ನಂಬುಗೆಯೆಂಬ ಪಾತ್ರೆಯ ಒಳಗೆ ಸುಳ್ಳುಸುದ್ಧಿಗಳ ಜಾತ್ರೆ!
– ಸುಜಿತ್ ಕುಮಾರ್
ಇಲ್ಲಿ ಸರ್ವವೂ ಇಂಟರ್ನೆಟ್ಮಯ. ಇಲ್ಲಿ ಕ್ಷಣಮಾತ್ರದಲ್ಲಿ ಕಣ್ಣೊಡೆದು ಕೋಟಿ ಜನರ ಕನಸಿನ ರಾಣಿಯಾಗಲೂಬಹುದು ಅಂತೆಯೇ ಸುಳ್ಳಿನ ಕಂತೆಯಿಂದ ಕಟ್ಟಿರುವ ರಾಜಪಟ್ಟದ ಉತ್ತುಂಗದಿಂದ ಕಣ್ಮುಚ್ಚಿ ಬಿಡುವಷ್ಟರಲ್ಲಿ ನೆಲದ ಮೇಲೆ ವಿವಸ್ತ್ರನಾಗಿ ಬೀಳಲೂಬಹುದು. ಇಲ್ಲಿ ಸತ್ಯ, ಮಿಥ್ಯ, ಸರಿ, ತಪ್ಪು, ಅಂತೆ, ಕಂತೆ ಎಂಬೆಲ್ಲಾ ಗ್ರಹಿಕೆಗಳು ನಿಂತಿರುವುದು ಕೇವಲ ಒಂದು ಮಾತ್ರದ ಅಂಶದ ಮೇಲೆ. ಅದು ಪ್ರಸ್ತುತ ಇಂಟರ್ನೆಟ್ ಬಳಕೆದಾರನ ಬಳಿಯಿರುವ ಏಕೈಕ ಮಾಪನ. ಹೆಸರು ನಂಬುಗೆ. ಇಂದಿನ ಸಾಮಾಜಿಕ ಜಾಲತಾಣಗಳ ಸರೋವರದಲ್ಲಿ ಕಾಣಸಿಗುವ ಪ್ರತಿಯೊಂದು ಸುದ್ದಿಯನ್ನು ಹಿಂದೂ-ಮುಂದೂ ನೋಡದೆ ಅವುಗಳ ಅಳೆತ್ತರವನ್ನೂ ಅರಿಯದೆ ಕಾದ ಎಣ್ಣೆಗೆ ಬಿದ್ದ ಒಣ ಹಪ್ಪಳದಂತೆ ಹಿರಿ ಹಿರಿ ಹಿಗ್ಗುವ ಜನಕೋಟಿಯ ವಿಚಾರಗ್ರಹಿಕೆ ತಾವು ಕಂಡ ಸುದ್ದಿಯನ್ನು ಒರೆಹಚ್ಚಿ ಪರೀಕ್ಷಿಸಿಕೊಳ್ಳುವುದು ಈ ನಂಬುಗೆ ಎಂಬ ಸೂಕ್ಷ್ಮ ಎಳೆಯ ಮೇಲೆಯೇ. ಮತ್ತಷ್ಟು ಓದು
30 ಇಯರ್ಸ್ ಆಫ್ 1987.
– ಸುಜಿತ್ ಕುಮಾರ್
ಕಾಲದ ಗಾಲಿ ಎಂದಿಗಾದರೂ ನಿಲ್ಲಬಹುದೇ? ಎಂಬ ಮೂರ್ಖ ಪ್ರಶ್ನೆಯನ್ನು ಮಾನವ ಅದೆಷ್ಟು ಬಾರಿ ತನ್ನನ್ನೇ ತಾನು ಕೇಳಿದ್ದಾನೆಯೋ. ಅದೆಷ್ಟು ಬಾರಿ ಅದು ನಿಂತಿದೆ ಎಂದೇ ಭಾವಿಸಿ ಮೋಹಪರವಶನಾಗಿ, ಅಸೂಹಿಯಾಗಿ, ಸಕಲವೂ ನನ್ನದೇ ನಾನೇ ಒಡೆಯ ಎಂಬಂತೆ ಅದೆಷ್ಟು ಬಾರಿ ವರ್ತಿಸಿ ಕುಣಿದು ಮತ್ತೆ ಯಥಾ ಪ್ರಕಾರ ಅದೇ ಕಾಲದ ಗಾಲಿಯೊಳಗೆಯೇ ಮರೆಯಾಗಿದ್ದಾನೆಯೋ? ಅಂದಿನಿಂದ ಇಂದಿನವರೆಗೂ ಮಾನವ ಮೂರ್ಖನೇ. ಗಳಿಕೊಂಡಿರುವ ಒಂದೆರೆಡು ದಿನಗಳನ್ನು ಹಾಯಾಗಿ ಬದುಕಿ ನಕ್ಕು ನಲಿದು ಮರೆಯಾಗುವ ಬದಲು ಇಲ್ಲ ಸಲ್ಲದ ತಾಪತ್ರಯವನ್ನೆಲ್ಲ ತನ್ನ ಮೇಲೆರೆದುಕೊಂಡು ಸುಖಾಸುಮ್ಮನೆ ಗೋಳಾಡಿ ಗೊಣಗಾಡಿ ಅತ್ತು ಒದ್ದಾಡಿ ಮರೆಯಾಗುತ್ತಾ ಬಂದಿದ್ದಾನೆ. ಅಷ್ಟೆಲ್ಲ ಸರ್ಕಸ್ ಗಳನ್ನೂ ಮಾಡಿಯೂ ಆತ ಕಾಲದ ಗಾಲಿಯನ್ನು ತಡೆದು ನಿಲ್ಲಿಸಿದನೇ? ನಿಲ್ಲಿಸಬಲ್ಲನೆ? ಮತ್ತಷ್ಟು ಓದು
ಕರ್ನಾಟಕ ಸ್ವಾಭಿಮಾನವನ್ನು ಬಹಮನಿಗಳಿಗೆ ಒತ್ತೆಯಿಡಲು ಹೊರಟಿದ್ದ ಕಾಂಗ್ರೆಸ್
– ರಾಕೇಶ್ ಶೆಟ್ಟಿ
“ಅದೋ ಅದೋ ವಿಜಯನಗರದ ಸ್ಥಾಪನೆ,ವಿಜಯನಗರದ ಏಳಿಗೆ,ವಿಜಯನಗರದ ವೈಭವ. ಹಾ! ವಿಜಯನಗರದ ನಾಶ…” ಎಂದು ಕನ್ನಡ ರಾಷ್ಟ್ರವೀರ ಎಚ್ಚಮನಾಯಕನ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿ ಡಾ.ರಾಜ್ ಕುಮಾರ್ ಅವರು ಹೇಳುವಾಗ, ಕರ್ನಾಟಕ ಸ್ವಾಭಿಮಾನಕ್ಕಾಗಿ ಮಿಡಿಯುವ ಪ್ರತಿ ಕನ್ನಡಿಗನ ಮನದಲ್ಲೂ ತೀವ್ರ ವೇದನೆ,ಆಕ್ರೋಶದ ಅನುಭವವಾಗುತ್ತದೆ. ಆಗಲೇಬೇಕು ಕೂಡ.ಆದರೆ ಈ ಮಾತು ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಕನ್ನಡಿಗರಿಗೆ ಅನ್ವಯವಾಗುವುದಿಲ್ಲ. ಕರ್ನಾಟಕ ಸ್ವಾಭಿಮಾನವನ್ನು ವೋಟ್ ಬ್ಯಾಕಿಂಗೆ ಅಡವಿಟ್ಟ ಕಾಂಗ್ರೆಸ್ ಪಕ್ಷಕ್ಕೆ ವಿಜಯನಗರ ಸಾಮ್ರಾಜ್ಯ ನೆನಪಾಗಲಿಲ್ಲ,ಅವರಿಗೆ ನೆನಪಾಗಿದ್ದು ಕರ್ನಾಟಕದ ಹೆಮ್ಮೆಯ ಸಾಮ್ರಾಜ್ಯವನ್ನು ನಾಮಾವಶೇಷ ಮಾಡಿದ ಬಹಮನಿ ಸುಲ್ತಾನರದ್ದು.ಉತ್ತರದಲ್ಲಿ ಮಹಮ್ಮದ್ ಬಿನ್ ತುಘಲಕನ ಕಾಲದಲ್ಲಿ ಹುಟ್ಟಿಕೊಂಡ ಬಹಮನಿ ಸುಲ್ತಾನರನ್ನು ದಕ್ಷಿಣದ ತುಘಲಕ್ ಸರ್ಕಾರ ನೆನಪಿಸಿಕೊಂಡಿದ್ದು ಕಾಕತಾಳೀಯವೋ,ಪುನರ್ಜನ್ಮದ ನೆನಪೋ ಗೊತ್ತಿಲ್ಲ.ಆದರೆ ಇಂತಹ ದರಿದ್ರ ಸರ್ಕಾರವನ್ನು ಸಹಿಸಿಕೊಳ್ಳಬೇಕಾದ ಕರ್ಮ ನಮ್ಮದು.
ಹೊರದೇಶದ ಆಕ್ರಮಣಕಾರರ ಅದರಲ್ಲೂ ಮುಖ್ಯವಾಗಿ ಇಸ್ಲಾಮ್ ದಾಳಿಕೋರರ ಬರ್ಬರತೆ,ಕ್ರೌರ್ಯವೆಂತದ್ದು ಎನ್ನುವುದನ್ನು ಉತ್ತರ ಭಾರತ ಶತಮಾನಗಳ ಕಾಲ ಅನುಭವಿಸಿದೆ. ಈ ವಿಷಯದಲ್ಲಿ ದಕ್ಷಿಣ ಭಾರತದ ಅದೃಷ್ಟ ಚೆನ್ನಾಗಿಯೇ ಇತ್ತು.ಬಹುಶಃ ದಕ್ಷಿಣದ ರಾಜರು ಇಸ್ಲಾಮಿ ದಾಳಿಕೋರರ ಭಯ ನಮಗಿಲ್ಲ ಎಂಬ ಭ್ರಮೆಯಲ್ಲಿಯೇ ಬದುಕುತ್ತಿದ್ದರೋ ಏನೋ,ಆದರೆ ಅದು ಅಲ್ಲಾವುದ್ದೀನ್ ಖಿಲ್ಜಿಯ ಕಾಲದವರೆಗೂ ಮಾತ್ರವೇ.ಖಿಲ್ಜಿಯ ದಂಡನಾಯಕ ಮತಾಂತರಿ ಮಲ್ಲಿಕಾಫರ್, ಹೊಯ್ಸಳರ ರಾಜಧಾನಿ ದ್ವಾರಸಮುದ್ರದ ಮೇಲೆ ದಾಳಿಗೆ ಮುಹೂರ್ತವಿಟ್ಟ.ಆ ಸಂಧರ್ಭದಲ್ಲಿ ಹೊಯ್ಸಳ ಮಹಾರಾಜ ಮುಮ್ಮಡಿ ಬಲ್ಲಾಳ ವೀರ ತಮಿಳುನಾಡಿನ ತಿರುವಣ್ಣಾಮಲೈನಲ್ಲಿದ್ದ. ಮಲ್ಲಿಕಾಫರನ ಸ್ಥಾನದಲ್ಲಿ ವೀರ ಸೇನಾನಿಯಿದ್ದಿದ್ದರೇ, ಬಲ್ಲಾಳನು ಇದ್ದಾಗಲೇ ರಾಜಧಾನಿಗೆ ಮುತ್ತಿಗೆ ಹಾಕುವ ಧೈರ್ಯ ತೋರುತ್ತಿದ್ದನೋ ಏನೋ,ಆದರೆ ಎಷ್ಟಾದರೂ ಮತಾಂಧ ದಾಳಿಕೋರನಲ್ಲವೇ ಪೃಥ್ವಿರಾಜ ಚೌಹಾಣನ ಕಾಲದಿಂದಲೂ ಇವರು ಗೆದ್ದುಕೊಂಡು ಬಂದಿದ್ದು ಕಪಟದಿಂದಲೇ.ಮಲ್ಲಿಕಾಫರನ ಜಿಹಾದಿ ಸೈನ್ಯ ಸತತ ೧೩ ದಿನಗಳ ಕಾಲ ಹೊಯ್ಸಳರ ಭವ್ಯ ರಾಜಧಾನಿಯನ್ನು ನಾಶಮಾಡಿ ದ್ವಾರಸಮುದ್ರವನ್ನು, “ಹಾಳಾದ ಬೀಡು” ಎನ್ನುವಂತೆ ಮಾಡಿತು,ಜನರ ಬಾಯಿಯಲ್ಲಿ “ಹಳೇಬೀಡು” ಆಗಿ ಹೋಯಿತು. ಈ ವಿನಾಶವೂ ಮುಂಬರಲಿರುವ ಭವ್ಯ ಸಾಮ್ರಾಜ್ಯದ ಮುನ್ನುಡಿಯೇ ಆಗಿ ಹೋಯಿತು.ಹಾಗೊಂದು ಮುನ್ನುಡಿ ಬರೆಯಲು ಹೊರಟ ಹೊಯ್ಸಳ ದೊರೆ ಮುಮ್ಮಡಿ ಬಲ್ಲಾಳ ವೀರನಿಗೆ ಆಗ ಇನ್ನೂ ೮೨ರ ವಯಸ್ಸು ಅಷ್ಟೇ!
ಮರಾಠ ನಾಯಕನಿಗೊಂದು ನಮನ
– ಪಲ್ಲವಿ ಭಟ್, ಬೆಂಗಳೂರು
ಕಳೆದ ವರುಷ ಚಲನಚಿತ್ರವೊಂದು ಭಾರತದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿ ಬಿಟ್ಟಿತು. “ಬಾಹುಬಲಿ” ಎನ್ನುವ ಆ ಚಿತ್ರವನ್ನು ನೋಡದವರ ಸಂಖ್ಯೆಯೇ ವಿರಳವೆನ್ನಬಹುದು. ರಾಜಮೌಳಿಯವರ ಕಲ್ಪನಾ ಶಕ್ತಿ, ಕಲಾವಿದರ ನಟನಾ ಚಾತುರ್ಯ, ಹಾಗೂ ಗ್ರಾಫಿಕ್ಸ್ ನ ವಿಸ್ಮಯಗಳಿಂದಾಗಿ ಈ ಚಿತ್ರವು ಭಾರತದ ಅತ್ಯುತ್ತಮ ಚಿತ್ರಗಳಲ್ಲಿ ಒಂದಾಗಿ ಮೂಡಿದೆ.
ನಾನು ಆ ಚಿತ್ರವನ್ನು ನೋಡಿದ್ದೆ. ನೋಡಿ ಒಂದಷ್ಟು ವಾರಗಳು ಕಳೆದ ಮೇಲೂ ಅದೇನೋ ನನ್ನನ್ನು ಕಾಡುವಂತಿತ್ತು. ಮರೆತು ಹೋಗಿರುವ ಏನನ್ನೋ ನೆನಪಿಸುವಂತಿತ್ತು. ರಾಜನ ಗಾಂಭೀರ್ಯ, ನ್ಯಾಯ ,ನಿಷ್ಠೆಗಳ ಬಗ್ಗೆ ಅದೆಲ್ಲೋ ಓದಿದ ನೆನಪು. ಮತ್ತೆ ಮತ್ತೆ ಕೆದಕಿ ನೋಡಿದರೆ ನೆನಪಿಗೆ ಬಂದದ್ದು ಒಂದು ಪುಟ್ಟ ಪುಸ್ತಕ. ಭಾರತ-ಭಾರತಿಯವರ ಪ್ರಕಾಶನದಲ್ಲಿ ಹೊರ ಬಂದಿದ್ದ “ಶಿವಾಜಿ” ಎನ್ನುವ ಆ ಪುಸ್ತಕ ಅಪ್ಪನ ಶೆಲ್ಫ್ ನಲ್ಲಿ ಇನ್ನೂ ಇರಬಹುದು. ಓದುವ ಹವ್ಯಾಸವನ್ನು ಬೆಳೆಸಿಕೊ ಎಂದು ಯಾರು ಯಾವಾಗಲೇ ಗೊಣಗಲಿ, ನಾನು ಪಟ್ಟಂಥ ಇದೇ ಪುಸ್ತಕವನ್ನು ಕೈಗೆತ್ತಿಕೊಳ್ಳುತಿದ್ದೆ. ಸಣ್ಣ ಪುಸ್ತಕವಾಗಿದ್ದರಿಂದಲೋ, ಅಥವಾ ಶಿವಾಜಿ ಅನ್ನುವ ಮಹಾರಾಜರು ತುಂಬಾ ಇಷ್ಟವಾಗಿದ್ದರಿಂದಲೋ,ನನಗೆ ತಿಳಿದಿಲ್ಲ.
ಬಿಡುಗಡೆಯಾಗಿದ್ದು ಬಹಮನಿ ಟೀಸರ್, ಪಿಕ್ಚರ್ ಅಭೀ ಬಾಕೀ ಹೈ!

ಹೌದು. ಸಿಎಂ ಸಿದ್ದರಾಮಯ್ಯನವರು ಎರಡನೇ ದೇವರಾಜ ಅರಸು…!
– ರಾಕೇಶ್ ಶೆಟ್ಟಿ
‘Law and order are the medicine of the politic body and when the politic body gets sick, medicine must be administered’ – ಕಾನೂನು ಸುವ್ಯವಸ್ಥೆಯು ರಾಜಕೀಯ ವ್ಯವಸ್ಥೆಗೆ ಔಷಧವಿದ್ದಂತೆ ಮತ್ತು ರಾಜಕೀಯ ವ್ಯವಸ್ಥೆಯೇ ಅನಾರೋಗ್ಯಕ್ಕೆ ಒಳಗಾದಾಗ, ಔಷಧವನ್ನು ನೀಡಲೇಬೇಕು” ಕಾನೂನು ಸುವ್ಯವಸ್ಥೆಯ ಕುರಿತು ಹೀಗೆ ಹೇಳುತ್ತಾರೆ ಡಾ. ಅಂಬೇಡ್ಕರ್. ಕರ್ನಾಟಕದ ಮಟ್ಟಿಗೆ ಸೂಕ್ತವಾದ ಮಾತಿದು. ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಸರ್ಕಾರವೇ ರೋಗಗ್ರಸ್ಥವಾಗಿ ಕುಳಿತಿದೆ. ಅದು ಯಾವ ಪರಿ ಕುಲಗೆಟ್ಟಿದೆಯೆಂದರೆ, ರಾಜಧಾನಿ ಬೆಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯ ಅನತಿದೂರದಲ್ಲೇ ರಾಬರಿಗಳು ನಡೆದಿರುವ ವರದಿಗಳಾಗುತ್ತಿವೆ. ಪೊಲೀಸ್ ಕಚೇರಿಯ ಬಳಿ ಬಿಡಿ, ಖುದ್ದು ಪೊಲೀಸರಿಗೆ ರಕ್ಷಣೆಯಿಲ್ಲದಂತಾಗಿದೆ. ರಸ್ತೆಯಲ್ಲಿ ಕುಡಿದು ಗಲಾಟೆ ಮಾಡುತ್ತಿದ್ದ ಪುಂಡರನ್ನು ಹಿಡಿಯಲು ಹೋದ ಪೊಲೀಸರ ಮೇಲೆಯೇ ರೌಡಿಗಳು ಮಚ್ಚು ಬೀಸುತ್ತಿದ್ದಾರೆ, ಗನ್ ಕಿತ್ತುಕೊಳ್ಳುತ್ತಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿಗೆ ಕಿರುಕುಳ ನೀಡಿದ್ದಾರೆ, ಪೊಲೀಸರ ಸ್ಥಿತಿಯೇ ಹೀಗಾದರೆ ಇನ್ನು ಜನಸಾಮಾನ್ಯರ ಗತಿಯೇನು? ಮತ್ತಷ್ಟು ಓದು
ನಂಬಿಕೆ
– ಪ್ರಶಾಂತ್ ಭಟ್
‘ಇದು ಹೀಗಾಗುತ್ತದೆ ಅಂತ ನನಗೆ ಗೊತ್ತಿತ್ತು’ ಪಕ್ಕದ ಸೀಟಿನವನ ಮಾತು ಕೇಳಿ ಮೊಬೈಲಿಂದ ತಲೆ ಎತ್ತಿ ನೋಡಿದಾಗ ಬಸ್ಸು ನಿಂತದ್ದು ಅರಿವಿಗೆ ಬಂತು. ಇವ ಯಾರು ಮಾರಾಯ, ಬಸ್ಸು ಹೊರಟಾಗಿಂದ ತನ್ನೊಳಗೇ ಏನೋ ಗುನುಗುತ್ತಾ ಕೈ ಸನ್ನೆ ಮಾಡ್ತಾ ಕಿರಿಕಿರಿ ಉಂಟುಮಾಡಿದ್ದ. ನಮ್ಮದೇ ಸಾವಿರ ಇರಬೇಕಾದರೆ ಈ ತರಹದ ಆಸಾಮಿ ಸಿಕ್ಕರೆ ಪ್ರಯಾಣವೂ ಪ್ರಯಾಸವೇ! ಅವಳ ಮೆಸೇಜು ಬಂತಾ ಅಂತ ನೋಡುವಾ ಅಂದರೆ ಹಾಳಾದ ನೆಟ್ವರ್ಕ್ ಕೂಡಾ ಇಲ್ಲ. ಅದು ಸರಿ ಈ ಬಸ್ಸು ನಿಂತದ್ದಾದರೂ ಯಾಕೆ? ಓಹ್, ಎದುರೆಲ್ಲ ವಾಹನಗಳ ಸಾಲೇ ಸಾಲು! ಅಲ್ಲದೆ ಈ ಘಾಟಿಯಲ್ಲಿ ಇದೊಂದು ಗೋಳು. ಒಂದು ಗುಡ್ಡ ಕುಸಿದರೆ, ಜೋರು ಮಳೆಗೆ ಮರ ಉರುಳಿಬಿದ್ದರೆ, ನಿದ್ದೆಯ ಮತ್ತಲ್ಲಿ ಯಾವನಾದರು ಟ್ಯಾಂಕರ್ನವ ಮಗುಚಿಕೊಂಡರೆ ಮುಗಿಯಿತು. ಅದರ ನಡುವೆ ಜೀವ ಬಿಟ್ಟು ರಾಂಗ್ ವೇನಲ್ಲಿ ಮುನ್ನುಗ್ಗಿ ಬರುವ ಹುಚ್ಚು ಚಾಲಕರು. ತಾವೂ ಸಿಲುಕಿ ಉಳಿದವರನ್ನೂ ಸಿಕ್ಕಿಸಿ ರಂಪ ರಾದ್ಧಾಂತ. ಓಹ್, ನಂದೂ ಇದೇ ಕತೆಯಲ್ವಾ? ಮತ್ತಷ್ಟು ಓದು
ಅತ್ತ ಮೋದಿ ಭಾಷಣ ಮಾಡುತ್ತಿದ್ದಾಗ ಎಂಜಿನಿಯರಿಂಗ್ ನಲ್ಲಿ ಗೋಲ್ಡ್ ಮೆಡಲಿಸ್ಟ್ ಒಬ್ಬರು ಅರಮನೆ ಗ್ರೌಂಡಲ್ಲಿ ಟ್ರಾಫಿಕ್ ನಿಭಾಯಿಸುತ್ತಿದ್ದರು…!
-ಕೃಷ್ಣ ಕಡೂರು
ಎಲ್ಲೋ ಸಾಗರದಾಚೆಯಿಂದ ಹಾರಿ ಬಂದ ಹಕ್ಕಿಯೊಂದು ಮಲೆನಾಡ ಕಾಡಿನಲ್ಲಿ ಹಿಕ್ಕೆ ಹಾಕಿ ಸುಂದರ ಪುಷ್ಪವನ್ನು ಅರಳಿಸುವ ಗಿಡವಾಗುತ್ತದೆ. ಆ ಹೂವಿನ ಸೌಂದರ್ಯಕ್ಕೆ ಮನಸೋತ ಕವಿ ಮನಸ್ಸೊಂದು ರಸೋತ್ಪತ್ತಿಯ ಕಾವ್ಯವನ್ನು ಸ್ರಷ್ಟಿಸುತ್ತದೆ. ಆ ಕಾವ್ಯರಸ ಜನಮಾನಸದಲ್ಲಿ ಬೇರೂರಿ ಪರಂಪರೆಯನ್ನು ರೂಪಿಸುವಲ್ಲಿಗೂ ವ್ಯಾಪಿಸುತ್ತವೆ. ಆದರೆ ಎಲ್ಲಿನದ್ದೋ ಒಂದು ಹಕ್ಕಿಗೆ ಇವಾವುವೂ ತಿಳಿಯುವುದಿಲ್ಲ. ತಿಳಿಯುವ ಹಂಬಲ, ಮನಸ್ಸು ಮನಸ್ಸು ಮತ್ತು ತಿಳಿದು ಮಾಡುವಂಥಾದ್ದೇನೂ ಆ ಹಕ್ಕಿಗೂ ಇಲ್ಲ.
ಎಲ್ಲೋ ಕಾಡಿನಲ್ಲಿ ತುಂತುರು ಹನಿಯನ್ನು ತಾನು ಹೀರಿಕೊಳ್ಳದೆ ಭೂಮಿಗೆ ಜಾರಿಸುವ ಎಲೆಯೊಂದಕ್ಕೆ, ಈ ಪುಟ್ಟ ಹನಿ ನದಿಯಾಗಿ, ಭೋರ್ಗೆರೆಯುವ ಜಲಪಾತವಾಗಿ, ಅನ್ನದ ಮೂಲವಾಗಿ, ಬೆಳಕಿನ ಮೂಲವಾಗುವುದು ಎಂದು ಆ ಎಲೆಗೂ ಗೊತ್ತಿಲ್ಲ. ಅದು ಗೊತ್ತಿದ್ದು ಆ ಹನಿಯನ್ನು ಭೂಮಿಗಿಳಿಸಿಲ್ಲ.
ಕೆಸರು ನೆಲದಲ್ಲಿ ಒಣಗಿದ ದೇಹವೊಂದು ಉತ್ತು, ಬಿತ್ತಿ, ಕಟಾವು ಮಾಡಿ ಬೆವರನ್ನೇ ಬಸಿಯುತ್ತಿರುವಾಗ ಆತನಿಗೂ ತಾನು ಬೆಳೆದ ತೆನೆ ರಾಜಾಸ್ಥಾನದಲ್ಲಿ ಮೃಷ್ಟಾನ್ನವಾಗುವುದೆಂದು ಆತನೂ ಯೋಚಿಸುವುದಿಲ್ಲ.
ನೀರೇ ಕಾಣದ ಒರಟು ನೆಲದ ಹೆಬ್ಬಂಡೆಯೊಂದು ಗರ್ಭಗುಡಿಯ ಲಿಂಗವಾಗಿ ತಂಪು ತಾಣದಲ್ಲಿರುವೆ ಎಂದು ಸ್ವತಃ ಬಂಡೆಯೂ ಅದನ್ನು ಕಡೆದವರೂ ಯೋಚಿಸುವುದಿಲ್ಲ.
ನಿಷ್ಕಾಮ ಕರ್ಮಕ್ಕೆ ಯೋಚನೆ-ಚಿಂತನೆಗಳ ಹಂಗಿಲ್ಲ. ಅವುಗಳನ್ನು ಕಟ್ಟಿಕೊಂಡು ಅವು ಹುಟ್ಟುವುದೂ ಇಲ್ಲ. ಅಷ್ಟೇ ಏಕೆ ಯಾವ ಮಣ್ಣಿಗೂ ತಾನು ಮುಂದೊಂದು ದಿನ ಕಾಲಿಂದ ತುಳಿಸಿಕೊಳ್ಳುವೆ, ಮಡಕೆಯಾಗುವೆ ಎಂಬ ಕಲ್ಪನೆಯನ್ನೂ ಮಾಡಿರುವುದಿಲ್ಲ. ಆದರೂ ಇವೆಲ್ಲವೂ ಆಗಿರುತ್ತದೆ. ಕಾರಣದ ಹಿಂದೆ ಬಲವಾದ ಕಾರ್ಯವಿರುತ್ತದೆ. ಕಾರ್ಯದ ಹಿಂದೆ ಕಾರಣವೂ ಇರುತ್ತದೆ. ಅದನ್ನೇ ಭಾರತೀಯ ತತ್ತ್ವಶಾಸ್ತ್ರ “ಕಾರ್ಯಕಾರಣ ಸಂಬಂಧ” ಎಂದು ಕರೆಯಿತು. ಸನಾತನದ ಆಚಾರ್ಯರುಗಳೆಲ್ಲವೂ, ವೈದಿಕೇತರ ಮತಗಳೂ ಪ್ರತಿಪಾದಿಸಿದ್ದು ಅದನ್ನೇ. ಲೌಕಿಕಾರ್ಥದಲ್ಲಿ ಹೇಳಬೇಕೆಂದರೆ ಅದು “ಪರೋಕ್ಷ ಯಜ್ಞಫಲ”.
ಇಷ್ಟೆಲ್ಲಾ ಹೇಳಹೊರಟಿರುವುದಕ್ಕೆ ಕಾರಣ ಮೊನ್ನೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಕಂಡ ಒಂದು ದೃಶ್ಯ.
ಮುಂಜಾನೆಯಿಂದನೇ ರಾಜ್ಯದ ಮೂಲೆ ಮೂಲೆಗಳಿಂದ ಅರಮನೆ ಮೈದಾನಕ್ಕೆ ಜನ ಧಾವಿಸುತ್ತಿದ್ದರು. ಹೊತ್ತೇರುತ್ತಿದ್ದಂತೆ ವಾಹನ ದಟ್ಟಣೆ, ಜನರ ಪ್ರವಾಹ ಅತಿಯಾಗುತ್ತಲೇ ಇತ್ತು. ಅರಮನೆ ಮೈದಾನಕ್ಕೆ ಸೇರುವ ರಸ್ತೆಗಳೆಲ್ಲವೂ ಕಿಷ್ಕಿಂಧೆಯಂತಾಗಿ ಧೂಳುಮಯವಾಗಿದ್ದರೂ ಜನರ ಕಣ್ಣು ಆಕಾಶಕ್ಕೆ ನೆಟ್ಟು ಹೆಲಿಕಾಪ್ಟರ್ ಸದ್ದಿಗೆ ನಿರೀಕ್ಷೆ ಮಾಡುತ್ತಿತ್ತು. ಕೆಲವರು ವೇದಿಕೆಯ ಸುತ್ತ ಠಾಳಾಯಿಸುತ್ತಿದ್ದರೆ ಇನ್ನು ಕೆಲವರು ಗರಿಗರಿ ಬಟ್ಟೆ ಧರಿಸಿ ನಾಯಕರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದರು.
ನಾನು ಮೋದಿ ಅಭಿಯಾನಿಯಾಗಿರಬಹುದು, ಆದರೆ ಬಿಜೆಪಿಯಲ್ಲ, ಯಾವ ಪಕ್ಷಕ್ಕೂ ಸಲ್ಲುವವನಲ್ಲ. ಬೆಳಿಗ್ಗೆ ಒಂಭತ್ತು ಗಂಟೆಗೆ ನಾನು ಮೈದಾನ ಪ್ರವೇಶಿಸುತ್ತಿದ್ದಾಗ ಒಬ್ಬ ಮನುಷ್ಯ ಕೆಲವು ಯುವಕರೊಟ್ಟಿಗೆ ರಸ್ತೆಯಲ್ಲಿ ನಿಂತು ಟ್ರಾಫಿಕ್ ದಟ್ಟಣೆಯನ್ನು ನಿಭಾಯಿಸುತ್ತಿದ್ದರು. ಮಧ್ಯೆದಲ್ಲೊಮ್ಮೆ ಎದ್ದು ಬಂದಾಗಲೂ ಆ ಮನುಷ್ಯ ಹಾಗೇ ಇದ್ದರು. ಮತ್ತೆ ಆ ಮನುಷ್ಯ ನೆನಪಾಗಲಿಲ್ಲ.
ಮೋದಿ ಭಾಷಣ ಮುಗಿದ ನಂತರ ಮೈದಾನದಿಂದ ಹೊರಹೊರಟಾಗಲೂ ಅವರು ಅದೇ ತತ್ಮಯತೆಯಿಂದ ರಸ್ತೆ ನಿಭಾಯಿಸುತ್ತಿದ್ದಾಗ ದಂಗಾಗಿಹೋದೆ. ಅವರ ಬಿಳಿ ಬಟ್ಟೆ ಧೂಳುಮಯವಾಗಿತ್ತು. ಬಿಳಿಯಾದ ತಲೆಯಲ್ಲೂ ಧೂಳು ಮೆತ್ತಿಕೊಂಡಿತ್ತು. ಎಲ್ಲೋ ನೋಡಿದ್ದೇನೆ ಎಂದು ಗೆಳೆಯನನ್ನು ಕೇಳಿದಾಗ ಆತ ಇವರೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಎಂದ.
ಬಿಜೆಪಿಯಲ್ಲಿ ರಾಷ್ಟ್ರ ಕಾರ್ಯದರ್ಶಿಗಳೂ ಟ್ರಾಫಿಕ್ ನಿಭಾಯಿಸಬೇಕಾ? ಎಂದು ಕೇಳಿದೆ. ಆತ ನಸುನಕ್ಕು ” ನಾವಲ್ಲಿ ಮೋದಿ ಮಾತಿಗೆ ಚಪ್ಪಾಳೆ ತಟ್ಟುತ್ತಾ, ಘೋಷಣೆ ಕೂಗುತ್ತಿದ್ದೆವಲ್ಲಾ, ಆಗಲೂ ಇವರು ಹೀಗೆಯೇ ಕೈ ಆಡಿಸುತ್ತಾ ಟ್ರಾಫಿಕ್ ಕಂಟ್ರೋಲ್ ಮಾಡುತ್ತಿದ್ದರು. ರ್ಯಾಲಿ ಯಶಸ್ವಿಯಾಗಿರುವುದು ಇಂಥವರಿಂದ” ಎಂದ.ನಾನು ” ಹಾಗಾದರೆ ಇವರಿಗೆ ವೇದಿಕೆ ಯಾಕೆ ಕೊಡಲಿಲ್ಲ?” ಎಂದೆ ” ಹತ್ತಬಹುದು, ಆದರೆ ಇವರು ಹತ್ತುವುದಿಲ್ಲ. ಅವರು ಆರೆಸ್ಸೆಸ್ ನಲ್ಲಿದ್ದವರು” ಎಂದ.
ಪೂರ್ತಿ ಅರ್ಥ ಆಗಲಿಲ್ಲ. ಮತ್ತಷ್ಟು ಗೊಂದಲವಾಯಿತು. ಏಕೆಂದರೆ ವೇದಿಕೆಯಲ್ಲಿ ನಾಯಕರು ಮಾತಾಡುತ್ತಿದ್ದಾಗ ಜನ ಅವರವರ ನಾಯಕರನ್ನು ವೇದಿಕೆಗೆ ಕರೆಯಿರಿ ಎಂದು ಬೊಬ್ಬೆ ಹಾಕುತ್ತಿದ್ದರು. ಇವರು ನೋಡಿದರೆ ಹೀಗೆ! ಅದಕ್ಕೆ ಗೆಳೆಯ – “ದೇಶದ ಎಲ್ಲೋ ಮೂಲೆಯಲ್ಲಿ ಹುಡುಗನೊಬ್ಬ ಆರೆಸ್ಸೆಸ್ ಶಾಖೆಗೆ ಹೋಗುತ್ತಾನೆ. ಕಳೆದ ೯೦ ವರ್ಷಗಳಿಂದಲೂ ಹುಡುಗರು ಕಬಡ್ಡಿ ಆಡುತ್ತಾ ಶಾಖೆಯಲ್ಲಿ ಕಳೆಯುತ್ತಿದ್ದಾರೆ. ಅವರು ಶಾಖೆಗೆ ಹೋದ ಕಾರಣಕ್ಕೆ ಇಂದು ಮೋದಿ ಎಂಬ ಪ್ರಧಾನಿ, ಯೋಗಿ ಎಂಬ ಮುಖ್ಯಮಂತ್ರಿ ದೇಶದಲ್ಲಿದ್ದಾರೆ. ಅದನ್ನು ಮರೆಯದ ಜನ ಹೀಗಿರುತ್ತಾರೆ. ಬಿಜೆಪಿಯಲ್ಲಿ ರಾಜಕಾರಣಕ್ಕಿಂತ ಸಂಘಟನೆಗೆ ಒತ್ತು” ಎಂದು ಹೇಳಿದ.
ಅರ್ಥವಾದರೂ ಅರಗಿಸಿಕೊಳ್ಳಲಾಗಲಿಲ್ಲ. ಏಕೆಂದ್ರೆ ಎಂದೋ ಆರೆಸ್ಸೆಸ್ ಗೆ ಹೋಗುತ್ತಿದ್ದ ಗೆಳೆಯ ಈ ಬಿ.ಎಲ್ ಸಂತೋಷ್ ಇನ್ಸ್ಟ್ರುಮೆಂಟಲ್ ಎಂಜಿನಿಯರಿಂಗ್ ನಲ್ಲಿ ಗೋಲ್ಡ್ ಮೆಡಲಿಸ್ಟ್ ಎಂದಾಗ ಮತ್ತಷ್ಟು ತಲೆಕೆಟ್ಟುಹೋಯಿತು.
ಕನ್ನಡ ಪರ ಹೋರಾಟವೆಂದರೆ ಕಾಂಗ್ರೆಸ್ ಪರ ಹೋರಾಟವೇ?
– ರಾಕೇಶ್ ಶೆಟ್ಟಿ
ಭಾವನಾತ್ಮಕವಾಗಿ ಜನರನ್ನು ಎತ್ತಿಕಟ್ಟುವುದು ರಾಜಕೀಯ ಪಕ್ಷಗಳಿಗೆ ಯಾವತ್ತಿಗೂ ಲಾಭದ ಬಾಬತ್ತು. ಈಗ ಮಹದಾಯಿ ವಿಷಯದಲ್ಲೂ ಆಗುತ್ತಿರುವುದೂ ಅದೇ. ಪ್ರಧಾನಿ ಮೋದಿಯವರ ಬಳಿ, ಗೋವಾ-ಮಹಾರಾಷ್ಟ್ರದ ಜೊತೆಗೆ ಸಂಧಾನದ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯದ ಸರ್ವಪಕ್ಷ ನಿಯೋಗ ಹೋಗಿ ಕೇಳಿಕೊಂಡಾಗ, ಈ ವಿವಾದದ ಇತಿಹಾಸದ ಅರಿವಿದ್ದ ಅವರು, ಮಧ್ಯಸ್ಥಿಕೆ ನಿರಾಕರಿಸಿ ಮೊದಲು ಆಯಾ ರಾಜ್ಯಗಳಲ್ಲಿರುವ ಪಕ್ಷಗಳನ್ನು ಒಪ್ಪಿಸಿ ಎಂದಿದ್ದರು. ನಂತರ ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ, ಗೋವಾದ ಬಿಜೆಪಿ ಸರ್ಕಾರವನ್ನು ಕರ್ನಾಟಕದ ಬಿಜೆಪಿಯವರು ಹಾಗೂ ಗೋವಾದ ವಿರೋಧ ಪಕ್ಷ ಕಾಂಗ್ರೆಸ್ಸನ್ನು ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ಸಿನವರು ಒಪ್ಪಿಸುವ ನಿರ್ಧಾರವಾಗಿತ್ತು. ಮತ್ತಷ್ಟು ಓದು
ಕನ್ನಡ ಪರ ಹೋರಾಟವೆಂದರೆ ಕಾಂಗ್ರೆಸ್ ಪರ ಹೋರಾಟವೇ?
– ರಾಕೇಶ್ ಶೆಟ್ಟಿ
ಭಾವನಾತ್ಮಕವಾಗಿ ಜನರನ್ನು ಎತ್ತಿಕಟ್ಟುವುದು ರಾಜಕೀಯ ಪಕ್ಷಗಳಿಗೆ ಯಾವತ್ತಿಗೂ ಲಾಭದ ಬಾಬತ್ತು. ಈಗ ಮಹದಾಯಿ ವಿಷಯದಲ್ಲೂ ಆಗುತ್ತಿರುವುದೂ ಅದೇ. ರಧಾನಿ ಮೋದಿಯವರ ಬಳಿ,ಗೋವಾ-ಮಹಾರಾಷ್ಟ್ರದ ಜೊತೆಗೆ ಸಂಧಾನದ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯದ ಸರ್ವಪಕ್ಷ ನಿಯೋಗ ಹೋಗಿ ಕೇಳಿಕೊಂಡಾಗ,ಈ ವಿವಾದದ ಇತಿಹಾಸದ ಅರಿವಿದ್ದ ಅವರು,ಮಧ್ಯಸ್ಥಿಕೆ ನಿರಾಕರಿಸಿ ಮೊದಲು ಆಯಾ ರಾಜ್ಯಗಳಲ್ಲಿರುವ ಪಕ್ಷಗಳ ಒಪ್ಪಿಸಿ ಎಂದಿದ್ದರು. ನಂತರ ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ,ಗೋವಾದ ಬಿಜೆಪಿ ಸರ್ಕಾರವನ್ನು ಕರ್ನಾಟಕದ ಬಿಜೆಪಿಯವರು ಹಾಗೂ ಗೋವಾದ ವಿರೋಧ ಪಕ್ಷ ಕಾಂಗ್ರೆಸ್ಸನ್ನು ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ಸಿನವರು ಒಪ್ಪಿಸುವ ನಿರ್ಧಾರವಾಗಿತ್ತು.
ನಂತರ ಈ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೋವಾ-ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪಾತ್ರ ಬರೆದಿದ್ದರು. ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆಯು ಬಂದಿತ್ತು. ಅವರ ಮಧ್ಯಸ್ಥಿಕೆಯಲ್ಲಿಯೇ ಮಾತುಕತೆ ನಡೆಯಲಿದೆ ಎನ್ನುವ ಸುದ್ದಿಗಳು ಇದ್ದವು.ಈ ನಡುವೆ ಕರ್ನಾಟಕದ ಬಿಜೆಪಿಯ ನಾಯಕರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮಹದಾಯಿ ವಿಷಯಕ್ಕೆ ಭೇಟಿ ಮಾಡಿದ್ದರು.ಆ ಭೇಟಿಯನ್ನೂ ವಿವಾದವಾಗಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ‘ಸಮಸ್ಯೆಯಿರುವುದು ಗೋವಾ ರಾಜ್ಯದ ಜೊತೆ. ರಾಜ್ಯ ಬಿಜೆಪಿಯವರು ಗೋವಾ ಸಿಎಂ ಜೊತೆ ಮಾತನಾಡಲಿ’ ಎಂದು ಖ್ಯಾತೆ ತೆಗೆದಿದ್ದರು. ಆ ನಂತ್ರ ಗೋವಾದಲ್ಲಿ ಚುನಾವಣೆಯ ಕಾವೇರಿತು,ಇತ್ತ ರಾಜ್ಯ ಬಿಜೆಪಿಗೆ ಅದರದ್ದೇ ಆದ ತಲೆ ನೋವು ತಾಪತ್ರಯಗಳಿದ್ದವು. ಇತ್ತೀಚಿಗೆ ಧೂಳು ಕೊಡವಿಕೊಂಡು ಯಡ್ಯೂರಪ್ಪನವರ ನೇತೃತ್ವದಲ್ಲಿ ಶುರುವಾಗಿದ್ದ ಪರಿವರ್ತನಾ ಯಾತ್ರೆಯ ಹುಬ್ಬಳ್ಳಿ ಸಮಾವೇಶದ ಸಮಯದಲ್ಲಿ,Over Enthusiastic ಆದ ಯಡ್ಯೂರಪ್ಪನವರು ಮಹದಾಯಿ ವಿವಾದಕ್ಕೆ ಪರಿಹಾರ ದೊರಕಲಿದೆ,ಗೋವಾದಿಂದ ಸಿಹಿ ಸುದ್ದಿ ತರುತ್ತೇನೆ ಎಂದು ಘೋಷಿಸಿಬಿಟ್ಟರು.ಅತ್ತ ಅಮಿತ್ ಷಾ ಅವರ ಮಧ್ಯಸ್ಥಿಕೆಯಲ್ಲಿ ಗೋವಾ ಸಿಎಂ ಪರಿಕ್ಕರ್,ರಾಜ್ಯದ ಬಿಜೆಪಿ ನಾಯಕರು ನಡೆಸಿದ ಸಂಧಾನ ಸಭೆಯ ಫೋಟೋಗಳು ಬ್ರೇಕಿಂಗ್ ನ್ಯೂಸ್ ಚಾನೆಲ್ಲುಗಳಿಂದ ಹಿಡಿದು ದಿನಪತ್ರಿಕೆಗಳಲ್ಲೂ ಬಂದವು. ಏನೋ ಪವಾಡವಾಗಲಿದೆ ಎಂದು ಬರೆದವು.ಮುಗ್ಧ ರೈತರು,ಹೋರಾಟಗಾರರು ಕಾದು ಕುಳಿತರು, ಕಡೆಗೆ ಪರಿಕ್ಕರ್ ಅವರಿಂದ ಯಡ್ಯೂರಪ್ಪನವರಿಗೆ ಪತ್ರವೊಂದು ಬಂತು. ಕುಡಿಯುವ ನೀರಿನ ವಿಚಾರದಲ್ಲಿ ಮಾತ್ರ ತಾವು ಮಾತುಕತೆಗೆ ಸಿದ್ಧರಾಗಿರುವುದಾಗಿ ಬರೆದಿದ್ದರು. ಸಮ್ಮಿಶ್ರ ಸರ್ಕಾರದ ಏಕೈಕ ಬಿಜೆಪಿಯ ನಾಯಕರಾಗಿ ನಿಜಕ್ಕೂ ಪರಿಕ್ಕರ್ ಹಾಗೂ ಗೋವಾ ಬಿಜೆಪಿ ರಿಸ್ಕ್ ತೆಗೆದುಕೊಂಡೇ ಈ ಪತ್ರ ಬರೆದಿತ್ತು. ಗೋವಾ ಸಿಎಂ ಕರ್ನಾಟಕ ಸಿಎಂಗೆ ಪತ್ರ ಬರೆಯಬೇಕಿತ್ತು ಎಂದು ಖ್ಯಾತೆ ತೆಗೆದ ಕಾಂಗ್ರೆಸ್ಸು ಇತ್ತ ಹೋರಾಟಗಾರರನ್ನು ತಂದು ಬಿಜೆಪಿಯ ಕಚೇರಿ ಎದುರು ಕೂರಿಸಿ,ಅತ್ತ ಗೋವಾ ಕಾಂಗ್ರೆಸ್ಸಿಗೆ ತಿವಿಯಿತು.