥ ಪ್ರಯೋಗಗಳು ಉಚಿತವಲ್ಲ ಎಂಬುದು ಈ ಗುಂಪಿನವರ ಅಭಿಪ್ರಾಯ.
ಇನ್ನೊಂದು ಗುಂಪು ಇಂಥ ಹೊಸ ಪ್ರಯತ್ನವನ್ನು ಸ್ವಾಗತಿಸುತ್ತದೆ. ಕಲೆಗೆ ಯಾವುದೇ ನಿರ್ಬಂಧಗಳಿರಕೂಡದು. ಯಕ್ಷಗಾನವು ಯಾರೊಬ್ಬರ ಸೊತ್ತೂ ಅಲ್ಲ. ಭಾರತದಲ್ಲಿರುವ ಕ್ರಿಶ್ಚಿಯನ್ನರು ತಮ್ಮ ಯಕ್ಷಗಾನ ಕಲೆಯಲ್ಲಿ ಏಸುವನ್ನೇಕೆ ರೂಪಿಸಿಕೊಳ್ಳಬಾರದು ಎನ್ನುವದು ಎರಡನೇ ಗುಂಪಿನವರ ವಾದವಾಗಿದೆ. ಯಕ್ಷಗಾನದಲ್ಲಿ ಹೊಸ ಪ್ರಯೋಗಗಳು ನಡೆಯಬೇಕು. ಈ ರೀತಿಯ ಪ್ರಯೋಗಗಳು ಕೋಮು ಸೌಹಾರ್ದಕ್ಕೆ ಅಡಿಗಲ್ಲಾಗಿರುತ್ತವೆ. ಆ ನಿಟ್ಟಿನಲ್ಲಿ ಇಂಥ ಪ್ರಯೋಗಗಳನ್ನು ಅನುಮತಿಸಬೇಕು ಎನ್ನುವದು ಈ ಗುಂಪಿನವರ ಅಭಿಪ್ರಾಯವಾಗಿದೆ.
ಯಕ್ಷಗಾನದಲ್ಲಿ ಏಸುವಿನ ಕತೆಯನ್ನು ಅಳವಡಿಸುವದು ಚರ್ಚುಗಳ ಹುನ್ನಾರವೇ ಆಗಿರಬೇಕೆಂಬುದು ಕೇವಲ ಅನುಮಾನವಷ್ಟೇ ಆಗಿದೆ, ಒಂದು ವೇಳೆ ಅದು ಹುನ್ನಾರವೇ ಆಗಿದ್ದರೂ, ಆಗಿರದಿದ್ದರೂ ಅದೊಂದೇ ಕಾರಣವು ಅಂತಹ ಪ್ರಯೋಗಗಳನ್ನು ನಿಲ್ಲಿಸಲು ಸಮರ್ಥವಾದ ವಾದವಾಗುವದಿಲ್ಲ. ಅಲ್ಲದೇ ಕಲಾವಿದನಿಗೆ ಸ್ವಾತಂತ್ರ್ಯವಿರಬೇಕೆಂಬುದು ಎಲ್ಲರಿಗೂ ಒಪ್ಪಿತವಾಗುವ ಅಂಶವೇ ಆಗಿದೆ. ಹೀಗಾಗಿ ಯಕ್ಷಗಾನದಲ್ಲಿ ಏಸುವಿನ ಕತೆಯು ಅಳವಡಿಸಲ್ಪಡಬಾರದು ಎನ್ನುವ ವಾದವು ತರ್ಕಬದ್ಧವಾಗಿ ಯೋಚಿಸಿದಾಗ ಸಮರ್ಪಕವೆಂದು ಅನಿಸುವದಿಲ್ಲ.
ಟ್ರಿಗೋನೋಮೆಟ್ರಿ
– ಎಸ್. ಎನ್. ಸೇತುರಾಂ
“ಅನಾಥ ಆಗ್ಹೋಗಿದ್ದೀನಿ, ಅಪ್ಪಾ, ಅಮ್ಮ, ತಂಗಿ ಯಾರೂ ತಲೆ ಹಾಕಲ್ಲ. ನಂದೇ ಹಣೆಬರಹ ಅನ್ನೋ ಹಾಗೆ ಬಿಟ್ಟಿದ್ದಾರೆ. ಬಂದೋರೂ ಅಷ್ಟೇ. ನೋಡ್ತಾರೆ. ಚೆನ್ನಾಗಿ ಮಾತಾಡ್ತಾರೆ. ಹೆಚ್ಚು ಕಮ್ಮಿ ದಿನವೇ ನಿರ್ಧಾರವಾಗಿ ಹೋಗುತ್ತೆ. ಮಿಕ್ಕಿದ್ದಕ್ಕೆ phone ಮಾಡ್ತೀವಿ ಅಂತಂದು ಹೋಗ್ತಾರೆ. ಮತ್ತೆ phone ಇರೋಲ್ಲ.”
ಅಳ್ತಿದ್ದ ಮಾಧವ, ಮಗಳಿಗೆ ಮೂವತ್ತಾಗಿದೆ, B.E. ಓದಿದ್ದಾಳೆ, ಎಮ್ಮೆಸ್ಸು ಈಗ MBA ಮಾಡ್ತಿದ್ದಾಳೆ. ಮದುವೆಯಾಗಬೇಕು!
“70 ಸಾವಿರ ಬರ್ತಿದೆ ತಿಂಗಳಿಗೆ, ಅವಳ್ದೇ 25 ಲಕ್ಷ ಇಟ್ಟಿದ್ದೀನಿ. ಗಂಡು ಹೂಂ ಅಂದ್ರೆ.. ಎರಡೇ ದಿನದ notice, ಅವ್ರು ಹೇಳಿದ ಛತ್ರದಲ್ಲಿ ಮದುವೆ ಮಾಡ್ತೀನಿ. ನೋಡು ಗುರು.. please” ಅಂಗಲಾಚ್ತಿದ್ದ.
ನಾನೇನು ಮಾಡಬಹುದಿತ್ತು. ಕೂತು ಕೇಳಬಹುದು ಅಷ್ಟೇ. ತಲೆ ಆಡಿಸ್ದೆ.
“ಬದುಕಿನಲ್ಲಿ ಸೋಲೇ ಕಂಡಿರಲಿಲ್ಲ. ಇದೊಂದು ವಿಷಯದಲ್ಲಿ ಸೋತಿದ್ದೀನಿ. ಆಗ್ತಿಲ್ಲ ನನ್ನ ಕೈನಲ್ಲಿ. ನೀನು ಹೇಳಿದ ಹಾಗೆ ಕೇಳ್ತೀನಿ. ಕೂತ್ಕೋ ಅಂದ್ರೆ ಕೂಡ್ತೀನಿ.. ನಿಲ್ಲು ಅಂದ್ರೆ ನಿಲ್ತೀನಿ.. ಒಂದು ಗಂಡು ಹುಡುಕಿ ಕೊಡೊ. ನಂದು ಮಾತು ಸರಿ ಇಲ್ಲ ಅಂತಾರೆ. ನೀನೇ ಮಾತಾಡು… ಮಗಳ ಹತ್ತಿರ ನೇರ ಮಾತಾಡೋದಿದ್ರೂ ಸರೀನೆ. ನನ್ನ ಮನೆಯಲ್ಲಿ ಸಂಪೂರ್ಣ ಸ್ವಾತಂತ್ರ್ಯ ನಿಂದು. ದಯವಿಟ್ಟು ಏನಾದ್ರೂ ಮಾಡು.”
ಬಿಕ್ಕುತ್ತಿದ್ದ, ಕಣ್ಣಲ್ಲಿ ನೀರು ಧಾರಾಕಾರ ಹರೀತಿತ್ತು. ಒಂದು ಕ್ಷಣ ಅಂತಃಕರಣ ಕಲುಕ್ತು. ನನ್ನ ಕಣ್ಣಲ್ಲು ಮನುಷ್ಯನ ಅಸಹಾಯಕ ಸ್ಥಿತಿಗೆ ಮರುಗಿ ನೀರು ತುಂಬ್ತು. ನಂತರದ ಕ್ಷಣದಲ್ಲಿ ಮನುಷ್ಯನ ಪರಿಸ್ಥಿತಿ ಬಗ್ಗೆ ಅಸಹ್ಯ ಬಂತು.
ಮತ್ತಷ್ಟು ಓದು
ಬಾಹುಬಲಿ ಹಾಗೂ ಬುದ್ಧಿಜೀವಿಗಳು
– ವಿನಾಯಕ ಹಂಪಿಹೊಳಿ
ಇತ್ತೀಚೆಗೆ ಬಿಡುಗಡೆಯಾದ ಬಾಹುಬಲಿ-೨ ಚಿತ್ರವು ಉಳಿದೆಲ್ಲ ಚಿತ್ರಗಳ ದಾಖಲೆಗಳನ್ನೆಲ್ಲ ಮುರಿದು ಇತಿಹಾಸವನ್ನು ಸೃಷ್ಟಿಸಿತು. ಒಂದು ಸಾವಿರ ಕೋಟಿ ಗಳಿಸಿದ ಮೊತ್ತಮೊದಲ ಭಾರತೀಯ ಚಿತ್ರವೆಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಜನರು ಬಾಹುಬಲಿ ಚಿತ್ರದ ಎರಡೂ ಸರಣಿಗಳನ್ನು ಮನಸಾರೆ ಆನಂದಿಸಿದರು. ಬಾಹುಬಲಿಯ ಮೊದಲ ಭಾಗದಲ್ಲಿ ಕಂಡು ಬಂದಿದ್ದ ಹಲವಾರು ತಾಂತ್ರಿಕ ಹಾಗ ನಟನೆಯ ನ್ಯೂನತೆಗಳನ್ನೆಲ್ಲ ತಿದ್ದಿಸಿ, ರಾಜಮೌಳಿ ಎರಡನೇ ಭಾಗವನ್ನು ಬಹಳ ಸುಂದರವಾಗಿ ಕಟ್ಟಿಕೊಟ್ಟರು. ಕಥೆಯ ಮೊದಲ ಭಾಗದಲ್ಲಿ ಕಾಡುವ ಎಲ್ಲ ಪ್ರಶ್ನೆಗಳಿಗೂ ಕಾರಣವನ್ನು ಒದಗಿಸಿ, ಯಾವ ಪ್ರಶ್ನೆಯನ್ನೂ ಹಾಗೇ ಉಳಿಸಿಕೊಳ್ಳದೇ, ಕಥೆಯನ್ನು ಮುಗಿಸಿದ ಕೀರ್ತಿ ರಾಜಮೌಳಿಗೆ ಸಲ್ಲಬೇಕು.
ಯುದ್ಧದ ದೃಶ್ಯಗಳಂತೂ ಎರಡೂ ಚಿತ್ರಗಳಲ್ಲಿ ಬಹಳ ಚೆನ್ನಾಗಿ ಮೂಡಿಬಂದಿವೆ. ನಮ್ಮ ಪೂರ್ವಜರು ಯಾವೆಲ್ಲ ತಂತ್ರಗಳನ್ನು ಅನುಸರಿಸಿ ಯುದ್ಧಗಳನ್ನು ನಡೆಸಿದ್ದಾರೋ, ಅವೆಲ್ಲವುಗಳನ್ನೂ ರಾಜಮೌಳಿಯವರು ಕಲಾತ್ಮಕವಾಗಿ ತೋರಿಸಿದ್ದಾರೆ. ಮೇಲ್ನೋಟಕ್ಕೆ ಈ ಎಲ್ಲ ಯುದ್ಧತಂತ್ರಗಳೂ ರಾಜಮೌಳಿಯ ಕಲ್ಪನೆಯಂತೆ ಕಂಡರೂ, ಅವುಗಳಲ್ಲಿ ಬಹಳಷ್ಟು ತಂತ್ರಗಳನ್ನು ಹಿಂದೆ ನಮ್ಮ ಕ್ಷತ್ರಿಯರು ಅನುಸರಿಸಿರುವದಕ್ಕೆ ಚಾರಿತ್ರಿಕ ದಾಖಲೆಗಳಿವೆ. ಶಿವಗಾಮಿ, ದೇವಸೇನಾ, ಅವಂತಿಕಾ ಅಂಥ ಸ್ತ್ರೀ ಪಾತ್ರಗಳೂ ಕ್ಷಾತ್ರಗುಣಗಳಿಂದ ಕೂಡಿದ್ದವು. ಇದೂ ಕೂಡ ನಮ್ಮ ಚರಿತ್ರೆಯಲ್ಲಿ ಹೋರಾಡಿದ ವೀರ ವನಿತೆಯರನ್ನೇ ಬಿಂಬಿಸುತ್ತದೆ.
ಕೈ ಜಾರುತ್ತಿರುವ ಜಮ್ಮುಕಾಶ್ಮೀರ ; ನೆನಪಾಗುವ ಜಗಮೋಹನ್
– ರಾಕೇಶ್ ಶೆಟ್ಟಿ
ಕಳೆದ 5 ತಿಂಗಳಿನಲ್ಲಿ ಸೇನೆಯ ಮೇಲೆ 7 ದಾಳಿಗಳು ; ಮೇ 2ನೇ ತಾರೀಖು ಇಬ್ಬರು ಭಾರತೀಯ ಯೋಧರ ತಲೆಕಡಿಯಲಾಯಿತು;2 ಬ್ಯಾಂಕುಗಳ ದರೋಡೆ,ಹತ್ಯೆಗಳು; ರಾಜ್ಯ ಸರ್ಕಾರವೇ ಭದ್ರತಾ ದೃಷ್ಟಿಯಿಂದ 40 ಬ್ಯಾಂಕುಗಳಲ್ಲಿ ನಗದು ವ್ಯವಹಾರ ಮಾಡದಂತೆ ಸೂಚಿಸಿದ್ದು; ಸಹೋದರಿಯ ಮದುವೆಗೆಂದು ರಜೆಯಲ್ಲಿ ಮನೆಗೆ ಬಂದಿದ್ದ ಯೋಧನನ್ನು ಅಪಹರಿಸಿ,ಚಿತ್ರಹಿಂಸೆ ನೀಡಿ ಹತ್ಯೆ;ಹುತಾತ್ಮ ಯೋಧನ ಶವಯಾತ್ರೆಯಲ್ಲಿ ಕಲ್ಲು ತೂರಾಟ;ಎನ್ಕೌಂಟರಿನಲ್ಲಿ ಸತ್ತ ಉಗ್ರನ ಶವಯಾತ್ರೆಯಲ್ಲಿ ಪ್ರತ್ಯಕ್ಷವಾದ ಉಗ್ರರಿಂದ ಗಾಳಿಯಲ್ಲಿ ಗುಂಡು,ಪ್ರತೀಕಾರದ ಕೂಗು;ಆಡಳಿತಾರೂಢ ಪಿಡಿಪಿ ಪಕ್ಷದ ಪುಲ್ವಾಮ ಜಿಲ್ಲಾಧ್ಯಕ್ಷನನ್ನು ಗುಂಡಿಕ್ಕಿ ಕೊಲ್ಲಲಾಯಿತು.
ಇವೆಲ್ಲ ಘನಂಧಾರಿ ಸಾಧನೆಗಳಾಗಿರುವುದು ಆಗುತ್ತಿರುವುದು ಜಮ್ಮುಕಾಶ್ಮೀರ ರಾಜ್ಯದಲ್ಲಿ.ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಉಗ್ರ ಬರ್ಹಾನ್ ವನಿಯ ಹತ್ಯೆಯ ನಂತರ ಭುಗಿಲೆದ್ದ ಹಿಂಸಾಚಾರ, Demonetization ಮತ್ತು ಸರ್ಜಿಕಲ್ ಸ್ಟ್ರೈಕ್ ನಂತರ ತಾತ್ಕಾಲಿಕವಾಗಿ ತಣ್ಣಗಾಗಿತ್ತಾದರೂ ಈಗ ಭೀಕರ ಹಂತಕ್ಕೆ ಹೊರಟಿರುವಂತೆ ತೋರುತ್ತಿದೆ.ಜಮ್ಮುಕಾಶ್ಮೀರ ರಾಜ್ಯದಿಂದ ಈಗ ಬರುತ್ತಿರುವ ಸುದ್ದಿಗಳು 90ರ ದಶಕವನ್ನು ಮತ್ತೊಮ್ಮೆ ನೆನಪಿಸುತ್ತಿರುವುದು ಸುಳ್ಳಲ್ಲ. 90ರ ದಶಕದಲ್ಲೂ ಹೀಗೆ ಕಾನೂನು-ಸುವ್ಯವಸ್ಥೆಯೆನ್ನುವುದು ಹಾಳು ಬಿದ್ದು ಹೋಗಿತ್ತು.ಆಗಲೂ ಹೀಗೆ ಉಗ್ರಗಾಮಿಗಳು ಕಾಶ್ಮೀರಿಗಳ ಮನೆಬಾಗಿಲು ತಟ್ಟುತ್ತಿದ್ದರು,ಅನಾಮತ್ತಾಗಿ ಮನೆಯಿಂದ ಎತ್ತಾಕಿಕೊಂಡು ಹೋಗಿ ಚಿತ್ರಹಿಂಸೆ ಕೊಟ್ಟು ಕೊಲ್ಲುತ್ತಿದ್ದರು.ಈಗ ಹೊತ್ತಿ ಉರಿಯುತ್ತಿರುವ ದಕ್ಷಿಣ ಕಾಶ್ಮೀರದ ಸ್ಥಿತಿ ಮತ್ತೆ 90ರ ದಶಕಕ್ಕೆ ಹೊರಳಿ ನಿಂತಂತಿದೆ.
ಅಂಕಣರಂಗ-೨ : ಡಿ. ವಿ. ಪ್ರಹ್ಲಾದ್ ಅವರ ‘ಹೊಳೆದದ್ದು ತಾರೆ … ಕೆಲವು ಸಂಪಾದಕೀಯಗಳು’ ಪುಸ್ತಕ ಪರಿಚಯ
– ಮು. ಅ ಶ್ರೀರಂಗ ಬೆಂಗಳೂರು
ಹೊಳೆದದ್ದು ತಾರೆ:
ಬೆಂಗಳೂರಿನಿಂದ ಪ್ರಕಟವಾಗುವ ಸಂಚಯ ಸಾಹಿತ್ಯ ಪತ್ರಿಕೆಯ ಸಂಪಾದಕರಾದ ಡಿ ವಿ ಪ್ರಹ್ಲಾದ್ ಅವರು ಈ ಪುಸ್ತಕದಲ್ಲಿ ‘ನಿಮ್ಮೊಡನೆ’ ಎಂಬ ಶೀರ್ಷಿಕೆಯಲ್ಲಿ ಓದುಗರ ಜತೆ ತಾವು ನಡೆದು ಬಂದ ದಾರಿಯನ್ನು ಈ ರೀತಿ ಹಂಚಿಕೊಂಡಿದ್ದಾರೆ. ‘೧೯೮೭ರಿಂದ ಬರೆದಿರುವ ಸಂಪಾದಕೀಯಗಳಲ್ಲಿ ಆಯ್ದ ಕೆಲವು ಈ ಹೊತ್ತಿಗೆಯ ರೂಪದಲ್ಲಿದೆ. ಮೊದಲ ಸಂಚಿಕೆಯಿಂದಲೂ ಸಂಪಾದಕೀಯ ಆಯಾ ಸಂದರ್ಭಕ್ಕೆ ಪ್ರತಿಸ್ಪಂದನದ ರೂಪದಲ್ಲಿರುತ್ತಿತ್ತು. ಜೆರಾಕ್ಸ್ ಫೋಟೋ ಪ್ರತಿಯ ಪತ್ರಿಕೆಯಾಗಿ ಪ್ರಕಟಗೊಳ್ಳುತ್ತಿದ್ದ ಪತ್ರಿಕೆಯ ಮೊದಲ ಬೆನ್ನುಪುಟದಲ್ಲಿ ಒಂದು ಪ್ಯಾರದಷ್ಟು ಬರೆಯಲು ಜಾಗವಿರುತ್ತಿತ್ತು. ಹಾಗೇ ಮೊದಮೊದಲ ಹದಿನಾರು ಪುಟಗಳ ಪ್ರಿಂಟು ಅವತರಣಿಕೆಯಲ್ಲೂ. ‘ಸಂಚಯ’ ಎನ್ನುವ ಗೆಳೆಯರ ಗುಂಪಿನ ಭಾಗವಾಗಿದ್ದ ಈ ಸಾಹಿತ್ಯ ಪತ್ರಿಕೆ ಮೊದಲು ಕೆಲವು ಕಾಲ ಡಿ ವಿ ಪ್ರಹ್ಲಾದ್ ಮತ್ತು ಮಂಡಳಿ ಅಂತ ಪ್ರಕಟಗೊಳ್ಳುತ್ತಿತ್ತು’. ಮಂಡಳಿಗಳು ಮುಗಿದು ಚದುರಿದ ಮೇಲೆ ಪ್ರಹ್ಲಾದರೂ ಸೇರಿದಂತೆ ಉಳಿದವರು ಮೂವರು ಮಾತ್ರ . ‘ಕೊನೆಗೆ ಉಳಿದದ್ದು ಪ್ರಹ್ಲಾದ್ ಅವರೊಬ್ಬರೇ’. ಮತ್ತಷ್ಟು ಓದು