ವಿಷಯದ ವಿವರಗಳಿಗೆ ದಾಟಿರಿ

Archive for

2
ಜುಲೈ

ವಿಕೃತ ಮನಸ್ಸಿನ ಬುದ್ಧಿಗೇಡಿ ಜೀವಿಗಳಿಗೆ ಸ್ವದೇಶಾಭಿಮಾನ ಬರಲೇ ಇಲ್ಲ…

ಶಿವಾನಂದ ಶಿವಲಿಂಗ ಸೈದಾಪೂರ. ಎಂ.ಎ. ವಿದ್ಯಾರ್ಥಿ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ.

“ಇದುವರೆಗೂ ಎಡಬಿಡಂಗಿಗಳು ಬರೆದದ್ದೇ ಇತಿಹಾಸ, ಹೇಳಿದ್ದೇ ಸತ್ಯಾಂಶ ಆಗಿ ಬಿಟ್ಟಿದೆ. ವಿಶ್ವವಿದ್ಯಾಲಯ, ಕಾಲೇಜು ಕ್ಯಾಂಪಸ್‍ಗಳಲ್ಲಿನ ಬೌದ್ಧಿಕ ಸ್ವಚ್ಚತೆಗೂ ಕೂಡ ಇಂದು ‘ಸ್ವಚ್ಛ ಭಾರತ ಅಭಿಯಾನ’ ನಡೆಯಬೇಕಿದೆ”.

ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ನಮ್ಮ ವಿಕೃತ ಮನಸ್ಸಿನ ಬುದ್ಧಿಗೇಡಿ ಜೀವಿಗಳಿಗೆ ಸ್ವದೇಶಭಿಮಾನ ಬರಲೇ ಇಲ್ಲ. ಮುಖ್ಯವಾಗಿ ಮೂರು ಸಲ ನೇರವಾಗಿ ಸೋತು, ಲೆಕ್ಕವಿಲ್ಲದಷ್ಟು ಸಾರಿ ಹಿಂದಿನಿಂದ ಚುರಿ ಹಾಕಲು ಬಂದು ಚಿಂದಿ ಚಿಂದಿಯಾದ ಪಾಕಿಸ್ತಾನದ ಬಗ್ಗೆ ಆಗಾಗ ಒಲವು ತೋರಿಸುತ್ತಿರುವ ಬುದ್ಧಿಜೀವಿಗಳ ಮನಸ್ಥಿತಿ ಈ ಜನ್ಮದಲ್ಲಿ ಸರಿ ಹೋಗುವುದಿಲ್ಲ ಎಂಬುವುದಕ್ಕೆ ಮತ್ತೆ ಅರುಂಧತಿ ರಾಯ್ ಸಾಬೀತು ಮಾಡಿದ್ದಾಳೆ. ಈ ಹಿಂದೆ ಒಮ್ಮೆ ಕಾಶ್ಮೀರದ ಬಗ್ಗೆ ಮಾತನಾಡುತ್ತ “ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಆಗಿರಲಿಲ್ಲ” ಎಂದು ತನ್ನ ಮಾನಸಿಕ ಅಸ್ವಸ್ತತೆಯನ್ನು ಪ್ರದರ್ಶಿಸಿದಳೇ ಹೊರತು, ಪಾಕಿಸ್ತಾನ ಯಾವುದರ ಅವಿಭಾಜ್ಯ ಅಂಗವೆಂದು ಹೇಳಲಿಲ್ಲ. ಈಗ ಏಳು ಲಕ್ಷ ಸೈನಿಕರ ಬದಲು ಎಪ್ಪತ್ತು ಲಕ್ಷ ನೇಮಿಸಿದರೂ ಪ್ರತ್ಯೇಕವಾದಿಗಳನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾಳೆ. ದಿನಗಳೆದಂತೆ ಅತಿ ಬುದ್ಧಿವಂತಿಕೆ ಪ್ರದರ್ಶಿಸಲು ಹೊರಟು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡು ನಗೆಪಾಟಲಿಗೆ ಒಳಗಾಗುತ್ತಿದ್ದಾಳೆ. ಪದೆ ಪದೇ ಪಾಕಿಸ್ತಾನಿಯರನ್ನು ಸಮರ್ಥಿಸುವ ಈಕೆಗೆ ಸಾವಿರಾರು ವರ್ಷದ ಹಿಂದೆ ಈ ಹಿಂದೂ ದೇಶ (ಭಾರತ)ವು ಎಷ್ಟು ವಿಸ್ತೀರ್ಣಗೊಂಡಿತ್ತೆಂಬ ಸಾಮಾನ್ಯ ಜ್ಞಾನವು ಈಕೆಗೆ ಇದ್ದಂತಿಲ್ಲ. ಪಾಕಿಸ್ತಾನದ ಬಗ್ಗೆ ಮಾತನಾಡುವ ಈಕೆಗೆ ಪಾಕಿಸ್ತಾನ, ಅಪಘಾನಿಸ್ತಾನಗಳ ಮೂಲ ನಿವಾಸಿಗಳು ಯಾರು ಎಂಬುದನ್ನು ಒಮ್ಮೆಯೂ ಹೇಳಿಲ್ಲ. ನಿರಂತರವಾಗಿ ಈಕೆ ಪಾಕಿಸ್ತಾನದ ಪ್ರಜೆಯಂತೆ ವರ್ತಿಸುತ್ತ ಬಂದಿದ್ದಾಳೆ. ಮತ್ತಷ್ಟು ಓದು »