ವಿಷಯದ ವಿವರಗಳಿಗೆ ದಾಟಿರಿ

Archive for

17
ಮೇ

ಬರಗಾಲದಲ್ಲಿ ವರವಾದ ಶ್ರೀಸಂಕಲ್ಪ

– ಶಿಶಿರ್ ಅಂಗಡಿ

ಈ ಬಾರಿಯ ಭೀಕರ ಬರಗಾಲ ಮತ್ತು ಸರಕಾರದ ಅನರ್ಥದ ಕಾನೂನುಗಳು ಬೆಟ್ಟದ ತಪ್ಪಲಿನ ಸಾವಿರಾರು ಗೋವುಗಳನ್ನು ಹಾಗೂ ನೂರಾರು ಗೋಪಾಲಕರನ್ನು ಹಸಿವಿನಿಂದ ನರಳುವಂತೆ ಮಾಡಿ ಅಕ್ಷರಶಃ ಕಂಗೆಡಿಸಿದೆ.. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅಲ್ಲಿನ ಗೋವುಗಳಿಗೆ ಮೇವೊದಗಿಸುವ ಮೂಲಕ ಆಪದ್ಬಾಂಧವರಂತೆ ಗೋವು‌ ಮತ್ತು ಗೋವಳರ ಕಷ್ಟಕ್ಕೊದಗಿ ಬಂದವರು  ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರಭಾರತಿ ಮಹಾಸ್ವಾಮಿಗಳವರು. ಈ 44 ದಿನಗಳಿಂದೀಚೆಗೆ ಸತತವಾಗಿ ಬೆಟ್ಟಕ್ಕೆ ಮಠ ಪೂರೈಸಿದ ಮೇವಿನ ಒಟ್ಟು ಮೊತ್ತ ೨೧೦೦ ಟನ್ ದಾಟಿದೆ. ೨ ಲಕ್ಷ ಕೇಜಿ ಮೇವುಗಳನ್ನು ದಿನವೊಂದಕ್ಕೆ ೨.೫ ಲಕ್ಷ ರೂಪಾಯಿ ವೆಚ್ಚದಲ್ಲಿ ಹದಿಮೂರು ಕೇಂದ್ರಗಳಲ್ಲಿ ಪ್ರತಿದಿನ ಸುಮಾರು ೨೦-೨೫ ಸಾವಿರ ಗೋವುಗಳಿಗೆ ಮೇವು ಒದಗಿಸಲಾಗುತ್ತಿದೆ. ದಶಕಗಳಿಂದ ಗೋರಕ್ಷಣೆಗೆ ಕಟಿಬದ್ಧರಾಗಿರುವ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರಭಾರತಿ ಮಹಾಸ್ವಾಮಿಗಳವರು, ಸಾವಿನ ಅಂಚಿನಲ್ಲಿರುವ ಗೋವುಗಳನ್ನು ರಕ್ಷಿಸುವ ಮಹದುದ್ದೇಶದಿಂದ ಬೆಟ್ಟದ ತಪ್ಪಲಿನ ಎಲ್ಲ ಗೋವುಗಳಿಗೂ ಮಳೆಗಾಲ ಪ್ರಾರಂಭದವರೆಗೂ ಮೇವು ಒದಗಿಸುವ ಭರವಸೆ ನೀಡಿದ್ದರು. ಮತ್ತಷ್ಟು ಓದು »