ವಿಷಯದ ವಿವರಗಳಿಗೆ ದಾಟಿರಿ

Archive for

5
ಆಕ್ಟೋ

ಆಧ್ಯಾತ್ಮಿಕ ಪ್ರಗತಿ ಮತ್ತು ಭಾರತೀಯ ಸಂಸ್ಕೃತಿ

ಡಾ. ಸಂತೋಷ್ ಕುಮಾರ್ ಪಿ.ಕೆ
ಶಿವಮೊಗ್ಗ.

ದೀನ್ ದಯಾಳ್ ಉಪಾಧ್ಯಾಯ, ಪ್ರಾಯಶಃ ಇವರ ಹೆಸರನ್ನು ನಮ್ಮ ಪೀಳಿಗೆ ಹೆಚ್ಚಾಗಿ ಕೇಳಿಲ್ಲ ಎಂದರೂ ತಪ್ಪಾಗಲಾರದು. ಇಂದಿನ ಭಾರತೀಯ ಜನತಾ ಪಕ್ಷದ ಮೂಲ ಪಕ್ಷವಾದ ಜನಸಂಘವನ್ನು ಸ್ಥಾಪಿಸಿದ ಮಹಾ ನಾಯಕ ದೀನ್ ದಯಾಳ್ ರವರು. ಯಾವುದೋ ರಾಜಕೀಯ ಲಾಭ ಅಥವಾ ವೈಯುಕ್ತಿಕ ಹಿತಾಸಕ್ತಿಗೋಸ್ಕರ ರಾಜಕೀಯ ಪಕ್ಷವನ್ನು ಅವರು ಹುಟ್ಟುಹಾಕಲಿಲ್ಲ. ಬದಲಾಗಿ, ಅವರಲ್ಲಿದ್ದ ಅಧಮ್ಯ ರಾಷ್ಟ್ರಪ್ರೇಮ ಹಾಗೂ ರಾಜಕೀಯ ಸ್ಥಿತ್ಯಂತರಗಳನ್ನು ಸಕಾರಾತ್ಮಕ ದಿಕ್ಕಿಗೆ ತೆಗೆದುಕೊಂಡು ಹೋಗುವ ಇರಾದೆಯಿಂದ ರಾಜಕೀಯ ಪಕ್ಷವನ್ನು ಕಟ್ಟಿದರು. ಇಂದಿನ ಬಹುತೇಕ ರಾಜಕಾರಣಿಗಳಿಗೆ ರಾಜಕಾರಣ ಮಾಡುವುದರಲ್ಲಿ ಕೌಶಲ್ಯವಿದೆಯೇ ಹೊರತು, ರಾಜಕೀಯವನ್ನು ಏಕೆ ಮಾಡಬೇಕು, ಅದರ ಫಲಿತಾಂಶಗಳೇನು ಎನ್ನುವ ಸಮಗ್ರ ಜ್ಞಾನ ಇರುವುದು ಅಪರೂಪ. ಆದರೆ ಇದಕ್ಕೆ ವ್ಯತಿರಿಕ್ತ ಎನ್ನುವಂತೆ, ಬಹಳ ಸ್ಪಷ್ಟವಾಗಿ ಸಂಸ್ಕೃತಿ ಹಾಗೂ ರಾಜಕಾರಣದ ಕುರಿತು ಅಪಾರ ಜ್ಞಾನವನ್ನು ಹೊಂದಿದ್ದ ವ್ಯಕ್ತಿ ಎಂದರೆ ಉಪಾಧ್ಯಾಯರು. ಸಂಸ್ಕೃತಿಯ ಆಳ ಅಗಲಗಳನ್ನು ಅಮೂಲಾಗ್ರವಾಗಿ ಬಲ್ಲಂತಹ ಹಾಗೂ ನಿರ್ಧಿಷ್ಟವಾಗಿ ರಾಜಕೀಯ ವ್ಯವಸ್ಥೆಯ ಉದ್ದೇಶ ಹಾಗೂ ಅದು ತಲುಪಬೇಕಾದ ಗುರಿಗಳನ್ನು ಸ್ಪಷ್ಟೀಕರಿಸಿದ ಮೊದಲ ಭಾರತೀಯ ವ್ಯಕ್ತಿ ಎಂದರೂ ಅತಿಶಯೋಕ್ತಿಯಾಗಲಾರದು. ಈ ಪುಟ್ಟ ಬರವಣಿಗೆಯಲ್ಲಿ ಅವರ ಕೆಲವು ವಿಚಾರಧಾರೆಗಳನ್ನು ಪರಿಚಯಿಸುವ ಮೂಲಕ ನಮ್ಮ ರಾಜಕೀಯ ವ್ಯವಸ್ಥೆಯನ್ನು ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಲಾಗುತ್ತದೆ. ಮತ್ತಷ್ಟು ಓದು »