ಕೇಳುತ್ತಿದೆಯಾ ಗೋವಿನ ಆಕ್ರಂದನ…
– ಶಾರದ ಡೈಮಂಡ್
ಜನನದಿಂದ ಮರಣ ಪರ್ಯಂತ ಹುಲು ಮಾನವರಿಗೆ ಅಮೃತ ಸಮಾನವಾದ ಹಾಲನ್ನುಣಿಸುವವಳು ಗೋಮಾತೆ. “ಗವಾಂ ಅಂಗೇಷು ತಿಷ್ಟಂತಿ ಭುವನಾನಿ ಚತುರ್ದಶ” – ಗೋವಿನ ದೇಹದ ಕಣಕಣಗಳಲ್ಲೂ ಹದಿನಾಲ್ಕು ಲೋಕಗಳನ್ನು ವ್ಯವಸ್ಥಿತವಾಗಿ ನಡೆಸತಕ್ಕ ಮೂವತ್ಮೂರು ಕೋಟಿ ದೇವತೆಗಳು ಅನ್ಯಾನ್ಯ ಸ್ಥಳಗಳಲ್ಲಿ ನೆಲೆಸಿರುತ್ತಾರೆ. ಗೋವಿನಿಂದ ದೊರಕುವ ಹಾಲು, ಮೊಸರು, ಬೆಣ್ಣೆ, ತುಪ್ಪ ಮನುಷ್ಯ ಸ್ವಾಸ್ಥಮಯ ಜೀವನವನ್ನು ನಡೆಸಲು ಆಧಾರವಾಗಿದೆ. ಗೋಮೂತ್ರ, ಗೋಮಯ ಕೃಷಿಗೆ ಜೀವಾಳ. ಹೀಗೆ ಒಂದಿಲ್ಲೊಂದು ರೀತಿಯಲ್ಲಿ ಕಾಮಧೇನುವಾಗಿ ನಮ್ಮನ್ನು ಸಲಹುತ್ತಿರುವ ಗೋವಿಗೆ ಭಾರತದಲ್ಲಿ ವಿಶೇಷವಾದ ಸ್ಥಾನವಿದೆ. ಮತ್ತಷ್ಟು ಓದು