ವಿಷಯದ ವಿವರಗಳಿಗೆ ದಾಟಿರಿ

Archive for

1
ಜೂನ್

ಒಂದು ಹೊತ್ತು ಉಪವಾಸ ಮಾಡಿ, ಅದರ ಹಣದಲ್ಲಿ ಗೋವುಗಳನ್ನು ಉಳಿಸಿಕೊಳ್ಳುವ ವಿನೂತನ ಅಭಿಯಾನ #GiveUpAMeal ಹಿಂದಿನ ಕತೆ..

ಅಜಿತ್ ಶೆಟ್ಟಿ
ಹೆರಂಜೆ ದೊಡ್ಡಮನೆ.

ಗೋಹತ್ಯೆ ತಡೆಗಾಗಿನ ಕೂಗು ಭಾರತದಲ್ಲಿ ಬಹಳ ಹಿಂದಿನದು, ಇತ್ತೀಚಿನ ಡಿಜಿಟಲ್ ಇಂಡಿಯಾ ಯುಗದಲ್ಲಿ ಅದು ಸೋಷಿಯಲ್ ಮೀಡಿಯದಲ್ಲೂ ಸದ್ದು ಮಾಡುತ್ತಿದೆ.. ನಮ್ಮ ಯುವಕರು ಗೋಹತ್ಯೆ ನಿಲ್ಲಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬಡಿದುಕೊಳ್ಳುವಾಗ ಸೋಕಾಲ್ಡ್ ಪ್ರಗತಿಪರರು ಸೋಷಿಯಲ್ ಮೀಡಿಯದಲ್ಲಿರುವ ಮಂದಿಗೆ ತಲೆ ಇಲ್ಲ, ಅವರಿಗೆ ಅಷ್ಟು ಪ್ರೀತಿ ಇದ್ದರೆ ಒಂದೆರಡು ಗೋವುಗಳನ್ನು ಸಾಕಲಿ, ಗೋಶಾಲೆ ನಡೆಸಲಿ ಹೀಗೆ ಹಲವಾರು ಪ್ರಶ್ನೆಗಳನ್ನೊಡ್ಡಿ ಬಾಯಿ ಮುಚ್ಚಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ನಮ್ಮ ಯುವಕರ ಕೂಗು ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಇದೆಯಾ ಅಥವಾ ನಿಜವಾಗಲೂ ಗೋವುಗಳನ್ನು ಉಳಿಸಿಕೊಳ್ಳುವ ಕಾಳಜಿ ಇದೆಯಾ, ಪೂಜ್ಯ ಭಾವನೆ ಇಟ್ಟುಕೊಂಡಿದ್ದಾರ ಎಂದು ನೋಡಿದರೆ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ನಡೆದ ಒಂದು ಅಭಿಯಾನ ಯುವ ಜನತೆ ಬಗ್ಗೆ ಹೆಮ್ಮೆ ಮೂಡಿಸುತ್ತದೆ ಎಂದು ಭಾವಿಸುತ್ತೇನೆ. ಈ ಅಭಿಯಾನದ ಒಳಗೆ ಹೋಗುವ ಮೊದಲು ಅಭಿಯಾನದ ಪೂರ್ವ ಪ್ರೇರಣೆಯ ಕಡೆ ಒಮ್ಮೆ ಗಮನ ಹರಿಸೋಣ. ನಮ್ಮ ದೇಶದಲ್ಲಿ ಗೋವು ಪ್ರತಿ ರೈತನ ಬೆನ್ನೆಲುಬು, ದೇಶಿ ಗೋವುಗಳು ಅವನತಿ ಹೊಂದಿದರೆ ರಾಸಾಯನಿಕ ಮುಕ್ತ ಕೃಷಿ ಎನ್ನುವುದು ಕನಸಾಗುವುದು ನಿಶ್ಚಿತ. ಇಂತಹ ಸತ್ಯಗಳು ನಮ್ಮ ಸಮಾಜಕ್ಕೆ, ಜನನಾಯಕರಿಗೆ ಗೊತ್ತಿಲ್ಲ ಅಂತೇನು ಇಲ್ಲ.. ಆದರೂ ಓಲೈಕೆ ರಾಜಕಾರಣಕ್ಕಾಗಿ ಗೋಹತ್ಯೆಯನ್ನು ನಿಲ್ಲಿಸಲಾಗುತ್ತಿಲ್ಲ, ನಾವು ಗಾಂಧೀಜಿ ಅನುಯಾಯಿಗಳು ಎಂದವರೇ ದಶಕಗಳ ಕಾಲ ದೇಶವನ್ನು ಆಳಿದರೂ ಗಾಂಧಿ ಕನಸನ್ನು ನನಸು ಮಾಡದೆ ಹೊಣೆಗೇಡಿಗಳಂತೆ ವರ್ತಿಸಿದ್ದಾರೆ. ಇವೆಲ್ಲವುಗಳ ನಡುವೆ ಬರಗಾಲದಿಂದ ಸಾಯುತ್ತಿರುವ ಜಾನುವಾರುಗಳನ್ನು ಉಳಿಸಿ ರೈತನ ಬಾಳನ್ನು ಬಲಗೊಳಿಸುವ ಪ್ರಾಮಾಣಿಕ ಕಾರ್ಯವನ್ನಾದರೂ ಮಾಡುತ್ತಾರೆ ಎಂದುಕೊಂಡರೆ ಅದನ್ನು ಮಾಡದೇ ಅದರಲ್ಲೂ ಭ್ರಷ್ಟಾಚಾರ ಮಾಡಿಕೊಂಡು ಮಜ ಮಾಡುತ್ತಿದ್ದಾರೆ.. ಇಂತಹ ಸಂಧಿಘ್ನ ಪರಿಸ್ಥಿತಿಯಲ್ಲಿ ಮಠಗಳು, ಸಂಘ ಸಂಸ್ಥೆಗಳು ರೈತರ ಬೆನ್ನಿಗೆ ನಿಂತು ಗೋಶಾಲೆಗಳನ್ನು ತೆರೆದು ಗೋವುಗಳನ್ನು ಉಳಿಸಿಕೊಳ್ಳುವ ಸಾಹಸಕ್ಕೆ ಕೈ ಹಾಕಿದ್ದಾರೆ. ಇದರ ಒಂದು ಭಾಗವಾಗಿ ರಾಮಚಂದ್ರ ಪುರ ಮಠವು ಸಹ ೧೪ ಜಿಲ್ಲೆಗಳಲ್ಲಿ ಗೋಶಾಲೆಗಳನ್ನು ತೆರೆದು ಗೋವುಗಳನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಮತ್ತಷ್ಟು ಓದು »