ಮಾರ್ಕ್ಸ್ ವಾದ ಮತ್ತು ನೆಹರೂವಾದ ಗಾಂಧಿವಾದವನ್ನು ಕೊಂದಿತೇ?
ಡಾ|| ಬಿ.ವಿ ವಸಂತ ಕುಮಾರ್
ಕನ್ನಡ ಪ್ರಾಧ್ಯಾಪಕರು
ಮಹಾರಾಣಿ ಮಹಿಳಾ ಕಾಲೇಜು
ಮೈಸೂರು
ಇಂದು ಕೇರಳ ಹಾಗೂ ಕರ್ನಾಟಕದಲ್ಲಿ ಕ್ರಮವಾಗಿ ಮಾರ್ಕ್ಸ್ ವಾದಿ ಹಾಗೂ ನೆಹರೂವಾದೀ ಪ್ರಭುತ್ವಗಳು ಆಳುತ್ತಿವೆ. ಈ ಎರಡೂ ರಾಜ್ಯಗಳಲ್ಲಿ ಸೈದ್ಧಾಂತಿಕವಾದ ಕಾರಣಗಳಿಗಾಗಿ ಹಿಂದೂ ಕಾರ್ಯಕರ್ತರ ಕೊಲೆಗಳು ಆಗುತ್ತಿವೆ ಎಂಬ ಚರ್ಚೆಗಳು ನಡೆಯುತ್ತಿವೆ. ಇದರೊಟ್ಟಿಗೆ ಕೇರಳ ಹಾಗೂ ಕರ್ನಾಟಕದ ಪಿ.ಎಫ್.ಐ ಸಂಘಟನೆಯು ಮುಸ್ಲಿಂ ಮೂಲಭೂತವಾದಿ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ಸಂಗವಿರುವ ಸಂಘಟನೆಗಳ ಜೊತೆಗೆ ಹೆಸರು ತುಳುಕು ಹಾಕಿಕೊಂಡಿದೆ. ಈ ನಡುವೆ ದಕ್ಷಿಣ ಭಾರತದ ಹೆಸರಾಂತ ನಟ ಕಮಲಹಾಸನ್ ಹಿಂದೂ ಭಯೋತ್ಫಾದನೆಯ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಅದನ್ನು ಮತ್ತೊಬ್ಬ ಕನ್ನಡದ ನಟ ಪ್ರಕಾಶ ರೈ ಸಮರ್ಥಿಸಿದ್ದಾರೆ. ಈ ಎಲ್ಲಾ ವಿದ್ಯಮಾನಗಳನ್ನು ಬಿಜೆಪಿಯ ರಾಜ್ಯ ನಾಯಕರು ಹಾಗೂ ರಾಷ್ಟ್ರ ನಾಯಕರು ಖಂಡಿಸಿ ಹೋರಾಟಕ್ಕಿಳಿದಿದ್ದಾರೆ. ಮತ್ತಷ್ಟು ಓದು