ವಿಷಯದ ವಿವರಗಳಿಗೆ ದಾಟಿರಿ

Archive for

8
ಆಗಸ್ಟ್

ಪ್ರಜಾಪ್ರಭುತ್ವ ಎಂಬುದು ರಾಮನಂತೆ ; ರಾಜಕಾರಣಕ್ಕೆ ಬೇಕಿದೆ ನೀತಿ ಸಂಹಿತೆ

– ಸಂತೋಷ್ ತಮ್ಮಯ್ಯ

ಭಾಷೆ ಇದ್ದಮೇಲೆ ವ್ಯಾಕರಣವಿರುವಂತೆ, ಕಾವ್ಯ ಇದ್ದಮೇಲೆ ಕವಿಯೊಬ್ಬನೂ ಇರುವಂತೆ ರಾಜಕೀಯ ಪಕ್ಷ ಇದ್ದಮೇಲೆ ಅದರ ಹಿಂದೊಂದು ಸಿದ್ಧಾಂತವಿರಲೇಬೇಕು. ಪಕ್ಷದ ಹುಟ್ಟು ಕೂಡಾ ಒಂದು ಸಿದ್ಧಾಂತ, ಚಳವಳಿಗಳ ಬುನಾದಿಗಳ ಮೇಲೆ ಆಗಿರುತ್ತದೆ. ಈ ಸಿದ್ಧಾಂತಗಳು ಒಂಥರಾ ಚಪ್ಪರವಿದ್ದಂತೆ. ಆ ಚಪ್ಪರದ ಕೆಳಗೆ ಪ್ರತಿಷ್ಠಾಪಿತವಾದವುಗಳೇ ಪಕ್ಷಗಳು. ವಿಶ್ವಾದ್ಯಂತದ ರಾಜಕೀಯ ಪಕ್ಷಗಳ ಜಾತಕಗಳೆಲ್ಲವೂ ಸಾಧಾರಣವಾಗಿ ಹೀಗೆಯೇ. ಒಂದು ಉದ್ದೇಶ, ಒಂದು ಧ್ಯೇಯ, ಸಮಾಜದ ಅಶೋತ್ತರ, ರಾಷ್ಟ್ರೀಯತೆ, ಪ್ರಾಂತೀಯತೆ, ಪರಂಪರೆ ಮೊದಲಾದವುಗಳು ಆ ಚಪ್ಪರದ ಕಂಬಗಳು. ಸಿದ್ಧಾಂತಗಳನ್ನು ನೋಡಿದರೂ ಆಯಾ ಪಕ್ಷಗಳ ನಡೆ, ವರ್ತನೆಗಳನ್ನು ಸುಲಭವಾಗಿ ಕಂಡುಹಿಡಿದುಬಿಡಬಹುದು. ರಾಜಕೀಯ ಪಕ್ಷಗಳು ಸಿದ್ಧಾಂತಗಳಿಲ್ಲದಿರುವ ಸಾಧ್ಯತೆಗಳೇ ಇಲ್ಲ. ಕನಿಷ್ಠ ಅವು ವ್ಯಕ್ತಿಕೇಂದ್ರಿತವಾದ ಚೆಹರೆಯನ್ನಾದರೂ ಹೊಂದಿರುತ್ತವೆ. ಅಂಥ ಪಕ್ಷ ಆ ವ್ಯಕ್ತಿಯ ವರ್ತನೆ, ಪ್ರಭಾವವನ್ನೇ ಸಿದ್ಧಾಂತವೆಂಬಂತೆ ಬಣ್ಣಿಸಿಕೊಳ್ಳುತ್ತದೆ. ಇನ್ನು ಕೆಲವೊಮ್ಮೆ ಯಾವುದೋ ದೇಶದಲ್ಲಿ ಯಾವುದೋ ಒಂದು ಹೊತ್ತಿನಲ್ಲಿ ನಡೆದ ಒಂದು ಹತ್ಯಾಕಾಂಡವನ್ನೇ ಸಿದ್ಧಾಂತ ಎಂದು ಬಿಂಬಿಸುವ ರಾಜಕೀಯ ಪಕ್ಷಗಳೂ ಇವೆ. ತತ್‌ಕ್ಷಣದ ಒಂದು ಸ್ಪಂದನೆಯನ್ನೇ ರಾಜಕೀಯ ಸಿದ್ಧಾಂತ ಎಂದುಕೊಳ್ಳುವವರೂ ಇದ್ದಾರೆ. ರಾಷ್ಟ್ರೀಯತೆಯ ಹಂಗಿಲ್ಲದಿರುವ ಸಿದ್ಧಾಂತಗಳನ್ನೂ ಕೂಡಾ ಜಗತ್ತು ನೋಡಿದೆ, ಅನುಭವಿಸಿದೆ. ಅಧುನಿಕ ಪ್ರಜಾಪ್ರಭುತ್ವಕ್ಕೂ ಪೂರ್ವದಲ್ಲೇ ಇದ್ದ ಕೆಲವು ಗುಂಪುಗಳು, ಆ ಗುಂಪುಗಳಿಗೂ ಇದ್ದ ಸಿದ್ಧಾಂತಗಳನ್ನೂ ಜಗತ್ತು ನೋಡಿದೆ. ದೀರ್ಘ ಕಾಲ ಬಾಳಿದ ಗಟ್ಟಿತನದ ಸಿದ್ಧಾಂತಗಳನ್ನು, ಪಕ್ಷಗಳನ್ನೂ ನೋಡಿದೆ. ಆತುರದಿಂದ ಸಷ್ಟಿಯಾದವು ಅಷ್ಟೇ ಬೇಗ ಕಾಲವಾದುದನ್ನೂ ನೋಡಿದೆ. ನೆಪಮಾತ್ರಕ್ಕೆ ದೊಡ್ಡದಾಗಿ ಕಾಣುವ ಆದರೆ ಒಳಗೊಳಗೇ ಸತ್ತಂತಿರುವ ಪಕ್ಷ ಮತ್ತು ಸಿದ್ಧಾಂತವನ್ನೂ ನೋಡಿದೆ. ಮತ್ತು ಹಲವು ಅನಿವಾರ್ಯತೆಗಳಿಂದ ಸಿದ್ಧಾಂತದಿಂದ ಹೊರಳಿಕೊಂಡವುಗಳನ್ನು ಕೂಡಾ ಜಗತ್ತು ಹಲವು ಸಂದರ್ಭಗಳಲ್ಲಿ ನೋಡಿದೆ. ಭಾರತವಂತೂ ಅದನ್ನು ತೀರಾ ಹತ್ತಿರದಿಂದ ನೋಡಿದೆ.

ಮತ್ತಷ್ಟು ಓದು »