ವಿಷಯದ ವಿವರಗಳಿಗೆ ದಾಟಿರಿ

Archive for

21
ಆಗಸ್ಟ್

ಕೇವಲ ಲಕ್ಷದಷ್ಟು ಇಂಗ್ಲಿಷ್ ಸೈನಿಕರು ಇಡೀ ಭರತಖಂಡವನ್ನು ಬುಗುರಿಯಂತೆ ಆಡಿಸಿದಾದರೂ ಹೇಗೆ?

– ಸುಜಿತ್ ಕುಮಾರ್

ಈಸ್ಟ್ ಇಂಡಿಯಾ ಕಂಪನಿಯಿಂದ ಬ್ರಿಟಿಷ್ ರಾಜ್ ವರೆಗಿನ ನಡೆ.

ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು ಭಾಗವನ್ನು ತನ್ನ ಹಿಡಿತಕ್ಕೆ ಒಳಪಡಿಸಿಕೊಂಡಿತ್ತು ಎಂಬುದೇ ಪ್ರೆಶ್ನೆ. ಇನ್ನು ನಮ್ಮ ಭಾರತದ ವಿಷಯಕ್ಕೆ ಬಂದರೆ ಸಾವಿರಾರು ಮೈಲುಗಳ ದೂರ ಹಡಗುಗಳಲ್ಲಿ ಕ್ರಮಿಸಿ ಭರತಖಂಡವೆಂಬ ವಿಶ್ವದ ಏಳನೇ ಅತಿ ದೊಡ್ಡ ದೇಶವನ್ನು ಒಳಹೊಕ್ಕು ಸುಮಾರು ಇಪ್ಪತೈದು ಕೋಟಿ  ಜನರನ್ನು ಸುಮಾರು ಎರಡು ಶತಮಾನಗಳಿಗೂ ಹೆಚ್ಚಿನ ಕಾಲ ಹಿಂಡಿ ಹಿಪ್ಪೆಮಾಡಿಯಾಕಲು ಕೇವಲ ತೋಳ್ಬಲದ ಶಕ್ತಿಯೊಂದೇ ಸಾಕಾಗಿತ್ತೇ ಅಥವಾ ಕಾಲಕ್ಕೆ ತಕ್ಕಂತೆ ಹಂತ ಹಂತವಾಗಿ ಉಸಿರುಗಟ್ಟಿಸುವ ಬೇರೊಂದು ಯುಕ್ತಿಯೇ ಬೇಕಿತ್ತೆ? ಅಂತಹದೊಂದು ಕುತಂತ್ರಿ ಯುಕ್ತಿಯ ಪರಿಣಾಮವೇ ಅಂದು ಕೇವಲ ಲಕ್ಷದಷ್ಟು ಇಂಗ್ಲಿಷ್ ಸೈನಿಕರು ಇಡೀ ಭರತಖಂಡವನ್ನು ಬುಗುರಿಯಂತೆ ಆಡಿಸಲು ಸಾಧ್ಯವಾದದ್ದು. ಮತ್ತಷ್ಟು ಓದು »

18
ಆಗಸ್ಟ್

ಭಾರತದ ಮುಂದಿರುವ ಡೊಕ್ಲಮ್ ಸವಾಲು…

– ಶ್ರೇಯಾಂಕ ಎಸ್ ರಾನಡೆ

ಡೊಕ್ಲಮ್, ಭಾರತ-ಭೂತಾನ್-ಚೀನಾ ಮೂರು ದೇಶಗಳ ನಡುವಿನ ಬಹು ಆಯಕಟ್ಟಿನ 89 ಚದರ ಕಿಲೋಮೀಟರ್‍ಗಳ ವ್ಯಾಪ್ತಿಯಲ್ಲಿರುವ ಸಂಕೀರ್ಣ ಪ್ರದೇಶ. ಇದು ಭೂತಾನ್‍ನ ಪಶ್ಚಿಮ ಗಡಿ ಭಾಗದಲ್ಲಿದೆ. ಅಂದರೆ ಟಿಬೆಟ್‍ನ ಆಗ್ನೇಯ ದಿಕ್ಕಿನಲ್ಲಿದೆ. ಮುಖ್ಯವಾಗಿ ಇದು ಭಾರತಕ್ಕೆ ಮುಖ್ಯವಾಗಿರುವ ಚುಂಬಿ ಕಣಿವೆಯ ಸಂಯೋಗ ಸ್ಥಾನದಲ್ಲಿದೆ. ಅದು ಅಧಿಕೃತವಾಗಿ ಭೂತಾನ್‍ನ ಭೂಭಾಗ. ಅನೇಕ ಕಾರಣಗಳಿಂದ ಮೂರು ದೇಶಗಳಿಗೂ ಬಹುಮುಖ್ಯ ಭೂಪ್ರದೇಶ. ಈ ಪ್ರದೇಶದ ಮೇಲೆ ಹಿಡಿತ ಸಾಧಿಸುವುದೆಂದರೆ ಸಿಕ್ಕಿಂನ ಬಹು ಮೌಲ್ಯಯುತ ಚುಂಬಿ ಕಣಿವೆ, ಭೂತಾನ್ ಹಾಗೂ ಇನ್ನೂ ಮುಖ್ಯವಾಗಿ ಸಿಲಿಗುರಿ ಕಾರಿಡಾರ್ ಮುಖೇನ ಈಶಾನ್ಯ ಭಾರತದ ಎಲ್ಲಾ ಚಟುವಟಿಕೆಗಳ ಪ್ರತ್ಯಕ್ಷ ನಿಗಾ ಹಾಗೂ ಪರೋಕ್ಷವಾಗಿ ತಮ್ಮ ಹಿತಾಸಕ್ತಿಗಳಿಂದ ಪ್ರಾದೇಶಿಕ ಪ್ರಾಬಲ್ಯ ಪಡೆದಂತಾಗುತ್ತದೆ. ಹಾಗಾಗಿಯೇ ಇದು ಕೇವಲ ಮೇವು ಬೆಳೆಯುವ ಖಾಲಿ ಗುಡ್ಡದ ನಿಸ್ತೇಜ ಜಾಗವಲ್ಲ. ಮೂರು ದೇಶಗಳ ಮೇಲೆ ಪ್ರಾಬಲ್ಯ ಸಾಧಿಸಬಲ್ಲ ಶಕ್ತಿಯುಳ್ಳ ಆರ್ಥಿಕ, ರಾಜಕೀಯ, ರಾಜತಾಂತ್ರಿಕ ಮತ್ತು ಮಿಲಿಟರಿ ಕಾರಣಗಳಿಂದ ಶಕ್ತಿಸಂಪನ್ನವಾಗಿರುವ ಸುರಕ್ಷಿತ, ಅನುಕೂಲಕರ ತಾಣ. ಈ ಮೂಲಭೂತ ಉದ್ದೇಶದಿಂದ ಇದರ ಮೇಲೆ ಚೀನಾ ಹಾಗೂ ಭಾರತ ಅಪಾರ ಆಸಕ್ತಿ ವಹಿಸಿವೆ. ಮತ್ತಷ್ಟು ಓದು »

17
ಆಗಸ್ಟ್

ಚೀನಾದೊಂದಿಗೆ ಭಾರತಕ್ಕೆ ಯುದ್ಧ ಬೇಕೆ?

– ಶ್ರೇಯಾಂಕ ಎಸ್ ರಾನಡೆ

ಯುದ್ಧವಾಗಲಿದೆ. ಯುದ್ಧಕ್ಕೆ ಸನ್ನದ್ಧ. ಇನ್ನೇನು ಯುದ್ಧ ಆಗೇ ಬಿಟ್ಟಿತು. ನಾಳೆಯೇ ಯುದ್ಧ ಎಂಬಂತಹ ಪರಿಸ್ಥಿತಿಗಳು ಭಾರತ-ಚೀನಾದ ಮಧ್ಯೆ ಉದ್ಭವವಾಗಿರುವುದು ಇದೇ ಮೊದಲೇನಲ್ಲ. ಜನರ ಗಮನಕ್ಕಾಗಿ ಹಾತೊರೆಯುವ ಎರಡೂ ಕಡೆಯ ಆಕ್ರಮಣಕಾರಿ ಮಾಧ್ಯಮಗಳು, ಅವನ್ನೇ ನೆಚ್ಚಿಕೊಂಡು ವಾಸ್ತವತೆಯ ಕನಿಷ್ಟ ಮಾಹಿತಿಯೂ ಇಲ್ಲದ ದೇಶಭಕ್ತರು ಅದಾಗಲೇ ಯುದ್ಧಕ್ಕೆ ರಣಕಹಳೆಯನ್ನು ಮೊಳಗಿಸಿಯಾಗಿದೆ. ಇನ್ನು ಬಾಕಿಯಿರುವುದು ಕೇವಲ ಸೇನೆಗಳ ಗುಂಡಿನ ದಾಳಿಯಷ್ಟೇ! ಮತ್ತು ಭಾರತದ ಗೆಲುವಷ್ಟೇ. ಹೀಗೆ ಆಗಬೇಕೆನ್ನುವುದು ಎಲ್ಲಾ ಭಾರತೀಯರ ಆಸೆಯೂ ಕೂಡ. ಮತ್ತಷ್ಟು ಓದು »

17
ಆಗಸ್ಟ್

ಸ್ವಾತಂತ್ರ್ಯದ ಒಕ್ಕೊರಲ ರಾಗ “ರಾಗ್ ದೇಶ್”

– ಶ್ರೇಯಾಂಕ ಎಸ್ ರಾನಡೆ.

ಭಾರತ ದೇಶಕ್ಕೆ ಸ್ವಾತಂತ್ರ್ಯ ಹೇಗೆ ಬಂತು? ಈ ಪ್ರಶ್ನೆಯನ್ನು ನಿಮ್ಮ ಆಪ್ತರ, ಸಹೋದ್ಯೋಗಿಗಳ ಹಾಗೂ ಯಾವುದೇ ವಿದ್ಯಾರ್ಥಿಗಳ ಬಳಿ ಕೇಳಿ ನೋಡಿ. ಅದಕ್ಕೆ ನಿಮಗೆ ಸಿಗುವ ಉತ್ತರ ಗಾಂಧೀಜಿ ಕೇಂದ್ರಿತವಾಗಿರುತ್ತದೆ. ಖಂಡಿತವಾಗಿಯೂ ಸ್ವಾತಂತ್ರ್ಯ ಚಳುವಳಿಯ ಕೊನೆಯ ಘಟ್ಟದಲ್ಲಿ 1915-1947 ಗಾಂಧೀಜಿಯ ಪಾಲು ಬಹುಮುಖ್ಯವಾದದ್ದು. ಆದರೆ ಈ ದೇಶದ ಜನರ ಆಸ್ಥೆ, ಗಾಂಧೀಜಿಯ ಅಹಿಂಸಾ ಸತ್ಯಾಗ್ರಹ ಮಾತ್ರವೇ ದಪ್ಪ ಚರ್ಮದ ಬ್ರಿಟಿಷರ ಸೊಕ್ಕು ಮುರಿಯಲಿಲ್ಲ. ಅನೇಕ ಕ್ರಾಂತಿಕಾರಿಗಳು, ಸಣ್ಣ-ಪುಟ್ಟ ಹಳ್ಳಿ, ಪ್ರಾಂತ್ಯ-ಪ್ರದೇಶಗಳಲ್ಲಿ ರೈತ, ಬುಡಕಟ್ಟು ಹೀಗೆ ಅಸಂಖ್ಯಾತ ಜನರು ಆಗಾಗ್ಗೆ ಇಂಗ್ಲೀಷರ ಅಹಂಕಾರಕ್ಕೆ ಪೆಟ್ಟುಕೊಟ್ಟರೆ; ಹೊರಗಿನಿಂದ ನೇರವಾಗಿ ಹಾಗೂ ಒಳಗಿನಿಂದ ಪರೋಕ್ಷವಾಗಿ ಬ್ರಿಟಿಷರ ಸೊಕ್ಕನ್ನು, ಅವರ ಬೃಹತ್ ವಸಾಹತು ಸಾಮ್ರಾಜ್ಯದ ಅಸ್ಮಿತೆಯನ್ನೇ ಕಂಪಿಸುವಂತೆ ಮಾಡಿದ್ದು, ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕೆಂದು ಹೊರಟಿದ್ದು ಸುಭಾಷ್ ಚಂದ್ರ ಬೋಸ್‍ರ ಇಂಡಿಯನ್ ನ್ಯಾಷನಲ್ ಆರ್ಮಿ. ಮತ್ತಷ್ಟು ಓದು »

17
ಆಗಸ್ಟ್

ಉಪರಾಷ್ಟ್ರಪತಿ ಹುದ್ದೆಯ ಆಯ್ಕೆ ಮತ್ತವರ ಕರ್ತವ್ಯಗಳು…

– ಶ್ರೇಯಾಂಕ ಎಸ್ ರಾನಡೆ

ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ 13ನೇ ಉಪರಾಷ್ಟ್ರಪತಿ ಚುನಾವಣೆ ನಡೆದಿದೆ. ನಿರೀಕ್ಷೆಯಂತೆ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿ ಮಾನ್ಯ ವೆಂಕಯ್ಯನಾಯ್ಡು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಗೋಪಾಲಕೃಷ್ಣ ಗಾಂಧಿಯವರನ್ನು ಬಹು ಅಂತರದಿಂದ ಸೋಲಿಸಿದ್ದಾರೆ. ಅದಕ್ಕಾಗಿ ಅವರಿಗೂ, ಅವರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಮಾಡಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೂ ಶುಭಾಶಯಗಳು. ಈ ಹೊತ್ತಿನಲ್ಲಿ ರಾಷ್ಟ್ರಪತಿಗಳ ಕೆಲಸ, ಕರ್ತವ್ಯ ಹಾಗೂ ಇನ್ನಿತರ ಸಂಗತಿಗಳ ಕುರಿತು ಬೆಳಕು ಚೆಲ್ಲುವ ಬರಹ. ಮತ್ತಷ್ಟು ಓದು »

16
ಆಗಸ್ಟ್

ಡೊಕ್ಲಮ್ ಸದ್ದು, ಚೀನಾ ದರ್ದು: ಭಾರತ-ಚೀನ ಪ್ರಚಲಿತ ಕಥನ

– ಶ್ರೇಯಾಂಕ ಎಸ್ ರಾನಡೆ

ಡೊಕ್ಲಮ್ ಒಳಗಿರ್ದುಂ ಬೆವರ್ದನಾ ಡ್ರ್ಯಾಗನ್ ಪತಾಕಂ

ನಾವು ನಮ್ಮ ಸ್ನೇಹಿತರನ್ನು ಆಯ್ಕೆಗೆ ತಕ್ಕಂತೆ ಬದಲಾಯಿಸಬಹುದು ಆದರೆ ಭೌಗೋಳಿಕವಾಗಿ ಬೆಸೆದುಕೊಂಡಿರುವ ನೆರೆಹೊರೆಯ ದೇಶ-ಪ್ರದೇಶಗಳನ್ನಲ್ಲ. “ನಾ ಕೊಡೆ ಎನ್ನುವ ಭಾರತ, ತಾ ಬಿಡೆ ಎನ್ನುವ ಚೀನಾ ಹಠ. ಮಧ್ಯದಲ್ಲಿ ಬಿಕ್ಕಟ್ಟಿಗೆ ಸಿಲುಕಿರುವ ಡೊಕ್ಲಮ್ ಪ್ರದೇಶದ ವಾರಸುದಾರ ಭೂತಾನ್”. 1962ರ ಪರಿಸ್ಥಿತಿ ಈಗಿಲ್ಲ. ಎರಡೂ ಪರಮಾಣುಶಕ್ತಿಯ ಶಕ್ತಿಶಾಲಿ ದೇಶಗಳು. ಅದೇ ಹೊತ್ತಿಗೆ ಇಬ್ಬರೂ ನ್ಯೂಕ್ಲಿಯರ್ ಶಸ್ತ್ರಗಳ “ಮೊದಲ ಬಳಕೆ ಇಲ್ಲ”(ನೋ ಫಸ್ಟ್ ಯೂಸ್) ಎಂಬ ತತ್ವ ಪಾಲಿಸುವ ಜವಾಬ್ದಾರಿ ಹೊತ್ತಿವೆ. ಅಂದಿಗೆ “ಹುಲ್ಲುಕಡ್ಡಿಯೂ ಬೆಳೆಯದ ಬರಡು ಭೂಮಿ”(1962, ಅಂದಿನ ಪ್ರಧಾನ ಮಂತ್ರಿ, ನೆಹರೂ ಜವಾಹರ್ ಲಾಲ್ ಮಾತುಗಳು, ಚೀನಾದ ಅತಿಕ್ರಮಣ ಪ್ರವೇಶಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿನ ಹೇಳಿಕೆ) ಎಂದು ನಿರ್ಲಕ್ಷಿಸಲಾಗಿದ್ದ, ಆದರೆ ಇಂದಿಗೆ ಚೀನಾದ ಸಾರ್ವಭೌಮತೆಯ ಪ್ರತಿಷ್ಟೆ ಹಾಗೂ ಭಾರತದ ಆಂತರಿಕ ಭದ್ರತೆಯ ಅನಿವಾರ್ಯತೆಯ ದೃಷ್ಟಿಯಿಂದ ಅಸ್ಪಷ್ಟ ಗಡಿಯಲ್ಲಿನ ಆಯಕಟ್ಟಿನ ಪ್ರದೇಶಗಳು ಈವರೆಗಿನ ಭಾರತ-ಚೀನಾ ಗಡಿ ವಿವಾದದ ಜ್ವಲಂತತೆಗೆ ಮೂಲ. ಅದೀಗ “ಡೊಕ್ಲಮ್” ಕಾರಣದಿಂದ ಮತ್ತೆ ಮುನ್ನೆಲೆಗೆ ಬಂದಿದೆ. ಬೂದಿಮುಚ್ಚಿದ ಕೆಂಡದಂತಿರುವ ಈ ಸರ್ವಋತು ಸಮಸ್ಯೆ 52 ದಿನಗಳ ಬಿಗಿ ಸಂಘರ್ಷಾತ್ಮಕ ವಾತಾವರಣದಿಂದ ಬದಲಾವಣೆಯ ಮುಂದಿನ ದಾರಿಕಾಣದೆ ವಿಚಲಿತವಾಗಿದೆ. ಮತ್ತಷ್ಟು ಓದು »

11
ಆಗಸ್ಟ್

ಆಳ್ವರ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಯುತ್ತಿದೆಯೇ!?

– ಹರೀಶ್ಚಂದ್ರ ಶೆಟ್ಟಿ

ಕಾವ್ಯಶ್ರೀ ಎಂಬ ಹೆಣ್ಣುಮಗಳ ಆತ್ಮಹತ್ಯೆಯ ಪ್ರಕರಣದಲ್ಲಿ ಮೋಹನ ಆಳ್ವರನ್ನು ಸಿಕ್ಕಿ ಹಾಕಿಸಲು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿವೆ.ಜನರ ಭಾವನೆಗಳನ್ನು “ಎನ್ಕ್ಯಾಶ್” ಮಾಡಿಕೊಳ್ಳುವುದರಲ್ಲಿ ಪರಿಣಿತರಾದ ವ್ಯಕ್ತಿಗಳು ಪರದೆಯ ಹಿಂದೆ ನಿಂತುಕೊಂಡು ಪ್ರತಿಭಟನೆಯ ಮೂಲಕ” ಮೈಲೇಜ್ ” ಗಿಟ್ಟಿಸಿಕೊಳ್ಳುತ್ತಿದ್ದಾರೆ.ಮಣಿಪಾಲದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣವೊಂದು ಸುಮಾರು ಸಮಯದ ಹಿಂದೆ ಸಾಕಷ್ಟು ಸುದ್ದಿ ಎಬ್ಬಿಸಿತ್ತು.ಮೊನ್ನೆ ಮೊನ್ನೆ ಮಂಗಳೂರಿನ ಪ್ರಸಿದ್ಧ ವೈದ್ಯಕೀಯ ಕಾಲೇಜ್ ನ ವೈದ್ಯರೊಬ್ಬರನ್ನು ಅಪಹರಿಸಿ ಕೊಲ್ಲಲು ಪ್ರಯತ್ನಿಸಲಾಯಿತು..ಇನ್ನೊಂದು ವೈದ್ಯಕೀಯ ಕಾಲೇಜ್ ನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ.. ಒಂದೆರಡು ತಿಂಗಳ ಹಿಂದೆ,ಮತ್ತೊಂದು ಪ್ರತಿಷ್ಠಿತ ಕಾಲೇಜ್ ನ ವಿದ್ಯಾರ್ಥಿನಿಯೂ ಆತ್ಮಹತ್ಯೆ ಮಾಡಿಕೊಂಡಳು..ಆವಾಗಿನ ಎಲ್ಲಾ ಪ್ರಕರಣಗಳಲ್ಲಿ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳ ಒಡೆಯರುಗಳ ಬಗ್ಗೆ ತಪ್ಪಿಯೂ ಪ್ರಸ್ತಾಪಗಳು ಬರಲಿಲ್ಲ…ಯಾವ ಮಾಧ್ಯಮಗಳೂ ಅಂತಹ ಶಿಕ್ಷಣ ಸಂಸ್ಥೆಗಳ ಮಾಲೀಕರ ವಿಡಿಯೋ ಕಾನ್ಫರೆನ್ಸ್ ಮಾಡಿಸಿ,ವಕೀಲರಂತೆ ಲೈವ್ ಕ್ರಾಸ್ ಎಕ್ಸಾಮಿನೇಷನ್ ಮಾಡಲಿಲ್ಲ..

ಇಂತಹ ಘಟನೆ ನಡೆಯಲು ನಿಮ್ಮಂತ ಶಿಕ್ಷಣ ಸಂಸ್ಥೆಯ ಮಾಲೀಕರ ಪರೋಕ್ಷ ಕುಮ್ಮಕ್ಕು ಎಂದು ಯಾವ ಅಬ್ಬೆ ಪಾರಿಯೂ ಹೇಳುವ ಧೈರ್ಯ ತೋರಿಸಲಿಲ್ಲ ..ಯಾವುದೇ ಲೆಟರ್ ಹೆಡ್ ಸಂಘಟನೆಗಳ ನಾಯಕರುಗಳು ಜನರನ್ನು ಒಟ್ಟುಮಾಡಿಸಿಕೊಂಡು ಬಂದು ಪ್ರತಿಭಟನೆ ಮಾಡಲಿಲ್ಲ..ಆದರೆ ಆಳ್ವರ ಬಗ್ಗೆ ಎಲ್ಲವೂ ಕ್ರಮಬದ್ಧವಾಗಿ ನೆಡೆಯುತ್ತಿದೆ..ಈಗಿನ ಎಲ್ಲಾ ಪ್ರತಿಭಟನೆಗಳ ನೇತೃತ್ವ ವಹಿಸಿಕೊಂಡಿರುವ ವ್ಯಕ್ತಿಗಳು ಪ್ರತಿಭಟನೆಯ ನಾಯಕತ್ವ ವಹಿಸಿಕೊಳ್ಳುವ ಮೊದಲು ತಾವುಗಳು ಈ ತನಕ ಮಾಡಿರುವ ಒಂದಾದರೂ ಜನಪರ ಕೆಲಸಗಳನ್ನು ಜನರ ಮುಂದಿರಿಸಿಕೊಂಡು ಪ್ರತಿಭಟಿಸಲಿ….

ಸುಮಾರು ಮೂರು ನಾಲ್ಕು ವರ್ಷಗಳ ಹಿಂದೆ ಮೂಡುಬಿದರೆಯಲ್ಲಿ ನಡೆಯುವ “ಆಳ್ವಾಸ್ ನುಡಿ ಸಿರಿ ” ಮತ್ತು “ಆಳ್ವಾಸ್ ವಿರಾಸತ್ ” ಎಂಬ ಅಪೂರ್ವ ಕಾರ್ಯಕ್ರಮಗಳ ಬಗ್ಗೆ ಎಡಪಂಥೀಯ ಬುದ್ಧಿ ಜೀವಿಗಳು ಧ್ವನಿ ಎಬ್ಬಿಸಿ ಸಾಕಷ್ಟು ರಾದ್ಧಾಂತ ಮಾಡಿದ್ದರು..ಆವಾಗ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆಪ್ ಮತ್ತು ಫೇಸ್ ಬುಕ್ ಗಳಲ್ಲಿ ಈಗಿನಂತೆ ಜನ ಸಂದಣಿ ಇರಲಿಲ್ಲ.. .ಹಾಗಾಗಿ ಅಂದು ಅವರಿಗೆ ತಮ್ಮ “ಹಿಡನ್ ಅಜೆಂಡಾ”ಗಳನ್ನು ಜನ ಸಾಮಾನ್ಯರ ನಡುವೆ ಹರಿಯಲು ಬಿಟ್ಟು ರಾಷ್ಟ್ರೀಯವಾದಿಗಳನ್ನು ಕಟ್ಟಿ ಹಾಕಲು ಆಗಿರಲಿಲ್ಲ..ಆದುದರಿಂದ ಈ ಬಾರಿ ಅವರೆಲ್ಲ ವ್ಯವಸ್ಥಿತವಾಗಿ ತಮಗಿರುವ ರಾಜಕೀಯ ವಶೀಲಿ ಬಾಜಿಗಳನ್ನು ಉಪಯೋಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ..ಆಗ ಆಳ್ವರ ಪರವಾಗಿ ನಾನೊಂದು ಲೇಖನ ಬರೆದಿದ್ದೆ..ಅದನ್ನು ಮತ್ತೊಮ್ಮೆ ನಿಮ್ಮ ನಡುವೆ ಹಂಚಿಕೊಂಡಿದ್ದೇನೆ. ಸ್ವಂತ ಬುದ್ದಿ ಮತ್ತು ವಿವೇಚನೆ ಇರುವವರಿಗೆ,ಆಳ್ವರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಬಗ್ಗೆ ಸ್ವಲ್ಪವಾದರೂ ಅರ್ಥವಾದೀತು. ಸಾಧ್ಯವಾದರೆ ಒಮ್ಮೆ ಓದಿಕೊಳ್ಳಿ…
………………………………………………………………………………….

ಮತ್ತಷ್ಟು ಓದು »

8
ಆಗಸ್ಟ್

ಪ್ರಜಾಪ್ರಭುತ್ವ ಎಂಬುದು ರಾಮನಂತೆ ; ರಾಜಕಾರಣಕ್ಕೆ ಬೇಕಿದೆ ನೀತಿ ಸಂಹಿತೆ

– ಸಂತೋಷ್ ತಮ್ಮಯ್ಯ

ಭಾಷೆ ಇದ್ದಮೇಲೆ ವ್ಯಾಕರಣವಿರುವಂತೆ, ಕಾವ್ಯ ಇದ್ದಮೇಲೆ ಕವಿಯೊಬ್ಬನೂ ಇರುವಂತೆ ರಾಜಕೀಯ ಪಕ್ಷ ಇದ್ದಮೇಲೆ ಅದರ ಹಿಂದೊಂದು ಸಿದ್ಧಾಂತವಿರಲೇಬೇಕು. ಪಕ್ಷದ ಹುಟ್ಟು ಕೂಡಾ ಒಂದು ಸಿದ್ಧಾಂತ, ಚಳವಳಿಗಳ ಬುನಾದಿಗಳ ಮೇಲೆ ಆಗಿರುತ್ತದೆ. ಈ ಸಿದ್ಧಾಂತಗಳು ಒಂಥರಾ ಚಪ್ಪರವಿದ್ದಂತೆ. ಆ ಚಪ್ಪರದ ಕೆಳಗೆ ಪ್ರತಿಷ್ಠಾಪಿತವಾದವುಗಳೇ ಪಕ್ಷಗಳು. ವಿಶ್ವಾದ್ಯಂತದ ರಾಜಕೀಯ ಪಕ್ಷಗಳ ಜಾತಕಗಳೆಲ್ಲವೂ ಸಾಧಾರಣವಾಗಿ ಹೀಗೆಯೇ. ಒಂದು ಉದ್ದೇಶ, ಒಂದು ಧ್ಯೇಯ, ಸಮಾಜದ ಅಶೋತ್ತರ, ರಾಷ್ಟ್ರೀಯತೆ, ಪ್ರಾಂತೀಯತೆ, ಪರಂಪರೆ ಮೊದಲಾದವುಗಳು ಆ ಚಪ್ಪರದ ಕಂಬಗಳು. ಸಿದ್ಧಾಂತಗಳನ್ನು ನೋಡಿದರೂ ಆಯಾ ಪಕ್ಷಗಳ ನಡೆ, ವರ್ತನೆಗಳನ್ನು ಸುಲಭವಾಗಿ ಕಂಡುಹಿಡಿದುಬಿಡಬಹುದು. ರಾಜಕೀಯ ಪಕ್ಷಗಳು ಸಿದ್ಧಾಂತಗಳಿಲ್ಲದಿರುವ ಸಾಧ್ಯತೆಗಳೇ ಇಲ್ಲ. ಕನಿಷ್ಠ ಅವು ವ್ಯಕ್ತಿಕೇಂದ್ರಿತವಾದ ಚೆಹರೆಯನ್ನಾದರೂ ಹೊಂದಿರುತ್ತವೆ. ಅಂಥ ಪಕ್ಷ ಆ ವ್ಯಕ್ತಿಯ ವರ್ತನೆ, ಪ್ರಭಾವವನ್ನೇ ಸಿದ್ಧಾಂತವೆಂಬಂತೆ ಬಣ್ಣಿಸಿಕೊಳ್ಳುತ್ತದೆ. ಇನ್ನು ಕೆಲವೊಮ್ಮೆ ಯಾವುದೋ ದೇಶದಲ್ಲಿ ಯಾವುದೋ ಒಂದು ಹೊತ್ತಿನಲ್ಲಿ ನಡೆದ ಒಂದು ಹತ್ಯಾಕಾಂಡವನ್ನೇ ಸಿದ್ಧಾಂತ ಎಂದು ಬಿಂಬಿಸುವ ರಾಜಕೀಯ ಪಕ್ಷಗಳೂ ಇವೆ. ತತ್‌ಕ್ಷಣದ ಒಂದು ಸ್ಪಂದನೆಯನ್ನೇ ರಾಜಕೀಯ ಸಿದ್ಧಾಂತ ಎಂದುಕೊಳ್ಳುವವರೂ ಇದ್ದಾರೆ. ರಾಷ್ಟ್ರೀಯತೆಯ ಹಂಗಿಲ್ಲದಿರುವ ಸಿದ್ಧಾಂತಗಳನ್ನೂ ಕೂಡಾ ಜಗತ್ತು ನೋಡಿದೆ, ಅನುಭವಿಸಿದೆ. ಅಧುನಿಕ ಪ್ರಜಾಪ್ರಭುತ್ವಕ್ಕೂ ಪೂರ್ವದಲ್ಲೇ ಇದ್ದ ಕೆಲವು ಗುಂಪುಗಳು, ಆ ಗುಂಪುಗಳಿಗೂ ಇದ್ದ ಸಿದ್ಧಾಂತಗಳನ್ನೂ ಜಗತ್ತು ನೋಡಿದೆ. ದೀರ್ಘ ಕಾಲ ಬಾಳಿದ ಗಟ್ಟಿತನದ ಸಿದ್ಧಾಂತಗಳನ್ನು, ಪಕ್ಷಗಳನ್ನೂ ನೋಡಿದೆ. ಆತುರದಿಂದ ಸಷ್ಟಿಯಾದವು ಅಷ್ಟೇ ಬೇಗ ಕಾಲವಾದುದನ್ನೂ ನೋಡಿದೆ. ನೆಪಮಾತ್ರಕ್ಕೆ ದೊಡ್ಡದಾಗಿ ಕಾಣುವ ಆದರೆ ಒಳಗೊಳಗೇ ಸತ್ತಂತಿರುವ ಪಕ್ಷ ಮತ್ತು ಸಿದ್ಧಾಂತವನ್ನೂ ನೋಡಿದೆ. ಮತ್ತು ಹಲವು ಅನಿವಾರ್ಯತೆಗಳಿಂದ ಸಿದ್ಧಾಂತದಿಂದ ಹೊರಳಿಕೊಂಡವುಗಳನ್ನು ಕೂಡಾ ಜಗತ್ತು ಹಲವು ಸಂದರ್ಭಗಳಲ್ಲಿ ನೋಡಿದೆ. ಭಾರತವಂತೂ ಅದನ್ನು ತೀರಾ ಹತ್ತಿರದಿಂದ ನೋಡಿದೆ.

ಮತ್ತಷ್ಟು ಓದು »

6
ಆಗಸ್ಟ್

IT/ED RAID ಗಳು ಹೇಗೆ ನಡೆಯುತ್ತವೆ?

ಗುಜರಾತಿನ ಶಾಸಕರನ್ನು ಬೆಂಗಳೂರಿನ ರೆಸಾರ್ಟಿನಲ್ಲಿ ತಂದಿಟ್ಟ ೩-೪ ದಿನಗಳ ಒಳಗೆಯೇ,ರಾಜ್ಯ ಸರ್ಕಾರದ ಪವರ್ ಮಿನಿಸ್ಟರ್ ಡಿ.ಕೆ ಶಿವಕುಮಾರ್ ಮೇಲೆ ನಡೆದ ಐಟಿ ದಾಳಿಯನ್ನು,ರಾಜ್ಯ ಸರ್ಕಾರ,ಕಾಂಗ್ರೆಸ್ ,ಕಾಂಗ್ರೆಸ್ ಬೆಂಬಲಿಸುವ ಪತ್ರಕರ್ತ ಮುಖವಾಡಗಳು ಮತ್ತು ಬೆಂಬಲಿಗರೂ ಅದೇ ರಾಗವನ್ನು ಹಾಡಿದರು.ರೇಡ್ ಎಂದರೇನು,ಅದಕ್ಕೆ ಬೇಕಾದ ಪೂರ್ವ ತಯಾರಿಗಳೇನು? ಹೇಗೆ ನಡೆಯುತ್ತದೆ ಎಂಬೆಲ್ಲ ಅಂಶಗಳು ಜನಸಾಮಾನ್ಯರಿಗೆ ತಿಳಿದಿರುವುದಿಲ್ಲ.ಅಂತಹ ಮಾಹಿತಿಯನ್ನು ಒಳಗೊಂಡ ಲೇಖನವಿದು.  

ಜೆಬಿಆರ್ ರಂಗಸ್ವಾಮಿ

IT/ED RAID ಆಗುತ್ತೆ ಅಂದರೆ ಬಲವತ್ತರವಾದ ಸಾಕ್ಷ್ಯಾಧಾರ ಗಳು ಇರಲೇಬೇಕು.ನೂರಿಪ್ಪತ್ತು ನೂರಮೂವತ್ತು ಅಧಿಕಾರಿಗಳು 150 ಕಾರುಗಳಲ್ಲಿ ಸಿಬ್ಬಂದಿಯನ್ನು ತುಂಬಿಕೊಂಡು, ಏಕಕಾಲದಲ್ಲಿ 39 – ರಿಂದ – 64 ಕಡೆ ರೇಡ್ ಮಾಡಲು ಹೊರಟರೆಂದರೆ ತಿಂಗಳೇನು? ವರ್ಷಗಟ್ಟಲೇ ಪೂರ್ವಸಿದ್ಧತೆ ನಡೆದಿರುತ್ತೆ.ಗುಜರಾತಿನ ಗುಜರಿ ಶಾಸಕರ ಸಲುವಾಗಿ ರೇಡ್ ಆಗಿದೆ ; ಪ್ರಜಾತಂತ್ರದ ಕಗ್ಗೊಲೆ ಯಾಗಿದೆ ಎಂಬಂತಹ ಪ್ರಲಾಪಗಳೆಲ್ಲವೂ ಅಜ್ಞಾನಿ ಹೇಳಿಕೆಗಳು ಮಾತ್ರ.ಎಮ್ಮೆ ಗಂಜಲ ಹುಯ್ದರೆ ಇರುವೆ ಕಣ್ಣಿಗೆ ಅದೇ ದೊಡ್ಡ ಜಲಪಾತದಂತೆ ಕಾಣುತ್ತೆ.ಈ ಪುಢಾರಿಗಳು ಪುಟಗೋಸಿ ರೆಸಾರ್ಟ್‌ ರಾಜಕೀಯವನ್ನೇ ಅಂತರಾಷ್ಟ್ರೀಯ ಮಟ್ಟದಷ್ಟು ದೊಡ್ಡದು ಅಂದುಕೊಂಡಿವೆ.

ಇರಲಿ.ಇಂತಹ ರೇಡ್ ಗಳ ಹಿನ್ನೆಲೆ ಹೇಗಿರುತ್ತೆ? ಹೇಗೆ,ಯಾಕೆ,ಯಾವ ಸಂದರ್ಭಗಳಲ್ಲಿ ರೇಡ್ ಮಾಡುತ್ತಾರೆ? ಎಂಬುದರ ವಾಸ್ತವಾಂಶಗಳನ್ನು ನೋಡಿ :

1 ) ರೇಡ್ ಆಗುವವನ ಅನೇಕ ವ್ಯವಹಾರ,ಅವ್ಯವಹಾರ ಕುರಿತಂತೆ ನಾನಾ ಮೂಲಗಳಿಂದ ನಾನಾ ದೂರುಗಳು ಮೊದಲೇ ಬಂದಿರುತ್ತವೆ.ಅವುಗಳ ಸತ್ಯಾಸತ್ಯತೆಗಳ ಬಗ್ಗೆ ಕೂಲಂಕುಷ ಗೋಪ್ಯ ವಿಚಾರಣೆ ತಿಂಗಳುಗಟ್ಟಲೇ ನಡೆದಿರುತ್ತೆ. ಅವುಗಳಲ್ಲಿ ಸತ್ಯಾಂಶ ಇರುವ ಸಂಗತಿಗಳು ಪಟ್ಟಿಯಾಗುತ್ತವೆ.ಇದೊಂದು ದೊಡ್ಡ ಕಸರತ್ತು.ಸಂಗ್ರಹಿಸಿರುವ ಮಾಹಿತಿ ನಿಜವೋ ಅಲ್ಲವೋ ಮತ್ತೆ ಮತ್ತೆ ಖಚಿತ ಪಡಿಸಿಕೊಳ್ಳುತ್ತಾರೆ. (sec 132 IT Act).

2 ) ಎಲ್ಲೆಲ್ಲಿ ರೇಡ್ ಮಾಡಬೇಕೋ ಆಯಾ ಮನೆ,ಜಾಗಗಳ ಪಕ್ಕಾ #ಚಕ್ಕುಬಂದಿ ಪಟ್ಟಿ ತಯಾರಾಗುತ್ತದೆ.ಆ ಮನೆಗೆ ರೇಡ್ ಮಾಡಲು ಎಷ್ಟು ಜನ ಅಧಿಕಾರಿ ಸಿಬ್ಬಂದಿ ನಿಯೋಜಿಸಬೇಕು ಎಂಬುದರ ಯೋಜನೆಯೂ ಸಿದ್ದವಾಗುತ್ತದೆ.

ನೆನಪಿರಲಿ : ಯಾವ ಅಧಿಕಾರಿಯ ನೇತೃತ್ವದಲ್ಲಿ ರೇಡ್ ಆಗುತ್ತದೆಯೋ,ಸ್ವತಃ ಆ ಅಧಿಕಾರಿ ಸಿಬ್ಬಂದಿಗಳಿಗೇ ತಾವು ಎಲ್ಲಿಗೆ,ಯಾರ ಮನೆಗೆ ದಾಳಿ ಇಡುತ್ತೇವೆ ಎಂಬ ವಿಷಯ ಕೊನೆಯತನಕ ತಿಳಿದಿರುವುದಿಲ್ಲ ! ( ನನ್ನದೇ ಅನುಭವ ! )

ಅದು ಅಷ್ಟು ಗೋಪ್ಯ. SECRET! And the Meaning of the secret is SECRET ONLY !

ಮತ್ತಷ್ಟು ಓದು »

4
ಆಗಸ್ಟ್

ನ್ಯಾಸ ಕಾದಂಬರಿಯ ವಿಮರ್ಶೆ

– ಚೈತನ್ಯ ಮಜಲುಕೋಡಿ

ಹರೀಶ ಹಾಗಲವಾಡಿಯವರ ನ್ಯಾಸ ಕಾದಂಬರಿಯನ್ನು ನನ್ನ ಸ್ನೇಹಿತರು ಓದು ಅಂತ ಹೇಳಿ ನನಗೆ ಹೇಳಿದ್ದರೂ ಕೂಡಾ, ಹಲವು ಬಾರಿ ನನಗೆ ಅದರ ಗಾತ್ರ ನೋಡಿ ಓದುವುದಕ್ಕೆ ಹೆದರಿಕೆಯಾಗಿತ್ತು. ಹಾಗೆಯೇ ಕಾದಂಬರಿಯ ವಸ್ತು ಸನ್ಯಾಸದ ಕುರಿತಾದುದಾದ್ದರಿಂದ, ಓದುವುದಕ್ಕೆ ಸ್ವಲ್ಪ ಸಿದ್ಧತೆಯೂ ಬೇಕು ಅಂತ ಅನ್ನಿಸ್ತಾ ಇತ್ತು. ಕಾದಂಬರಿಯನ್ನು ಓದುವುದಕ್ಕೆ ಕೈಗೆತ್ತಿಕೊಂಡ ಮೇಲೆ ನನ್ನ ಮೇಲೆ ಅಪಾರ ಪ್ರಭಾವ ಬೀರಿ ದಿನಗಟ್ಟಲೆ ಗುಂಗು ಹಿಡಿಯುವ ಹಾಗೆ ಮಾಡುವಷ್ಟು ಪ್ರಭಾವಶಾಲಿಯಾಗಿಬಿಟ್ಟಿತು. ಲೇಖಕರ ಮೊದಲ ಕಾದಂಬರಿ ಅಂತ ಗೊತ್ತೇ ಆಗದಷ್ಟು ನೈಪುಣ್ಯ, ಚಿಂತನೆಯ ಆಳ ವಿಸ್ತಾರ ಎರಡರಲ್ಲೂ ಪ್ರಶಾಂತ ಧಾಟಿಯಿಂದ ಒಳಗೊಳ್ಳುತ್ತಾ, ಹಲವು ಬಾರಿ ಭೈರಪ್ಪರ ಬರವಣಿಗೆಯ ನಿಬಿಡ ಶೈಲಿಯನ್ನು ಮತ್ತೆ ಮತ್ತೆ ನೆನೆಸುತ್ತ, ಅವರ ರಸ ಸೃಷ್ಟಿಯ ಪಾಕವು ಕಲೆಯ ಹದ ಮುಟ್ಟಿ ನಿರಪೇಕ್ಷ ಬರವಣಿಗೆ ಸಿದ್ಧಿಸಬೇಕು ಎಂಬ ಮಾತಿಗೆ ಪ್ರತ್ಯಕ್ಷ ನಿದರ್ಶನವಾಗಿ ಹೊರಹೊಮ್ಮಿದ ಸೊಗಸಾದ ಕೃತಿ. (ಈ ಮಾತನ್ನು ಅವರು ಎಲ್ಲಿ ಹೇಳಿದ್ದಾರೆಂದು ನನಗೆ ಮರೆತು ಹೋಗಿದೆ. ಆದರೂ ಎಲ್ಲೋ ಒಂದು ಕಡೆ ಅದರ ಉದ್ಧರಣೆ ಇದೆ) ಅದೂ ಅವರ ಇಪ್ಪೈದರ ತರುಣ ವಯಸ್ಸಿನಲ್ಲೇ ರೂಪುಗೊಂಡ ನಾನೂರು ಪುಟದ ಈ ಸಾಂದ್ರ ಬರಹ ಎಂತವರನ್ನೂ ಬೆಚ್ಚಿ ಬೀಳಿಸುತ್ತದೆ.
ಕತೆಯು ಸನ್ಯಾಸಿಗಳ ಜೀವನದ ಬವಣೆ ಬಾಧೆ ಸಿದ್ಧಿಗಳಲ್ಲೇ ಸುತ್ತುತ್ತ ಹೊರಡುವುದು ಅಚ್ಚರಿ ಮೂಡಿಸುತ್ತದೆ. ಭೈರಪ್ಪರ ಅನ್ವೇಷಣ ಕಥಾತಂತ್ರವನ್ನು ಹಲವು ಕಡೆ ಬಳಸಿಕೊಂಡಿದೆ. ಎಲ್ಲಿಯೂ ಯಾರದೂ ನಕಲಿಲ್ಲ. ನಕಲು ಮಾಡಲು ಈ ವಿಷಯವನ್ನು ಇಷ್ಟು ವಿಸ್ತಾರವಾಗಿ ಬರೆದ ಪುಸ್ತಕವೇ ಕನ್ನಡದಲ್ಲಿಲ್ಲ. ಸನ್ಯಾಸ ಕಾಶಿ ಹಿಮಾಲಯದ ಕುರಿತಾಗಿ ಭೈರಪ್ಪರ ನಿರಾಕರಣದಲ್ಲಿ ವಿಫುಲವಾಗಿ ವಿವರಗಳು ಇದ್ದರೂ ಕೂಡ, ಸನ್ಯಾಸಾಶ್ರಮಗಳ ಕುರಿತಾದ ವಿವರಣೆಗಳು ಎಲ್ಲಿಯೂ ಇಲ್ಲ. ಆ ಮಟ್ಟಿಗೆ ಈ ಕಾದಂಬರಿಯು ಹೊಚ್ಚ ಹೊಸತಾದ ಅನುಭವ. ಸರ್ವತಂತ್ರ ಸ್ವತಂತ್ರವಾಗಿ ವಿಫುಲ ಅಧ್ಯಯನ ಮತ್ತು ಅನುಭವ ಸಾಮಗ್ರಿಯ ಬಿಗಿಯು ನಿರಾತಂಕವಾದ ಕತೆಯ ಓಘಕ್ಕೆ ನೆರವಿತ್ತಿದೆ.

ಸನ್ಯಾಸಿಯಾದವನು ಸಮಾಜಕ್ಕೆ ತೆತ್ತುಕೊಂಡು ಲೋಕೋದ್ಧಾರಕ್ಕೆ ಸಮರ್ಪಿಸಿಕೊಳ್ಳಬೇಕು, ಸ್ವಂತಕ್ಕೆ ಸಾಧನೆಯನ್ನೂ ಮಾಡಬೇಕು ಎಂಬ ಘನ ಉದ್ದೇಶ ಹೊತ್ತು ಹೊರಡುವ ಸಂಸಾರ ವಿಮುಖವಾದ ಧೋರಣೆಯು ಹೇಗೆ ಮತ್ತೆ ಅದೇ ಪ್ರಪಂಚದ ಪಾಶ ಮೋಹಗಳಲ್ಲಿ ಸಿಲುಕಿ ಮಂಕಾಗಿ ಜನಪ್ರಿಯತೆಗೆ ಎರವಾಗುತ್ತ, ಜನಮನ್ನಣೆಗೆ ಹಿಗ್ಗುತ್ತ ಸಾಗಿ, ಕಡೆಯಲ್ಲಿ ಮೂಲೋದ್ದಿಶ್ಯವೇ ಮೂಲೋತ್ಪಾಟನೆಯಾದ ದಿಗ್ಭ್ರಮೆ ಬಹಳ ಕಡೆ ಓದುಗನನ್ನು ಚಿಂತನೆಗೆ ಹಚ್ಚುತ್ತದೆ. ತಂದೆ ತಾಯಿಗಳನ್ನು ನೋಡಿಕೊಳ್ಳುವುದು ಮಕ್ಕಳ ಕರ್ತವ್ಯವೇ ಎಂಬಲ್ಲಿಂದ ಸಂನ್ಯಾಸದ ಅರ್ಥವೇನು ಎನ್ನುವವರೆಗೆ ನೂರಾರು ಮೂಲಭೂತ ಪ್ರಶ್ನೆಗಳನ್ನೆತ್ತುತ್ತ, ಅದಕ್ಕೆ ಪ್ರಾಮಾಣಿಕ ಉತ್ತರಗಳನ್ನೂ ತಡವುತ್ತ, ಹೆಚ್ಚು ಹೆಚ್ಚು ಆಲೋಚನೆಗೆ, ಜವಾಬ್ದಾರಿಯುತ ನಿರ್ಣಯ ನಡುವಳಿಕೆಗಳಿಗೆ ನಾವು ತೊಡಗಬೇಕೆಂಬ ಮಾನೋನ್ನತಿಗೂ ಕೃತಿಯು ಪ್ರೇರಣೆ ನೀಡುತ್ತದೆ.

ಮತ್ತಷ್ಟು ಓದು »