ನನ್ನ ಮೇಲೂ ನಡೆದಿತ್ತು ಆಪರೇಷನ್ ಶಿಲುಬೆ!
– ಪ್ರವೀಣ್ ಕುಮಾರ್ ಮಾವಿನಕಾಡು
ಬೆಂಗಳೂರಿಗೆ ಕಾಲಿಟ್ಟು ಕೆಲವೇ ಸಮಯವಾಗಿತ್ತು. ಮಾರಾಟ ಪ್ರತಿನಿಧಿಯಾಗಿ ಮನೆ ಮನೆಮನೆಗಳ ಮೆಟ್ಟಿಲು ಹತ್ತಿಳಿಯುತ್ತಿದ್ದ ಸಮಯದಲ್ಲೇ ಪರಿಚಯವಾದವರು ರಾಜು ಮೆನನ್ ಎಂಬ ಕೇರಳ ಮೂಲದ ವ್ಯಕ್ತಿ. ಪರಿಚಯ ಸ್ನೇಹವಾಗಿ ಸ್ನೇಹ ವ್ಯವಹಾರಕ್ಕೆ ತಿರುಗಿದಾಗ ಪ್ರಾರಂಭವಾಗಿದ್ದೇ ಇಮೇಜ್ ಮೇಕರ್ಸ್ ಎನ್ನುವ ಕಲರ್ ವಿಸಿಟಿಂಗ್ ಕಾರ್ಡ್ ಮುದ್ರಿಸುವ ಸಣ್ಣದೊಂದು ವ್ಯವಹಾರ. ಕೇವಲ ಐದು ಸಾವಿರ ಮುಂಗಡದೊಂದಿಗೆ ಬಾಣಸವಾಡಿ ಮುಖ್ಯರಸ್ತೆಯಲ್ಲಿ ಪ್ರಾರಂಭಿಸಿದ ಆ ನಮ್ಮ ವ್ಯವಹಾರ ನಾವಂದುಕೊಂಡಷ್ಟಲ್ಲದಿದ್ದರೂ ಒಂದು ಮಟ್ಟದ ಯಶಸ್ಸು ಕಾಣತೊಡಗಿತು. ಆದರೆ ಆ ವೇಳೆಗಾಗಲೇ ಮದುವೆಯಾಗಿ ಒಂದು ಮಗುವನ್ನೂ ಹೊಂದಿದ್ದ ರಾಜು ಮೆನನ್ ಮಾಡಿಕೊಂಡ ಸಾಲ ವಿಪರೀತವಾಗಿ ವಿಸಿಟಿಂಗ್ ಕಾರ್ಡ್ಸ್ ಮುದ್ರಿಸಲು ಗಿರಾಕಿಗಳಿಂದ ನಾವು ಸಂಗ್ರಹಿಸಿದ್ದ ಮುಂಗಡ ಹಣವೂ ಸೇರಿದಂತೆ ಇದ್ದ ಬದ್ದ ಹಣವನ್ನೆಲ್ಲಾ ಎತ್ತಿಕೊಂಡು ರಾತ್ರೋ ರಾತ್ರಿ ಪರಾರಿಯಾಗಿದ್ದ. ಮತ್ತಷ್ಟು ಓದು