ರಾಜೀವ್ ಮಲ್ಹೋತ್ರ ಸಂವಾದ : ಭಾಗ ೨
ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರ
ಕನ್ನಡ ಅನುವಾದ : ಶ್ರೀ ಹುಲ್ಲುಮನೆ ಶ್ರೀಧರ
ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1
ಉದಾರವಾದಿಗಳು ಮತ್ತು ಕ್ರಿಶ್ಚಿಯನ್ ಮತಕ್ಕೆ ಸೇರಿಸಿಕೊಳ್ಳುವ/ ಪ್ರಚಾರಕರ (ಇವಾನ್ಜಲಿಸ್ಟ್ಗಳ) ನಡುವೆ ಹೊಂದಾಣಿಕೆ:
ಬ್ರಿಟಿಷ್ ಸಂಸತ್ತಿನಲ್ಲಿ ಎಡ್ವಿನ್ ಬೆರ್ಕ್ ಸ್ಪಷ್ಟವಾಗಿ ಹೇಳಿದ್ದಿದೆ- ’ಓಕ್ ಮರಗಳನ್ನು ಥೇಮ್ಸ್ ನದಿಯ ದಂಡೆಯಿಂದ ತೆಗೆದುಕೊಂಡು ಹೋಗಿ ಗಂಗಾನದಿಯ ದಂಡೆಯುದ್ದಕ್ಕೂ ನೆಡಲಾಗದು’ ಎಂದು. ಭಾರತೀಯ ಸಂಸ್ಥಾನಗಳು ಭಾರತೀಯರ ಅಗತ್ಯಗಳನ್ನು ಪೂರೈಸುತ್ತಿದ್ದವು. ಆ ಸಂಸ್ಥೆಗಳಲ್ಲಿ ಪುನರುಜ್ಜೀವನದ ಅಗತ್ಯವಿತ್ತೇ ವಿನಃ ಅವುಗಳನ್ನು ಬದಲಿಸುವ ಅಗತ್ಯವಿರಲಿಲ್ಲ. ಆಂಗ್ಲರಲ್ಲಿ, ಸಂಸತ್ತಿನಲ್ಲಿ ಹಾಗೂ ಭಾರತದ ಆಂಗ್ಲ ಅಧಿಕಾರಿಗಳಲ್ಲಿ ಒಂದು ಬಲವಾದ ಗುಂಪಿದ್ದು ಅವರು ಭಾರತೀಯ ಸಂಸ್ಥಾನಗಳನ್ನು ಮರುನಿರ್ಮಾಣ ಮಾಡಲಿಚ್ಛಿಸಿದ್ದರು. ನಮ್ಮ ಕುತೂಹಲಕ್ಕೆ ’ಸಂಪ್ರದಾಯವಾದಿಗಳು’ (ಕನ್ಸರ್ವೇಟಿವ್ಗಳು) ಗಂಭೀರತೆಯಿಂದ ಭಾರತೀಯ ಸಂಸ್ಥಾನಗಳನ್ನು ಹೇಗಿದ್ದವೋ ಹಾಗೆಯೇ ಬಿಡಬೇಕೆನ್ನುತ್ತಿದ್ದರು. ’ಆಂಗ್ಲ ಉದಾರವಾದಿಗಳು’ ಭಾರತದ ಸಂಸ್ಥಾನಗಳನ್ನು ಗೊಂದಲಮಯವಾಗಿಸಲು/ ಅವ್ಯವಸ್ಥಿತಗೊಳಿಸಲು ಇಚ್ಛಿಸಿದ್ದರು. ಮತ್ತಷ್ಟು ಓದು