ವಿಷಯದ ವಿವರಗಳಿಗೆ ದಾಟಿರಿ

Archive for

1
ಡಿಸೆ

ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಯಾರು ಗೊತ್ತೇ CM ಸಿದ್ದರಾಮಯ್ಯನವರೇ?

– ರಾಕೇಶ್ ಶೆಟ್ಟಿ

ಒಂದು ಸುಳ್ಳನ್ನು ಸತ್ಯವಾಗಿಸಲು ಏನು ಮಾಡಬೇಕು? ಮತ್ತೊಂದು,ಮಗದೊಂದು ಸುಳ್ಳಿನ ಸೌಧವನ್ನು ಕಟ್ಟುತ್ತಾ ಹೋಗಬೇಕು. ರಾಜ್ಯದ ತುಘಲಕ್ ದರ್ಬಾರಿನಲ್ಲಿ ನಡೆಯುತ್ತಿರೋದು ಅದೇ. ಶಾಂತವಾಗಿದ್ದ ಕರ್ನಾಟಕದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಲು ಕಾಂಗ್ರೆಸ್ ಮೊದಲು ಕೈಹಾಕಿದ್ದು ಟಿಪ್ಪು ಯುನಿವರ್ಸಿಟಿ ನಿರ್ಮಾಣದ ಯೋಜನೆಯ ಮೂಲಕ. ತೀವ್ರ ಪ್ರತಿರೋಧ ಬಂದ ನಂತರ ಅದು ಮೂಲೆ ಸೇರಿತ್ತು. ಸುಲ್ತಾನ್ ಸಿದ್ಧರಾಮಯ್ಯನವರು ಅಧಿಕಾರಕ್ಕೆ ಬಂದ ನಂತರ, ಮತ್ತೆ ಟಿಪ್ಪುವಿನ ಘೋರಿ ತೆಗೆಯಲು ನಿರ್ಧರಿಸಿದರು.ಬದುಕಿದ್ದಾಗಲೇ ಲಕ್ಷಾಂತರ ಜನರ ಮಾರಣಹೋಮ,ಮತಾಂತರ ಮಾಡಿದವನ ಆತ್ಮ ಶತಮಾನಗಳ ನಂತರ ಹೊರ ಬಂದರೆ ಸುಮ್ಮನಿದ್ದೀತೆ? ಮಡಿಕೇರಿಯಲ್ಲಿ ಟಿಪ್ಪು ಆಧುನಿಕ ಸೈನಿಕರಿಗೆ ಕುಟ್ಟಪ್ಪ ಬಲಿಯಾದರು. ಕಳೆದ ಮೂರು ವರ್ಷಗಳಿಂದ ನವೆಂಬರ್ ತಿಂಗಳು ಹತ್ತಿರ ಬಂದರೆ, ಕರ್ನಾಟಕದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗುತ್ತಿದೆ. ಟಿಪ್ಪು ಸುಲ್ತಾನನಿಂದ ಹಿಡಿದು ಸಿದ್ಧರಾಮಯ್ಯನವರವರೆಗೂ ಈ ಭೀತಿಯ ವಾತಾವರಣ ಸೃಷ್ಟಿ ನಿಂತಿಲ್ಲ.ಸಜ್ಜನರ ಜಯಂತಿ ಮಾಡುತ್ತೇವೆಂದರೆ ಈ ನೆಲದ ಜನ ಆತನ ಜಾತಿ,ಧರ್ಮದ ಲೆಕ್ಕವಿಡದೆ ಸಂಭ್ರಮಿಸುತ್ತಾರೆ. ಸಂತ ಶಿಶುನಾಳ ಶರೀಫಜ್ಜ ನಮ್ಮ ಪಾಲಿಗೆ “ಸಂತ’ನಾಗಿಯೇ ಮುಖ್ಯವಾಗುತ್ತಾನೆಯೇ ಹೊರತು, ಷರೀಫ್ ಅನ್ನುವ ಕಾರಣಕ್ಕಲ್ಲ. ಇಂತಹ ಸೌಹಾರ್ದಕ್ಕೆ ಕೊಳ್ಳಿಯಿಟ್ಟವರು ಸಿದ್ಧರಾಮಯ್ಯನವರು. ಟಿಪ್ಪುವೆಂಬ ಮತಾಂಧನನ್ನು, ಸತ್ಯಸಂಧ,ಜನಾನುರಾಗಿ ಅಂತೆಲ್ಲ ಬಿಂಬಿಸಲು ಹೊರಟು ನಿಂತರು. ಉಂಡ ಮನೆಗೆ ದ್ರೋಹ ಬಗೆಯುವ ಬುದ್ಧಿಜೀವಿಗಳ ಸುಳ್ಳು ಇತಿಹಾಸದ ನಡುವೆ ಅವಿತುಕೊಂಡು, ಟಿಪ್ಪು ಸುಲ್ತಾನ ದೇಶದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಎಂದು ಖುದ್ಧು ಕರ್ನಾಟಕ ಸರ್ಕಾರವೇ ನಾಚಿಕೆ ಬಿಟ್ಟು ಸುಳ್ಳು ಜಾಹಿರಾತು ನೀಡಿತು. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅದನ್ನೇ ಟ್ವೀಟು ಮಾಡಿದರು.

ಹೌದೇ? ನಿಜವಾಗಿಯೂ ಟಿಪ್ಪು ಸುಲ್ತಾನ ಮೊದಲ ಸ್ವಾತಂತ್ರ್ಯ ಹೋರಾಟಗಾರನೇ? ಆತನೊಬ್ಬ ರಾಜನಲ್ಲವೇ? ರಾಜನೊಬ್ಬ ಪರಕೀಯರೊಂದಿಗೆ ಹೋರಾಡಿದ್ದನ್ನೇ ಸ್ವಾತಂತ್ರ್ಯ ಸಂಗ್ರಾಮವೆನ್ನುವುದಾದರೇ, ಈ ದೇಶದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿಯಂತ ಇದ್ದರೆ ಅದು ಉಳ್ಳಾಲದ ರಾಣಿ ಅಬ್ಬಕ್ಕ ಮಾತ್ರವೇ.ರಾಣಿ ಅಬ್ಬಕ್ಕ ಪೋರ್ಚುಗೀಸರೊಂದಿಗೆ ಯುದ್ಧಕ್ಕಿಳಿದಾಗ, ಟಿಪ್ಪು ಸುಲ್ತಾನ ಬಿಡಿ ಅವರಪ್ಪ ಹೈದರನೇ ಹುಟ್ಟಿರಲಿಲ್ಲ.ಟಿಪ್ಪುವನ್ನು ಹಾಡಿ ಹೊಗಳಿದರೆ ಮುಸ್ಲಿಮರ ವೋಟು ಬುಟ್ಟಿಯಲ್ಲಿ ಬಂದು ಬೀಳುತ್ತದೆ. ರಾಣಿ ಅಬ್ಬಕ್ಕ ಮತ್ತವರ ವೀರ ಮೊಗವೀರ ಪಡೆಯ ಕತೆ ಹೇಳಿದರೆ ಸಿದ್ಧರಾಮಯ್ಯನವರಿಗೇನು ಲಾಭ ಹೇಳಿ? ಹಾಗಾಗಿಯೇ  ಖುದ್ದು ಮುಖ್ಯಮಂತ್ರಿ ಮತ್ತವರ ರಾಜ್ಯ ಸರ್ಕಾರ ಇತಿಹಾಸಕ್ಕೆ ಅಪಚಾರವೆಸಗಿರುವುದು.ಟಿಪ್ಪು ಸುಲ್ತಾನ, ಸುಲ್ತಾನ್ ಸಿದ್ಧರಾಮಯ್ಯನವರ ಬಗ್ಗೆ ಬರೆದು ಸಮಯ ವ್ಯರ್ಥ ಮಾಡುವ ಬದಲು, ಉಳ್ಳಾಲದ ವೀರರಾಣಿ ಅಬ್ಬಕ್ಕನ ಬಗ್ಗೆ ಹೇಳುತ್ತೇನೆ. ಆ ನಂತರ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಪಟ್ಟ ಯಾರಿಗೆ ದಕ್ಕಬೇಕೆನ್ನುವುದನ್ನು ಓದುಗರೇ ನಿರ್ಧರಿಸಲಿ…

ಸ್ವಾತಂತ್ರ್ಯದ ದೀಪ ಹಚ್ಚಿದ ಮೊದಲ ಭಾರತದ ನಾರಿಯ ನೆನೆಯುತ್ತ… ಮತ್ತಷ್ಟು ಓದು »