ಕಾರಂತ ಸಾಹಿತ್ಯ: ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೨)
ದೇವು ಹನೆಹಳ್ಳಿ
ಬಂಡಿಮಠ, ಹನೆಹಳ್ಳಿ ಗ್ರಾಮ,
ಬಾರಕೂರು, ಉಡುಪಿ ತಾಲೂಕು-ಜಿಲ್ಲೆ.
ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೧)
ಬೆಟ್ಟದ ಜೀವ ಕಾದಂಬರಿಯಲ್ಲಿ ಪರಿಸರ ಮನುಷ್ಯನಿಗೆ ಪಂಥಾಹ್ವಾನವನ್ನು ನೀಡುವಂತದ್ದು. ಪರಿಸರಕ್ಕೆ ಶರಣಾಗಿಯೇ ಪರಿಸರದ ಹಲವು ಘಟಕಗಳನ್ನು ಎದುರಿಸಿ ಬದುಕನ್ನು ಕಟ್ಟಿಕೊಳ್ಳುವ ಅನಿವಾರ್ಯ. ಪ್ರಜ್ಞಾಪೂರ್ವಕವಾಗಿ, ಮುಕ್ತ ಮನಸ್ಸಿನಿಂದ ಇದು ಸಾಧ್ಯವಾದರೆ ಬದುಕಿನ ಹಲವು ವಿಸಂಗತಿ-ವಿಕೃತಿಗಳನ್ನು ಸಂಯಮದಿಂದ ಸಹಿಸುವ ಶಕ್ತಿಯನ್ನು, ನಿರ್ವಿಕಾರಚಿತ್ತದಿಂದ ಬದುಕುವ ಸ್ಥೈರ್ಯವನ್ನು ಪಡೆಯುವುದನ್ನು ಕಾಣುತ್ತೇವೆ. ಬೆಟ್ಟದ ಜೀವ ಕಾದಂಬರಿಯಲ್ಲಿ ಪರಿಸರವನ್ನು ಗ್ರಹಿಸುವುದಕ್ಕಿಂತ ವ್ಯತಿರಿಕ್ತವಾಗಿ ಕಾಣುವುದು ಶನೀಶ್ವರನ ನೆರಳಿನಲ್ಲಿ ಕಾದಂಬರಿಯಲ್ಲಿ. ಇಲ್ಲಿನ ಕೆಲವು ಪಾತ್ರಗಳು, ಮುಖ್ಯವಾಗಿ ಕೃಷ್ಣ ಜೋಯಿಸರು, ಪ್ರಕೃತಿ ತಮ್ಮ ಬಯಕೆಯ ನೇರಕ್ಕೆ ಇರಬೇಕೆಂದು ಬಯಸುವವರು. ಭೂಸವೆತ, ಕಳೆ ಮುಂತಾದವುಗಳ ಬಗ್ಗೆ ಅವರ ಜತೆ ಮಾತನಾಡಿದ ನಿರೂಪಕ “ನಮ್ಮ ಯೋಚನೆಯಂತೆ ಲೋಕ ನಡೆಯಬೇಕಾದರೆ ಲೋಕವೆಲ್ಲ ನಮ್ಮ ಅಂಕೆಯಲ್ಲಿ ಇರಬೇಕು ಎಂದ ಹಾಗಾಯ್ತಲ್ಲವೇ?” ಎಂದು ಕೇಳುತ್ತಾನೆ. ಮತ್ತಷ್ಟು ಓದು