ಸತ್ಯಕ್ಕೆ ಸಾವಿಲ್ಲವೆನ್ನುವುದೇನೋ ನಿಜ, ಆದರೆ ಸುಳ್ಳಿಗೆ ಕೈಕಾಲುಗಳಿವೆಯಲ್ಲಾ!
– ಹನುಮಂತ ಕಾಮತ್
ಲೋಕ ಕಲ್ಯಾಣಕ್ಕಾಗಿ ತಪೋನಿರತ ಋಷಿಮುನಿಗಳಿಗೆ ರಾಕ್ಷಸರು ಉಪಟಳವನ್ನು ಕೊಡುತ್ತಿದ್ದರು, ಋಷ್ಯಾಶ್ರಮಗಳಿಗೆ ದಾಳಿ ಮಾಡುತ್ತಿದ್ದರು ಎನ್ನುವ ಕಥೆಗಳು ಪುರಾಣಗಳಲ್ಲಿ ಪದೇಪದೇ ಬರುತ್ತವೆ. ತ್ರೇತಾಯುಗದಲ್ಲೂ, ದ್ವಾಪರದಲ್ಲೂ ರಾಕ್ಷಸರದ್ದು ಅದೇ ಬುದ್ಧಿ, ಅದೇ ಚಾಳಿ. ಲೋಕಕಲ್ಯಾಣಕ್ಕೆ ಅಡ್ಡಗಾಲು ಹಾಕುವುದೆಂದರೆ ದುಷ್ಟಶಕ್ತಿಗಳಿಗೆ ಏನೋ ಖುಷಿ. ಅಂದರೆ ಸಮಾಜದಲ್ಲಿ ಸಾತ್ವಿಕ ಗುಣ ವೃದ್ಧಿಯಾದಾಗಲೆಲ್ಲಾ ಅದನ್ನು ತಡೆಯುವ ಪ್ರವೃತ್ತಿ ಅನಾದಿಯಿಂದಲೂ ಸೃಷ್ಟಿಯಲ್ಲಿ ನಡೆಯುತ್ತಾ ಬಂದಿವೆ.
ಮತ್ತಷ್ಟು ಓದು