ಸಿಡಿಲು ಸನ್ಯಾಸಿಯ ಐದು ನಿಮಿಷದ ಮಾತುಗಳು ಇಡೀ ಜಗತ್ತಿಗೆ ಸನಾತನ ಧರ್ಮದ ಶ್ರೇಷ್ಠತೆಯನ್ನು ಬಿತ್ತರಿಸಿದ್ದವು.
ಶಿವಾನಂದ ಶಿವಲಿಂಗ ಸೈದಾಪೂರ
(ಎಂ.ಎ.ವಿದ್ಯಾರ್ಥಿ.)
ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ.
ಸ್ವಾಮಿ ವಿವೇಕಾನಂದರ 115ನೇ ಪುಣ್ಯಸ್ಮರಣೆಯ ವಿಶೇಷ ಲೇಖನ.
ಅದೊಂದು ತಮ್ಮ ಧರ್ಮ ಪ್ರಾಬಲ್ಯವನ್ನು ಜಗತ್ತಿನ ಇತರ ದೇಶದ ಮೇಲೆ ಹರಡಲು ನಡೆಸಿದ ಸಮಾರಂಭ. ಅದಕ್ಕೂ ಒಂದು ಇತಿಹಾಸ, ನೂರ ಐವತ್ತು ವರ್ಷಗಳ ಹಿಂದೆ ಕೊಲಂಬಸ್ ಶೋಧಿಸಿದ್ದು, ಅದರ ಸ್ಮರಣೆಯ ಹೆಸರಲ್ಲಿ ಕ್ರೈಸ್ತ ಧರ್ಮವನ್ನು ಜಗತ್ತಾದ್ಯಂತ ಬಿತ್ತಲು ಆಯೋಜನಗೊಂಡಿದ್ದೇ ವಿಶ್ವ ಸರ್ವಧರ್ಮ ಸಮ್ಮೇಳನ.. ಅದಕ್ಕೆ ಕಾರಣ ಒಂದು ಉದ್ದೇಶ ಹಲವು. ಅಷ್ಟೊತ್ತಿಗೆ ಕ್ರೈಸ್ತ ಧರ್ಮ ಜಗತ್ತಿನ ಹಲವಾರು ದೇಶಗಳನ್ನು ಆಕ್ರಮಿಸಿಕೊಂಡಿತ್ತು. ಅಂತಹ ಆಕ್ರಮಣಕ್ಕೆ ಒಳಗೊಂಡ ದೇಶಗಳಲ್ಲಿ ಭಾರತವು ಒಂದು. ಮತ ಸುಧಾರಣೆಗಾಗಿ ಬುದ್ಧ, ಬಸವ, ಮಹಾವೀರ, ಶಂಕರ, ಮದ್ವಾಚಾರ್ಯರು…. ಹೀಗೆ ಎಲ್ಲರು ಬಂದು ಹೋದರು. ಯಶಸ್ವಿಯು ಇಲ್ಲ, ವಿಫಲವು ಇಲ್ಲ. ಎಲ್ಲವೂ ಮಧ್ಯಂತರದಲ್ಲಿಯೇ ಸಾಗಿತ್ತೇ ಹೊರತು ಅವರ್ಯಾರು ಸಹ ದೇಶದ ಹೋರ ಹೋಗಿ ಸನಾತನ ಧರ್ಮವನ್ನು ಪ್ರಚಾರ ಮಾಡಲಿಲ್ಲ. ಸನಾತನ ಧರ್ಮದ ಮೇಲೆ ದಾಳಿ ಆದಾಗಲೆಲ್ಲ ತಕ್ಕ ಉತ್ತರಕ್ಕೆ ಸಿದ್ಧವಾಗಿಯೇ ಇತ್ತು ಭಾರತ. ತುರ್ಕರ ದಾಳಿಗೆ ವಿಜಯನಗರ, ಮರಾಠರಂತಹ ಮನೆಗಳು ಹುಟ್ಟುತ್ತಲೇ ಬಂದವು. ಮತ್ತಷ್ಟು ಓದು